
ಕೇಬಲ್ ನಾಗೇಶ್, ಯಲ್ಲಾಪುರ..🖋
ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನತಾ ಪಾರ್ಟಿಯ ಎಸ್ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ದಿ ಆಯ್ಕೆಯಾಗಿದ್ದು ಅನೇಕ ಗಣ್ಯರು ಸಂಸದರು ಶುಭ ಕೋರಿದ್ದಾರೆ.
ಒಂದು ರಾಷ್ಟ್ರೀಯ ಪಕ್ಷದ ಅದರಲ್ಲು ಕೇಂದ್ರದಲ್ಲಿ ಈಗಾಗಲೆ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಪಕ್ಷದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಲಭಿಸುವುದೆಂದರೆ ಹುಡುಗಾಟದ ಮಾತಲ್ಲ. ಈ ಸ್ಥಾನ ಲಭಿಸಲು ಪಕ್ಷಕ್ಕಾಗಿ ಹಗಲಿರುಳು ದುಡಿದು,ಸಂಘಟನೆಯ ಜವಾಬ್ದಾರಿ ಹೆಗಲಿಗೆ ಹೊತ್ತು ಅವಿರತವಾಗಿ ಶ್ರಮಿಸುತ್ತಾ. ರಾಷ್ಟ್ರ ನಾಯಕರ ಗಮನ ಸೆಳೆದು ಇಂತಹ ಜವಾಬ್ದಾರಿ ಸ್ಥಾನ ಪಡೆಯಲು ಸಾಧನೆ ಇರಬೇಕು.

ವನವಾಸಿ,ಬುಡಕಟ್ಟು,ದಮನಿತರ ಧ್ವನಿಯಾಗಿ ಸರಳ ವ್ಯಕ್ತಿತ್ವ ಮತ್ತು ಪಕ್ಷ ನಿಷ್ಟೆ ಹಾಗು ಅವಿರತ ಶ್ರಮ ಪಕ್ಷದ ಅತ್ಯುನ್ನತ ಜವಾಬ್ದಾರಿ ಸ್ಥಾನ ಲಭಿಸಿದೆ.
ಶಾಂತಾರಾಮ್ ಸಿದ್ದಿ ಅವರ ಸಮರ್ಥ ನೇತೃತ್ವದಲ್ಲಿ ಪಕ್ಷವು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಸದೃಢವಾಗಿ ಬೆಳೆಯಲಿ ಹಾಗೂ ಮುಂಬರುವ ದಿನಗಳಲ್ಲಿ ಅವರು ಇನ್ನೂ ಉನ್ನತ ಜವಾಬ್ದಾರಿಗಳನ್ನು ಅಲಂಕರಿಸುವಂತಾಗಲಿ ಎಂದು ಆಶಿಸುತ್ತೇನೆ. ಜನಪರ ಕಾಳಜಿಯ ಅವರ ಈ ಯಶಸ್ವಿ ಪಯಣ ನಿರಂತರವಾಗಿ ಸಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತಾ ಅವರಿಗೆ ಶುಭ ಕೋರುತ್ತೇನೆ.
ವಿಶ್ವೇಶ್ವರ ಹೆಗಡೆ ಕಾಗೇರಿ
ಸಂಸದರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರ









Prathidvani Yellapura