Breaking News

Monthly Archives: March 2026

ಆಧುನಿಕ ಭಗೀರಥ ಶಾಸಕ ಹೆಬ್ಬಾರ್ ಬೊಮ್ಮನಳ್ಳಿ ನೀರು ತರುವ ಪ್ರಯತ್ನ – ನಿರಂತರ ಪೈಪ್ ಲೈನ್ ಕಾಮಗಾರಿ..

ಕೇಬಲ್‌ ನಾಗೇಶ್..🖋 ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಆಧುನಿಕ ಭಗೀರಥ ಎಂದೇ ಕರೆಯಬೇಕಿದೆ. ಕಾರಣ ಹಿಡಿದ ಪಟ್ಟು ಸಡಿಲಿಸದೆ ಸರ್ಕಾರ ಮಟ್ಟದಲ್ಲಿ ನಿರಂತರ ಪ್ರಯತ್ನಸಿ ಕೋಟ್ಯಾಂತರ ಹಣ ತಂದು ಕೆರೆಗಳಿಗೆ ನೀರು ತುಂಬುವ ಯೋಜನೆ ಅನುಷ್ಟಾನಗೊಳಿಸಿ ಬಯಲು ಸೀಮೆ ಪ್ರದೇಶವೆಲ್ಲಾ ಹಸಿರಾಗಿ ಕಂಗೊಳಿಸುವಂತೆ ಮಾಡಿದ್ದಾಗಿದೆ.   ಇದೀಗ ಯಲ್ಲಾಪುರ ಪಟ್ಟಣದ ಭವಿಷ್ಯದ ಚಿಂತನೆಯಲ್ಲಿ ದೂರದ ಬೊಮ್ಮನಹಳ್ಳಿ ವಾಟರ್ ಪ್ರಾಜೆಕ್ಟ್ ಅನುಷ್ಠಾನ ಗೊಳಿಸುತ್ತಿದ್ದು …

Read More »

ಭರಣಿ ಕಾಶಿ ವಿಶ್ವನಾಥ ಮಂದಿರಕ್ಕೆ ಸಂಸದ ಕಾಗೇರಿ ಭೇಟಿ.

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಶಕ್ತಿಶಾಲಿ ಶೈವ ಕ್ಷೇತ್ರ ಭರಣಿ ಶ್ರೀ ಕಾಶಿ ವಿಶ್ವನಾಥ ಮಂದಿರಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಟಿ ನೀಡಿ ಕಾಶಿ ವಿಶ್ವನಾಥನ ದರ್ಶನ ಪಡೆದರು . ದೇವಸ್ಥಾನಕ್ಕೆ ಸರಕಾರದಿಂದ ಅನುದಾನ ನೀಡುವ ಭರವಸೆ ನೀಡಿದರು ಮತ್ತು ಧರ್ಮದರ್ಶಿಗಳಾದ  ಎ .ಜಿ .ನಾಯ್ಕ ಭರಣಿ ಯವರ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಈ ಸಂಧರ್ಭದಲ್ಲಿ ಯಲ್ಲಾಪುರ ತಾಲೂಕ ಪಂಚಾಯತ …

Read More »

ಓದಿನಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು – ಹರಿಪ್ರಕಾಶ್ ಕೋಣೆಮನೆ

ಪ್ರತಿಧ್ವನಿ ಯಲ್ಲಾಪುರ: ಓದಿನಷ್ಟೇ ಕ್ರೀಡಗೂ ಮಹತ್ವ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿದ್ದ ಪ್ರತಿಭೆಯನ್ನು ಗುರುತಿಸಬೇಕು ಎಂದು ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಹೇಳಿದರು. ವಿಶ್ವದರ್ಶನ ಬಿಸಿಎ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿದರೂ ಅದನ್ನು ಚೆನ್ನಾಗಿ ಮಾಡುವ ತಂಡ ವಿಶ್ವದರ್ಶನದಲ್ಲಿ ಇರುವುದರಿಂದ ನಾವು ಯಶಸ್ವಿಯಾಗುತ್ತಿದ್ದೇವೆ . ಕ್ರೀಡಾ ಮನೋಭಾವದಿಂದ ಆಟವಾಡಬೇಕು ಕ್ರೀಡೆಯ ಮೂಲಕ ವಿದ್ಯಾರ್ಥಿಗಳು …

Read More »

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರ ಖಾತೆಗೆ ಎರಡನೇ ಕಂತಿನ ಬೆಳೆ ವಿಮೆ ಜಮೆ ಆರಂಭ.

ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ‘ಹವಾಮಾನ ಆಧಾರಿತ ಬೆಳೆ ವಿಮೆ’ಯ ಎರಡನೇ ಕಂತಿನ ಮೊತ್ತವು ಯುಗಾದಿ ಹಬ್ಬದ ಈ ಶುಭ ಸಂದರ್ಭದಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಪ್ರಾರಂಭವಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಬಾಕಿ ವಿಮಾ ಮೊತ್ತವು ಈಗ ಅರ್ಹ ಫಲಾನುಭವಿ ರೈತರಿಗೆ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದು, ನೇರ ನಗದು ವರ್ಗಾವಣೆ (DBT) ಮೂಲಕ ಪ್ರಕ್ರಿಯೆ ಮುಂದುವರಿಯಲಿದೆ. …

Read More »

ಯಲ್ಲಾಪುರದಲ್ಲೊಂದು ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೆ ಸಾವು- ಹಿಂಬದಿ ಸವಾರನಿಗೆ ಗಂಭೀರ ಗಾಯ.

ಪ್ರತಿಧ್ವನಿ ಯಲ್ಲಾಪುರ : ಪಟದಟಣದ ಹೊರವಲಯ ಮಗೋಡು ಕ್ರಾಸ್ ಸಮೀಪ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು. ಲಾರಿ ನಿಲ್ಲಿಸದೆ ಸ್ಥಳದಿಂದ ಕಾಲ್ಕಿತ್ತ ಲಾರಿ ಚಾಲಕನ ಮೇಲೆ ದೂರು ದಾಖಲಾಗಿದೆ. ಅಂಕೊಲಾ ತಾಲೂಕಿನ ಹಳವಳ್ಳಿ ನಿವಾಸಿ ದೇವೇಂದ್ರ ಸೀತಾರಾಮ ಗೌಡ ( 21) ಎಂಬಾತನೆ‌ ಮೃತ ಬೈಕ್ ಸವಾರನಾಗಿದ್ದು ಕಳಚೆ ನಿವಾಸಿ ವಿಜೇತ ಪ್ರೇಮಾನಂದ ಗೌಡ‌ನೆ …

Read More »

ತೋಟಗಾರಿಕ ಇಲಾಖೆ ಪರಿಸರದಲ್ಲಿ ಮಕರಂದ ಕ್ರೂಡಿಕರಣ – ನೂರಾರು ಜೇನಿನ ಪೆಟ್ಟಿಗೆಗಳ ಅನಾವರಣ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ನಾಯ್ಕನ ಕೆರೆ ಬಳಿ ಇರುವ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ,ಮಾವಿನ ತೋಟದ ನಡುವೆ ನೂರಾರು ಸಂಖ್ಯೆಯಲ್ಲಿ ಜೇನಿನ ಪೆಟ್ಟಿಗೆ ಇಟ್ಟಿದ್ದು ಮಕರಂದ ಕ್ರೂಡಿಕರಣದ ಜೇನಿನ ಕೃಷಿ ಸಾಗಿದೆ. ತಾಲೂಕಿನ ದೋಣಗಾರದ ನಿವಾಸಿ ತಿಮ್ಮಣ್ಣ ಭಟ್ ಈ ಜೇನಿನ ಕೃಷಿಯಲ್ಲಿ ತೊಡಗಿದವರಾಗಿದ್ದು ತೋಟಗಾರಿಕ ಇಲಾಖೆಗೆ ಜೇನಿನ ಗೂಡುಗಳನ್ನು ಒದಗಿಸುವ ಅಧಿಕೃತ ಸರಬರಾಜುದಾರರಾಗಿ ಕಾರ್ಯ ನಿರ್ವ ಹಿಸುತ್ತಿದ್ದಾರೆ. ಸದ್ಯ ಯಲ್ಲಾಪುರದ ತೋಟಗಾರಿಕಾ ಕ್ಷೇತ್ರದಲ್ಲಿ200 ಕ್ಕು ಅಧಿಕ ಜೇನಿನ ಪೆಟ್ಟಿಗೆ …

Read More »

ಯಲ್ಲಾಪುರದಲ್ಲಿ ಮುಗಿಲು ಮುಟ್ಟಿದ ಹಿಂದು ಧರ್ಮದ ಜಯಘೋಷ- ವಿಜ್ರಂಭಣೆಯಿಂದ ಜರುಗಿದ ಯುಗಾದಿ ಉತ್ಸವದ ಶೋಭಾಯಾತ್ರೆ.

ಪ್ರತಿಧ್ವನಿ ಯಲ್ಲಾಪುರ : ಹಿಂದು ಧರ್ಮದ ನೂತನ ವರ್ಷಾರಂಭ ಯುಗಾದಿ ಯಿಂದ ಪ್ರಾರಂಭ ಅದಕ್ಕೆ ಯಲ್ಲಾಪುರದಲ್ಲಿ ವಿಜ್ರಂಭಣೆಯ ಆಚರಣೆ ನಡೆಯುತ್ತಾ ಬಂದಿದೆ. ಅದರಂತೆ ಮಾ,19,ಗುರುವಾರ ಯುಗಾದಿ ಉತ್ಸವ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಿತು. ಚಂಡೆಯ ಝಲಕ್ ಝಾಂಜ್ ನ ಹೊಡೆತ ಗೊಂಬೆಗಳ ಕುಣಿತ ಭಜನಾ ತಂಡದ ಭಕ್ತಿ ನೃತ್ಯ ಛದ್ಮ ವೇಷದ ಸೊಬಗು ಊರಿನ ತುಂಬಾ ಕೇಸರಿ ಕಲರವ,ಮಾವಿನ ತೋರಣ ವಿದ್ಯುತ್ ದೀಪಾಲಂಕಾರದ ವೈಭವ, ಚಂಡೆಯ ನಿನಾದ,ಡಿ.ಜೆ ಸದ್ದು,ಝಾಂಜ್,ಪತಾಕೆಗಳ ಆರ್ಭಟ ವಿವಿಧ …

Read More »

ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? ಇಲ್ಲಿದೆ ಅದಕ್ಕೆ ಸರಿಯಾದ ಮಾಹಿತಿ.

ಬೆಳಗಿನಿಂದ ಅನೇಕರದ್ದು ಒಂದೇ ಪ್ರಶ್ನೆ – ‘ಈ ಸಂವತ್ಸರಕ್ಕೆ ‘ಪರಾಭವ’ ಎಂಬ ಹೆಸರೇಕೆ ? ಪರಾಭವ ಅಂದ್ರೆ ಸೋಲು ಅಂತ ಅರ್ಥವಲ್ಲವೇ? ಯಾಕೋ ಯುಗಾದಿ ಶುಭಾಶಯ ಹೇಳುವಾಗ ಕಸಿವಿಸಿ ಆಗುತ್ತದೆ.’ ನಿಜ, ‘ಪರಾಭವ’ ಎಂದರೆ ನಮಗೆ ‘ಸೋಲು’ ಅಥವಾ ‘ಅವಮಾನ’ ಎಂಬ ಅರ್ಥವೇ ಮೊದಲು ನೆನಪಾಗುತ್ತದೆ. ಆದರೆ ಸಂಸ್ಕೃತದಲ್ಲಿ ಮತ್ತು ಜ್ಯೋತಿಷ್ಯ ಶಾಸ್ತ್ರದ ಈ ಹೆಸರಿನಲ್ಲಿ ಅಡಗಿರುವ ಅರ್ಥವೇ ಬೇರೆ. ಹಿಂದೂ ಕಾಲಗಣನೆಯ 60 ಸಂವತ್ಸರಗಳಲ್ಲಿ ‘ಪರಾಭವ’ ಎಂಬುದು 40ನೇ …

Read More »

ಪರಮಪೂಜ್ಯ “ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳಿಂದ ದತ್ತ ಮಂದಿರದಲ್ಲಿ ಆಶಿರ್ವಚನ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ದತ್ತ ಮಂದಿರ ಪರಿಸರದಲ್ಲಿ ನೂರಾರು ದೇವತೆಗಳು ಆವಾಸರಾಗಿರುತ್ತಾರೆ. ದತ್ತಗುರುವಿನ ಸೇವೆ ಜನ್ಮ ಪಾವನ ಮತ್ತು ಸಾಕ್ಷಾತ್ಕಾರಕ್ಕೆ ದಾರಿದೀಪವಾಗಿದೆ. ಪರಸ್ಥಳದಿಂದ ದತ್ತನ ದರ್ಶನಕ್ಕೆ ಭಕ್ತರು ಯಲ್ಲಾಪುರದ ದತ್ತಮಂದಿರಕ್ಕೆ ಬರುವಂತಾಗಬೇಕು ಎಂದು ರಾಮಚಂದ್ರಾಪುರ ಮಠದ ಪರಮ ಪೂಜ್ಯ ರಾಘವೇಶ್ವರ ಭಾರತೀ ಸ್ವಾಮಿಗಳು ಆಶಿರ್ವಚನ ನೀಡಿದರು. ಅವರು ಪಟ್ಟಣದ ದತ್ತ ಮಂದಿರದಲ್ಲಿ ಬುಧವಾರ ನಡೆದ ಸೇವಾಶಿರ್ವಾದ ಕಾರ್ಯಕ್ರಮದಲ್ಲಿ ದಿವ್ಯ ಉಪಸ್ಥಿತಿ ವಹಿಸಿ ಆಶಿರ್ವಚನ ನೀಡಿದರು. ದತ್ತಮಂದಿರದ ನೂತನ ಕ್ರಿಯಾ …

Read More »

ನಾಡುಕಂಡ ಹಿರಿಯ ಮತ್ತು ಶ್ರೇಷ್ಠ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರ ಜನುಮ ದಿನಕ್ಕೆ ಶುಭ ಕೋರಿದ ಅತ್ಯಾಪ್ತ  ಬಾಬು ಸಿದ್ದಿ ಮತ್ತು ತಂಡ.

ಪ್ರತಿಧ್ವನಿ ಯಲ್ಲಾಪುರ : ನಾಡಿನ ಹಿರಿಯ ಮತ್ತು ಶ್ರೇಷ್ಠ ರಾಜಕಾರಣಿ ಹಳಿಯಾಳ ಕ್ಷೇತ್ರದ ಶಾಸಕ ಮಾಜಿ ಮಂತ್ರಿ ಹಾಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರ ಜನುಮ ದಿನಕ್ಕೆ ಅವರ ಅತ್ಯಾಪ್ತ ಕಟ್ಟಾ ಕಾಂಗ್ರೆಸ್ಸಿಗ ಸಿದ್ದಿ ಬುಡಕಟ್ಟು ಸಮುದಾಯದ ಮುಖಂಡ ಕಿರವತ್ತಿಯ ಬಾಬು ಸಿದ್ದಿ ಮತ್ತು ತಂಡ ದೇಶಪಾಂಡೆ ಅವರ ನಿವಾಸದಲ್ಲಿ ಭೇಟಿಮಾಡಿ ಹೂಮಾಲೆ ಹಾಕಿ ಹುಟ್ಟು ಹಬ್ಬದ ಶುಭಾಶಯ ಕೋರಿ ಸಂಭ್ರಮಿಸಿದರು. ಆರ್.ವಿ.ದೇಶಪಾಂಡೆ ಅವರಿಗೆ ಯಲ್ಲಾಪುರದ ಬಾಬು …

Read More »