Breaking News

Yearly Archives: 2026

ಪರಿಸರಕ್ಕು ಪೂರಕ ಮನಸ್ಸಿಗು ನೆಮ್ಮದಿ  ಹೂ ಮತ್ತು ಹಣ್ಣಿನಗಿಡಗಳ ಪೋಷಣೆ – ಹಿಮವತಿ ಭಟ್ಟ..

ಪ್ರತಿಧ್ವನಿ ಯಲ್ಲಾಪುರ : ಪ್ರತಿಯೊಬ್ಬರ ಮನೆಗಳಲ್ಲಿ ಹೂವು, ಹಣ್ಣಿನ ಗಿಡಗಳನ್ನು ಬೆಳೆಸುವ ಅಭ್ಯಾಸ ಶ್ರೇಷ್ಠವಾದದ್ದು. ಅದನ್ನು ಪ್ರತಿಯೊಬ್ಬ ಮಹಿಳೆಯರೂ ರೂಢಿಸಿಕೊಳ್ಳಬೇಕು. ಪರಿಸರಕ್ಕೂ ಪೂರಕವಾಗಿರುವುದಲ್ಲದೇ ಮಾನಸಿಕ ನೆಮ್ಮದಿಯ ಜೊತೆ ಆರ್ಥಿಕವಾಗಿ ಮಹಿಳೆಯರಿಗೆ ಸಬಲತೆಯನ್ನು ಉಂಟುಮಾಡುತ್ತದೆ ಎಂದು ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ಟ ಹೇಳಿದರು. ಅವರು, ಶನಿವಾರ ಪಟ್ಟಣದ ಎ.ಪಿ.ಎಂ.ಸಿ.ಯ ಶ್ರೀಮಾತಾ ಟ್ರೇಡಿಂಗ್ ಕಂಪೆನಿ ಆವಾರದಲ್ಲಿ ತ್ರಿಪುರಾಂಬಿಕಾ ಮಹಿಳಾ ಒಕ್ಕೂಟದ ಆಶ್ರಯದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡ ಸಸ್ಯ ಸಂಭ್ರಮ …

Read More »

ಕೊಟ್ಟ ಮಾತಿನಂತೆ ನಡೆದು ಡೊಮಗೇರಿ ಮಕ್ಕಳಿಗೆ ಅಂಗನವಾಡಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಕಳೆದ ವರ್ಷ ಡೋಮಗೇರಿ ಗೌಳಿವಾಡ ಕ್ರಾಸ್ ಬಳಿ ದುರ್ಘಟನೆಯೊಂದು ಸಂಭವಿಸಿತ್ತು. ಡೋಮಗೇರಿ ಅಂಗನವಾಡಿಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಹಿಳೆ ಹಾಗೂ ಮಕ್ಕಳ ಮೇಲೆ ಮರ ಬಿದ್ದು, ಮಹಿಳೆ ಮತ್ತು ಮಕ್ಕಳು ಮೃತಪಟ್ಟ ಅಹಿತಕರ ಘಟನೆ ನಡೆದಿತ್ತು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಶಿವರಾಮ ಹೆಬ್ಬಾರ್ ಅವರು, ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, “ಡೋಮಗೇರಿ ಗೌಳಿವಾಡದಲ್ಲೇ ನೂತನ ಅಂಗನವಾಡಿ …

Read More »

ಪಶ್ಚಿಮಘಟ್ಟದ ಬದುಕು ಕತ್ತಿಯ ಅಲುಗಿನ ಮೇಲಿನ ನಡಿಗೆ -ಎಚ್ಚರ..  ಜನರೇ ಎಚ್ಚರ..!

ಪರಿಸರ ಸೂಕ್ಷ್ಮ ವಲಯಕ್ಕೆ ಹೊಸ ಕರಡು ಅಧಿಸೂಚನೆ 60 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗೆ ಅಹ್ವಾನ ಜಿಲ್ಲೆ ಹಾಗೂ ತಾಲ್ಲೂಕುವಾರುಗಳಾಗಿ ಸ್ಥಳ ಹೆಸರು ಪ್ರಕಟ ಕೇಬಲ್ ನಾಗೇಶ್, ಯಲ್ಲಾಪುರ🖊🖋 ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವ ವಿಚಾರದ ಕುರಿತು ಹೊಸ ಕರಡು ಅಧಿಸೂಚನೆಯೊಂದನ್ನು ಪ್ರಕಟಿಸಿದೆ.ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ವ್ಯಾಪಕ ಪ್ರದೇಶವನ್ನು ಪರಿಸರ …

Read More »

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ ಮಹತ್ವದ ಹೆಜ್ಜೆಯಾಗಿದೆ. ಇಂತಹ ಸಂಘಟನೆ ವೃತ್ತಿಪರರ ಹಕ್ಕುಗಳ ರಕ್ಷಣೆ, ಕೌಶಲ್ಯಾಭಿವೃದ್ಧಿ, ಪರಸ್ಪರ ಸಹಕಾರ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ನೆರವಾಗಲಿದೆ. ನೂತನ ಅಧ್ಯಕ್ಷರಾಗಿ ಹಿರಿಯ ಛಾಯಾಗ್ರಾಹಕ ಗುರುಮೂರ್ತಿ ಗಾಂವ್ಕರ್ ಆಯ್ಕೆಯಾಗಿದ್ದು ಕ್ರಿಯಾಶೀಲ ಛಾಯಾಗ್ರಾಹಕ ಗಣೇಶ್ ಪತ್ತಾರ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಉಳಿದಂತೆ  ಖಜಾಂಚಿಯಾಗಿ ಚಂದ್ರಶೇಖರ ಭಟ್ಟ,ಉಪಾಧ್ಯಕ್ಷರಾಗಿ ವಿನಾಯಕ ಗುಮ್ಮಾನಿ ಸಂಘಟನಾ ಕಾರ್ಯದರ್ಶಿ …

Read More »

ಯಲ್ಲಾಪುರ ಪ್ರಥದರ್ಜೆ ಕಾಲೇಜಿನಲ್ಲಿ SIR ಕುರಿತ ಜಾಗೃತಿ ಕಾರ್ಯಕ್ರಮ.

ಪ್ರತಿಧ್ವನಿ ಯಲ್ಲಾಪುರ : ಮತದಾರರ ಪಟ್ಟಿಯ ಶುದ್ಧತೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಗೆ ಎಸ್‌.ಐ.ಆರ್ ಪ್ರಕ್ರಿಯೆ ಅತ್ಯಂತ ಮಹತ್ವಪೂರ್ಣ ಆಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಬೇಕೆಂದು ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಡಾ,ಆರ್.ಡಿ.ಜನಾರ್ಧನ್ ಹೇಳಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯಲ್ಲಾಪುರದ ಚುನಾವಣಾ ಸಾಕ್ಷರತಾ ಕ್ಲಬ್ (Electoral Literacy Club) ವತಿಯಿಂದ ಹಮ್ಮಿಕೊಂಡ ವಿಶೇಷ ಸಮಗ್ರ …

Read More »

ಯಲ್ಲಾಪುರ ತಾಲೂಕಿನ ಕಿರವತ್ತಿ ಸರ್ಕಾರಿ ಟಿಂಬರ್ ಡಿಪೋದಲ್ಲಿ ಟಿಂಬರ್ ಹರಾಜು.

ಪ್ರತಿಧ್ವನಿ ಯಲ್ಲಾಪುರ : ಗುಣಮಟ್ಟದ ಟಿಂಬರ್ ಗೆ ರಾಜ್ಯದಲ್ಲೆ ಪ್ರಖ್ಯಾತಿ ಪಡೆದ ತಾಲ್ಲೂಕಿನ ಕಿರವತ್ತಿ ಟಿಂಬರ್ ಡಿಪೋ ದಲ್ಲಿ ಪ್ರಸಕ್ತ ಸಾಲಿನ ಟಿಂಬರ್ ಹರಾಜು ಪ್ರಕ್ರಿಯೆಯನ್ನು ಆಗಸ್ಟ್ 1, 3 ಹಾಗೂ 4 ರಂದು ನಡೆಯಲಿದೆ ಎಂದು ಪತ್ರಿಕೆ ಪ್ರಕಟಣೆ ಮೂಲಕ ತಿಳಿದು ಬಂದಿದೆ. ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ MSTC ಇ-ಹರಾಜು ವ್ಯವಸ್ಥೆಯ ಮೂಲಕ ಭಾಗವಹಿಸಿ ಗುಣಮಟ್ಟದ ಟಿಂಬರ್ ಖರೀದಿಸಬಹುದಾಗಿದೆ. ಸಾಗಾ (Teak) ,ಸೀಸಂ,ಕಿಂದಳ ಕಲಂ , ಹೆದ್ದಿ …

Read More »

ಯಲ್ಲಾಪುರದಲ್ಲಿ‌ ನಡೆದ ” ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ “

ಪ್ರತಿಧ್ವನಿ ಯಲ್ಲಾಪುರ : ಮನುಷ್ಯರನ್ನು ಮಾರಾಟ ಮಾಡುವುದು,ಖರೀದಿಸುವುದು,ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅನಧಿಕೃತವಾಗಿ ಕದ್ದೊಯ್ಯುವುದು ಇವೆಲ್ಲವು ಸಹ ಮಹಾಪರಾಧವಾಗಿದೆ.ನಮ್ಮ ದೇಶದ ಕಾನೂನಿನಲ್ಲಿ ಮಾನವ ಕಳ್ಳಸಾಗಣಿಕೆ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ್ ಎಸ್ ಹೇಳಿದರು. ಅವರು ಪಟ್ಟಣದ ವೈಟಿಎಸ್ಎಸ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಲ್ಲಾಪುರ …

Read More »

ಕೈಗಾ ಪರಿಸರದಲ್ಲಿ ಕಲ್ಲು ಕ್ವಾರಿಗೆ ಅನುಮತಿ!! ಪಶ್ಚಿಮ ಘಟ್ಟಗಳ ಸರ್ವನಾಶಕ್ಕೆ ನಡೆದಿದೆಯ ಸಿದ್ದತೆ.?

ಪ್ರತಿಧ್ವನಿ ಯಲ್ಲಾಪುರ : ಪಶ್ಚಿಮ ಘಟ್ಟದ ತಪ್ಪಲಿನಲ್ಲಿ, ಕೈಗಾದಿಂದ ಕೇವಲ 25 ಕಿ.ಮೀ. ದೂರದಲ್ಲಿರುವ ತಳಕೇಬೈಲ ಗಣಿಗಾರಿಕೆಯನ್ನು ಪರಿಸರ ನಾಶದ ಕಾರಣದಿಂದಲೇ ಮುಚ್ಚಲಾಗಿದೆ. ಅದೇ ರೀತಿ, 55 ಕಿ.ಮೀ. ದೂರದಲ್ಲಿರುವ ಬಿಸಗೋಡ ಗಣಿಗಾರಿಕೆಯನ್ನೂ ಪರಿಸರದ ಮೇಲಿನ ದುಷ್ಪರಿಣಾಮಗಳಿಂದ ಸ್ಥಗಿತಗೊಳಿಸಲಾಗಿದೆ. 40 ಕಿ.ಮೀ. ದೂರದಲ್ಲಿರುವ ಕಳಚೆ ಗ್ರಾಮದಲ್ಲಿ ನಿರಂತರ ಭೂಕುಸಿತ ಉಂಟಾಗುತ್ತಿದ್ದು, ಬಂಡೆಗಲ್ಲುಗಳು ರಸ್ತೆಗೆ ಜಾರುತ್ತಿರುವ ಘಟನೆಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿಯೇ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ …

Read More »

ಯಲ್ಲಾಪುರದಲ್ಲಿ ಯಶಸ್ವಿಯಾಗಿ ನಡೆದ “ಅಪರೇಷನ್ ರೈಸ್” – ‘ಸೇ ನೋ ಟು ಡ್ರಗ್ಸ್’

ಪ್ರತಿಧ್ವನಿ ಯಲ್ಲಾಪುರ : ಯುವಜನತೆ ದೇಶದ ನಿಜವಾದ ಆಸ್ತಿ. ಮಾದಕ ವಸ್ತುಗಳ ದುರ್ವ್ಯಸನದಿಂದ ದೂರವಿದ್ದು, ಆರೋಗ್ಯವಂತ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು” ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಕಾರ್ಮಿಕ ಭವನದಲ್ಲಿ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಆಶ್ರಯದಲ್ಲಿ ನಡೆದ  ಮಾದಕ ವಸ್ತುಗಳ ವಿರುದ್ಧ ಸಾರ್ವಜನಿಕ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ “ಅಪರೇಷನ್ …

Read More »

ಮನೆಯೊಂದರ ಸ್ನಾನ ಗೃಹದಲ್ಲಿ ಕಂಡ ನಾಗರ – ಅರಣ್ಯ ಇಲಾಖೆ ಸಿಬ್ಬಂದಿ ಯಿಂದ ರಕ್ಷಣೆ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ತಟಗಾರ್ ಕ್ರಾಸ್ ಸಮೀಪ ಸುನಿಲ್ ಯಲ್ಲಾಪುರಕರ್ ಎಂಬುವರ ಮನೆಯಲ್ಲಿ ನಾಗರ ಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಲಭಿಸುತ್ತಲೆ ಅರಣ್ಯ ಇಲಾಖೆ ಸಿಬ್ಬಂದಿ ಪ್ರಶಾಂತ್ ಎಂಬುವರು ಆಗಮಿಸಿ ನಾಗರಹಾವನ್ನು ಹಿಡಿದು ರಕ್ಷಿಸಿ ಅರಣ್ಯದೊಳಗೆ ಜಾಗ್ರತೆಯಿಂದ ಬಿಟ್ಟರು. ಆತಂಕಗೊಂಡಿದ್ದ ಸುನಿಲ್ ಯಲ್ಲಾಪುರಕರ್ ಕುಟುಂಬದವರು ತಕ್ಷಣ ಸ್ಪಂದಿಸಿ ಆತಂಕ ದೂರ ಮಾಡಿದ ಅರಣ್ಯ ಇಲಾಖೆಗು ವಿಶೇಷವಾಗಿ ಸಿಬ್ಬಂದಿ …

Read More »