Breaking News

ಭರಣಿ ಶ್ರೀ ಕಾಶಿ ವಿಶ್ವನಾಥ ಮಂದಿರದಲ್ಲಿ ಜೂ, 22 ಸೋಮವಾರ   ವಿಶೇಷ ಪೂಜೆ ಅನ್ನಸಂತರ್ಪಣೆ.

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಶಿವ ಶಕ್ತಿ ಪೀಠಗಳಲ್ಲಿ ಒಂದಾದ ” ಭರಣಿ ಶ್ರೀ ಕಾಶಿ ವಿಶ್ವನಾಥ ” ದೇಗುಲದಲ್ಲಿ ದಿನಾಂಕ 22 ರ ಸೋಮವಾರ ಸತ್ಸಂಗ ಭಜನೆ ವಿಶೇಷ ಪೂಜೆ ಹಾಗು ಅನ್ನ ಸಂತರ್ಪಣೆ ನೆರವೇರುತ್ತಿದ್ದು ಶ್ರೀಮತಿ ಲತಾ ಮತ್ತು ಶ್ರೀ ಸಂತೋಷ ಎನ್ ನಾಯ್ಕ ತೋಟಗದ್ದೆ ಇವರ ಸೇವಾರ್ಥದಲ್ಲಿ ಜರುಗಲಿದೆ.

ಸಂಜೆ 7-30 ರಿಂದ ಶ್ರೀ ಕಾಶಿ ವಿಶ್ವನಾಥ ಭಜನಾ ಮಂಡಳಿ ಭರಣಿ ಇವರಿಂದ ಭಜನೆ ನೆಡೆಯಲಿದೆ ಸತ್ಸಂಗದಲ್ಲಿ ದಾನಿಗಳು ಸಾಮಾಜಿಕ ಕಾರ್ಯಕರ್ತರು ಕಾಮಧೇನು ಜ್ಯುವೆಲ್ಲರ್ಸ್ ನ ಮಾಲಿಕರಾದ ಪ್ರಕಾಶ ಪಾಲನ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ನಂತರ ಅನ್ನ ಸಂತರ್ಪಣೆ ನಡೆಯಲಿದೆ ಸರ್ವರಿಗೂ ಭಕ್ತಿಪೂರ್ವಕ ಸ್ವಾಗತ- ಶ್ರೀ ಎ. ಜಿ.ನಾಯ್ಕ, ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಧರ್ಮದರ್ಶಿಗಳು ಭರಣಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಅಪ್ರಾಪ್ತರ ಬೈಕ್ ಚಾಲನೆಗೆ ಬಿಸಿ ಮುಟ್ಟಿಸುತ್ತಿದೆ ಯಲ್ಲಾಪುರ ಪೊಲೀಸ್ ಇಲಾಖೆ.

ಪ್ರತಿಧ್ವನಿ ಯಲ್ಲಾಪುರ : ಅಪ್ರಾಪ್ತ ವಯಸ್ಸಿನ ಮಕ್ಕಳು ಬೈಕ್ ಚಲಾಯಿಸುವ ಹುಚ್ಚಿಗೆ ಯಲ್ಲಾಪುರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿದ್ದು ಮತ್ತೆ …

Leave a Reply

Your email address will not be published. Required fields are marked *