
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಕಾರವಾರದಲ್ಲಿ ಶನಿವಾರ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಗುಂಡು ಎಸೆತ ಮತ್ತು ಚಕ್ರ ಎಸೆತ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ತೊಟ್ಟಿಲು ಗುಂಡಿಯ ಶಾಲೆಯ ಶಿಕ್ಷಕ ಸಂತೋಷ್ ನಾಯಕ್ ಗುಂಡು ಎಸೆತದಲ್ಲಿ ಪ್ರಥಮ ಮತ್ತು ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರು ಸತತವಾಗಿ 11 ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಅವರು ಕರ್ತವ್ಯ ನಿರ್ವಹಿಸುವ ಶಾಲೆಗೆ ಮತ್ತು ಯಲ್ಲಾಪುರ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ. ಅವರ ಈ ಸಾಧನೆಗೆ ಬಂದು ಮಿತ್ರರು ಶಿಕ್ಷಕ ವರ್ಗದವರು ಮತ್ತು ಇಲಾಖೆ ಅಧಿಕಾರಿ ಸಿಬ್ಬಂದಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.




