
ಪ್ರತಿಧ್ವನಿ ಯಲ್ಲಾಪುರದ ಸುದ್ದಿಗಳಿಗಾಗಿ ವಾಟ್ಸಪ್ ಗುಂಪಿಗೆ ಸೇರಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಯಲ್ಲಾಪುರ : ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ನಿರಾಕರಿಸಿದ ಘಟನೆಯನ್ನು ಶಾಸಕ ಶಿವರಾಮ ಹೆಬ್ಬಾರ್ ತೀವ್ರವಾಗಿ ರ್ಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡದ್ದು ಸಂವಿಧಾನಾತ್ಮಕ ಮೌಲ್ಯಗಳ ವಿರೋಧವಾಗಿದೆ. ಸರಕಾರ ತಕ್ಷಣ ಈ ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪರೀಕ್ಷಾಧಿಕಾರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಹಾಗೂ ಪರೀಕ್ಷೆಯಿಂದ ವಂಚಿತನಾಗಿರುವ ವಿದ್ಯಾರ್ಥಿಗೆ ಮರು ಪರೀಕ್ಷೆ ಅವಕಾಶ ನೀಡಬೇಕು ಎಂದು ಆಗ್ರಹಿಸುತ್ತೇನೆ.
ಈ ವಿಷಯವನ್ನು ವಿಧಾನಸಭೆಯ ಅಧಿವೇಶದಲ್ಲಿ ಕೂಡ ಎತ್ತಿಹಿಡಿಯಲು ಸಿದ್ಧನಿದ್ದೇನೆ. ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ವ್ಯವಸ್ಥೆಯ ಪುನರ್ ಪರಿಶೀಲನೆಯ ಅಗತ್ಯವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.





Prathidvani Yellapura