
ಪ್ರತಿಧ್ವನಿಯಲ್ಲಾಪುರ : ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತಿ ಮುಖ್ಯ. ಬೆಳೆಯುತ್ತಿರುವ ಜಗತ್ತಿನ ಜೊತೆಯಲ್ಲಿ ಹೊಸ ಹೊಸ ರೀತಿಯಲ್ಲಿ ಅಪರಾಧಗಳು ಬೆಳೆಯುತ್ತಿವೆ ಅದಕ್ಕೆ ಕಡಿವವಾಣ ಹಾಕಲೇಬೇಕು. ವಿಶೇಷವಾಗಿ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ವಿಶೇಷ ಕಾನೂನು ಜಾರಿಯಲಿದ್ದು ಅವುಗಳ ಮಾಹಿತಿಯನ್ನು ವಿದ್ಯಾರ್ಥಿ ದಿಸೆಯಲ್ಲಿ ತಿಳಿದುಕೊಂಡರೆ ಭವಿಷ್ಯದಲ್ಲಿ ಉಪಯುಕ್ತವಾಗಲಿದೆ ಎಂದು ಯಲ್ಲಾಪುರ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ರೇಖಾ ಹೇಳಿದರು.

ಅವರು ಪಟ್ಟಣದ ಮಾಡೆಲ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಮ್ಮಿಕೊಂಡು ಕಾನೂನಿನ ಅರಿವು ಮೂಡಿಸುವ ಕುರಿತು ಮಾತನಾಡಿದರು.

ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಹಾಜರಿದ್ದ ಹೆಣ್ಣು ಮಕ್ಕಳಿಗೆ pocso ಕಾಯ್ದೆ, ಮಕ್ಕಳ ಸುರಕ್ಷತೆ, ಸೈಬರ್ ಅಪರಾಧಗಳು, ಸಂಚಾರಿ ನಿಯಮಗಳು, ಮೊಬೈಲ್ ಪರಿಣಾಮ, 112 ಬಗ್ಗೆ ತಿಳಿಸಿ ಜಾಗೃತಿ ಮೂಡಿಸುವ ಕಾರ್ಯವಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವರ್ಗ ಯಲ್ಲಾಪುರ ಪೊಲೀಸ್ ಠಾಣ ಸಿಬ್ಬಂದಿ ಉಪಸ್ಥಿತರಿದ್ದರು.












Prathidvani Yellapura