Breaking News

ಅನಂತ ಮೂರ್ತಿ ಟ್ರಸ್ಟ್ ವತಿಯಿಂದ ಯಲ್ಲಾಪುರದಲ್ಲಿ ಕೊನೆ ಗೌಡರಿಗೆ ಉಚಿತ ಜೀವೇವಿಮೆ ಕಾರ್ಯ ಪ್ರಾರಂಭ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು. ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾದ ಟಿ.ವಿ. ಹೆಗಡೆ ಮಾತನಾಡಿ, ಇದೊಂದು ಮಹತ್ವದ ಅತೀ ಅವಶ್ಯ ಕಾರ್ಯಕ್ರಮ, ಯಾರೂ ಕೂಡ ಬೇಕಂತೆ ಮರದಿಂದ ಬೀಳುವುದಿಲ್ಲ, ಅಥವಾ ಬೀಳಲಿ ಅಂತ ತೋಟದ ಮಾಲೀಕರು ಮರ ಹತ್ತಿಸುವುದಿಲ್ಲ, ಅಪಾಯ ಆದಾಗ ರಕ್ಷಣೆ ಅತ್ಯವಶ್ಯ, ಅನಂತ ಮೂರ್ತಿ ಹೆಗಡೆಯವರಿಗೆ ಅಭಿನಂದನೆ, ಮುಂದಿನ ವರ್ಷ ವಿಮೆ ಕಂತನ್ನು ನಾವೇ ತುಂಬಲು ಪ್ರಯತ್ನ ಮಾಡೋಣ ಎಂದರು.

ನಂತರ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ ಎಲ್ಲರೂ ಸುಖವಾಗಿರಲಿ ಎಂದು ನಾವೇ ಕಂತನ್ನು ಪಾವತಿಸಿ, ಪಾಲಿಸಿ ಪ್ರಾರಂಭ ಮಾಡಿದ್ದೇವೆ, ನನ್ನ ಆದಾಯದ ಒಂದು ಭಾಗ ಹಣವನ್ನು ಸಮಾಜಕ್ಕೆ ಮೀಸಲಿಟ್ಟಿದ್ದೇನೆ. ಸಮಾಜದಲ್ಲಿ ಎಲ್ಲರೂ ಪ್ರೀತಿಯಿಂದ ಅನ್ಯೋನ್ಯವಾಗಿ ಸಹೋದರರಂತೆ ಬದುಕಬೇಕು.

ಅನಾಹುತವಾದರೆ ಯಾವುದೇ ಕಾರಣಕ್ಕೂ ಕೊನೆ ಗೌಡರ ಕುಟುಂಬ ಬೀದಿಗೆ ಬರಬಾರದು, ಅವರಿಗೆ ಸಮಸ್ಯೆ ಆಗಬಾರದು. ಅವಘಡ ಆದಾಗ ಅಡಿಕೆ ತೋಟದ ಮಾಲೀಕರಿಗೂ ಕೂಡ ಕೊನೆ ಗೌಡರ ಜೀವನಾಂಶ ಕೊಡುವುದು ಕಷ್ಟವಾಗುತ್ತದೆ, ಅದಕ್ಕೆ ಯಾರಿಗೂ ಸಮಸ್ಯೆ ಬೇಡ ಅಂತ ಪೋಸ್ಟ್ ಆಫೀಸ್ ಮುಖಾಂತರ ಜೀವವಿಮೆ ಪ್ರಾರಂಭ ಮಾಡಿದ್ದೇನೆ. ಇದಕ್ಕೆ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಪ್ರೇರಣೆ ಎಂದರು. ಮುಂದಿನ‌ ದಿನದಲ್ಲಿ ಯಲ್ಲಾಪುರ ತಾಲೂಕು ಕೊನೆಗೌಡರ ಸಮ್ಮೇಳನ ನಡೆಸಿ ಹಿರಿಯ ಕೊನೆ ಗೌಡರ ಕುಟುಂಬಕ್ಕೆ ಸನ್ಮಾನ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ಗಣಪತಿ ಭಟ್ ನಿರೂಪಿಸಿದರು. ಈ ಸಂಧರ್ಭದಲ್ಲಿ ಇಲ್ಲಿನ 50 ಕ್ಕೂ ಹೆಚ್ಚು ಕೊನೆಗೌಡರಿಗೆ ಜೀವವಿಮೆ ಮಾಡಿಸಲಾಯಿತು.

ಕೊನೆಗೌಡರ ಉಚಿತ ವಿಮೆಯಲ್ಲಿ ಏನಿದೆ:
ಅನಂತಮೂರ್ತಿ ಹೆಗಡೆ ಟ್ರಸ್ಟ್ ನವರು ಪಾಲಿಸಿ ಪ್ರೀಮಿಯಂ ಕಂತನ್ನು ಅವರೇ ಪಾವತಿಸಿ, ಇಂಡಿಯನ್ ಪೋಸ್ಟ್ ನ ಯೋಜನೆಯಾದ ಗ್ರೂಪ್ ಆಕ್ಸಿಡೆಂಟ್ ಗಾರ್ಡ್ ಪಾಲಿಸಿಯನ್ನು ಎಲ್ಲ ಕೊನೆಗೌಡರಿಗೂ ಮಾಡಿಸುವ , ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈ ಆಕ್ಸಿಡೆಂಟ್ ಗಾರ್ಡ್ ಪಾಲಿಸಿಯು, ಅಪಘಾತದಿಂದ ಮರಣ /ಶಾಶ್ವತ ಅಂಗವೈಕಲ್ಯ /ಭಾಗಶಃ ಅಂಗವೈಕಲ್ಯಕ್ಕೆ 10,00,000 ರೂಪಾಯಿಗಳ ಕವರೇಜ್ ಹೊಂದಿದೆ. ಮತ್ತು ಈ ಪಾಲಿಸಿಯಡಿಯಲ್ಲಿ ರೂ 60,000 ವರೆಗೆ ಒಳರೋಗಿ ವೆಚ್ಚ, ರೂ 30,000 ವರೆಗೆ ಹೊರರೋಗಿ ವೆಚ್ಚ, 10 ದಿನಗಳವರೆಗೆ ರೂ 1,000 ದೈನಂದಿನ ಆಸ್ಪತ್ರೆ ನಗದು ನೆರವು, ಮೃತರ 2 ಮಕ್ಕಳಿಗೆ 1 ಲಕ್ಷ ರೂಪಾಯಿ ಶೈಕ್ಷಣಿಕ ನೆರವು, ರೂ 25,000 ವರೆಗೆ ಕುಟುಂಬ ಸಾರಿಗೆ ಪ್ರಯೋಜನ ಮತ್ತು ರೂ 5000 ವರೆಗೆ ಅಂತಿಮ ಸಂಸ್ಕಾರದ ನೆರವಿನ ಸೌಲಭ್ಯವನ್ನು ಹೊಂದಿದೆ. ಜಿಲ್ಲೆಯಾದ್ಯಂತ ಎಲ್ಲ ಕೊನೆಗೌಡರಿಗೆ ಈ ಪಾಲಿಸಿಯನ್ನು ಮಾಡಿಸುವ ಸಂಕಲ್ಪವನ್ನು ಅನಂತಮೂರ್ತಿ ಮಾಡಿದ್ದಾರೆ. ಇದರ ಸದುಪಯೋಗ ಎಲ್ಲರೂ ಜಿಲ್ಲೆಯ ಎಲ್ಲರೂ ಬಳಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ :- 94483 17709

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *