Breaking News

ಯಲ್ಲಾಪುರ ಗಣಪತಿ ಗಲ್ಲಿ ಅಂಗನವಾಡಿ ಕೇಂದ್ರಕ್ಕೆ ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ್ ಬೇಟಿ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೆ ಇರುವ ಗಣಪತಿಗಲ್ಲಿ ಅಂಗನವಾಡಿ  ಕೇಂದ್ರಕ್ಕೆ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ದೇವಿದಾಸ (ಉಲ್ಲಾಸ)ನಾಗೇಶ್ ಶಾನಭಾಗ ಭೇಟಿ ನೀಡಿ ಪರಿಶೀಲಿಸಿದರು.


ಮಕ್ಕಳಿಗೆ ನೀಡುತ್ತಿರುವ ಆಹಾರ ಮತ್ತು ಪಾಟ,ಪಾಠ ಹಾಗು ಆರೋಗ್ಯದ ಕುರಿತು ಸಿಬ್ಬಂದಿಯೊಂದಿಗೆ ಮಾತನಾಡಿ ಮಾಹಿತಿ ಪಡೆದರು. ಅಂಗನವಾಡಿ ಪರಿಸರವನ್ನು ಶುಚಿಯಾಗಿಟ್ಟುಕೊಂಡು ಮಕ್ಕಳಿಗೆ ಉತ್ತಮ ಆಹಾರ ಹಾಗು ಆಟಪಾಠಗಳನ್ನು ಅಚ್ಚುಕಟ್ಟಾಗಿ ಹೇಳಿಕೊಡುತ್ತಿರುವ ಶಿಕ್ಷಕಿ ಮಂಜುಳ ವಿ ನಾಯ್ಕ್ ಹಾಗು ಸಹಾಯಕಿ ಅರ್ಚನ ಆರ್ ಪೂಜಾರಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗು ಕೆಲವು ಸಲಹೆ ಸೂಚನೆಗಳನ್ನು ನೀಡಿದರು.


ಈ ಸಂದರ್ಭದಲ್ಲಿ ಯಲ್ಲಾಪುರ, ಸಿ.ಡಿ.ಪಿ.ಒ ಇಮಲಪ್ಪಾ ಸಹ ಜೊತೆಯಲ್ಲಿ ಇದ್ದರು.


ಮನೆಯೆ ಮೊದಲ ಪಾಠಶಾಲೆ ತಾಯಿಯೆ ಮೊದಲ ಗುರು ಎಂಬ ಮಾತು ಎಷ್ಟು ಸಮಂಜಸವೋ ಹಾಗೆ ಇದರ ನಂತರ ನಮ್ಮ ವಿದ್ಯಾಭ್ಯಾಸ ಅಕ್ಷರ ಕಲಿಕೆಯ ದೇಗುಲ ಎಂದರೆ ಅದು ಅಂಗನವಾಡಿ ಮಕ್ಕಳ ಬುದ್ದಿಯನ್ನು ಮತ್ತು ಚಟುವಟಿಕೆಗಳನ್ನು ಚುರುಕಾಗಿಸುವ ಮೊಲ ಕೇಂದ್ರ ಹಾಗಾಗಿ ಅಂಗನವಾಡಿ ವ್ಯವಸ್ಥೆ ಮೇಲೆ ನಮ್ಮ ಸರ್ಕಾರ ವಿಶೇಷ ನಿಗಾ ವಹಿಸುತ್ತಿದೆ.ಮಕ್ಕಳ ಆರೋಗ್ಯ,ಆಹಾರ,ಆಟ,ಪಾಠದ ಕಡೆಗೆ ಅಂಗನವಾಡಿ ನಿರ್ವಹಣೆ ಮಾಡುವವರು ಹೆಚ್ಚಿನ ಗಮನಹರಿಸಬೇಕಿದೆ ಆ ನಿಟ್ಟಿನಲ್ಲಿ ಗಣಪತಿ ಗಲ್ಲಿ ಅಂಗನವಾಡಿ ಭೇಟಿ ನೀಡಿದ್ದು ವ್ಯವಸ್ಥೆ ಅಚ್ಚುಕಟ್ಟಾಗಿ ಇಟ್ಟಿದ್ದಾರೆ.
ದೇವಿದಾಸ (ಉಲ್ಲಾಸ) ನಾಗೇಶ್ ಶಾನಭಾಗ
ಅಧ್ಯಕ್ಷರು
ತಾಲೂಕಾ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಯಲ್ಲಾಪುರ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *