Breaking News

ಯಲ್ಲಾಪುರದಲ್ಲಿ ದಿನಕ್ಕೊಂದು ಹಂದಿಸಾವು – ಕಾರಣ ತಿಳಿಯದೆ ಆತಂಕದಲ್ಲಿ ಮೀನು ಮಾರುಕಟ್ಟೆ ವ್ಯಾಪಾರಸ್ಥರು.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಪಟ್ಟಣ ಪಂಚಾಯತ ಅಧೀನದ ಮೀನು ಮತ್ತು ಮಾಂಸ ಮಾರುಕಟ್ಟೆ ಸಮೀಪ ಇತ್ತೀಚೆಗೆ ಪ್ರತಿ ನಿತ್ಯ ಒಂದಾದರು ಹಂದಿ ಸಾವನಪ್ಪುತ್ತಿದ್ದು ಸಾವಿಗೆ ಕಾರಣ ತಿಳಿಯದೆ ವ್ಯಾಪಾರಸ್ಥರು ಆಂತಂಕಕ್ಕೀಡಾಗುತ್ತಿದ್ದಾರೆ.


ಪ್ರಾರಂಭದಲ್ಲಿ ಹಂದಿ ಸಾವಾದಾಗ ಸಹಜ ಸಾವಿರಬಹುದೆಂದು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ ಆದರೆ ಅದೇ ಸಾವು ಪ್ರತಿ ನಿತ್ಯ ಸಂಭವಿಸುತ್ತಿರುವುದು ಆಶ್ಚರ್ಯ ಮತ್ತು ಆತಂಕ ತಂದೊಡ್ಡಿದೆ. ಪ್ರಾಣಿಗಳಲ್ಲಿ ವಿಶೇಷವಾಗಿ ಯಾವುದಾದರು ಹರಡುವ ರೋಗ ಪ್ರಾರಂಭವಾಗಿದೆ ಏನೋ ಎಂಬ ಭಯ ಕಾಡುತ್ತಿದ್ದು ತಜ್ಞರು ಪರಿಶೀಲಿಸಿ ಕಾರಣ ತಿಳಿಯಬೇಕಿದೆ ಹಾಗು ಮಾರುಕಟ್ಟೆ ಸುತ್ತಮುತ್ತಲಿನ ತ್ಯಾಜ್ಯ ತೆಗೆಸಿ ವಾತಾವರಣ ಶುಭ್ರಗೊಳಿಸಬೇಕಿದೆ. ಆರೋಗ್ಯಕರ ಪರಿಸರ ನಮ್ಮದಾಗಬೇಕಿದೆ ಇಲ್ಲವಾದಲ್ಲಿ ನಾನಾ ವಿಧದ ಸಾಂಕ್ರಾಮಿಕ ರೋಗಗಳು ಹರಡುವ ಆತಂಕವಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *