Breaking News

ಯಲ್ಲಾಪುರ ಲೋಕೋಪಯೋಗಿ ಇಲಾಖೆಯಿಂದ ತಾಲೂಕಿನ ವಿವಿಧ ರಸ್ತೆಗಳ ತಾತ್ಕಾಲಿಕ ದುರಸ್ತಿ ಕಾರ್ಯ.


ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು ಮಳೆಗಾಲವಾದ್ದರಿಂದ ಮತ್ತಷ್ಟು ಹೊಂಡಗುಂಡಿಗಳ ಸಂಖ್ಯೆ ಹೆಚ್ಚುತ್ತಲೆ ಇದೆ. ಈ ಮದ್ಯೆ ಯಲ್ಲಾಪುರ ಲೋಕೋಪಯೋಗಿ ಇಲಾಖೆ ಸಾರ್ವಜನಿಕ ಸಂಚಾರದ ಸುರಕ್ಷತೆಯನ್ನು ಮನದಲ್ಲಿಟ್ಟುಕೊಂಡು ತಾತ್ಕಾಲಿಕ ದುರಸ್ತಿಗೆ ಮುಂದಾಗಿದ್ದು ಹೊಂಡಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ.


ಖಾನಾಪುರ – ತಾಳಗುಪ್ಪ ರಾಜ್ಯ ಹೆದ್ದಾರಿ, ಚವತ್ತಿ ಗ್ರಾಮೀಣ ಭಾಗದಲ್ಲಿ, ಉಮ್ಮಚ್ಚಗಿ ಸಂಕದಗುಂಡಿ ವ್ಯಾಪ್ತಿಯಲ್ಲಿ,ಮಂಚಿಕೇರಿ ಗ್ರಾಮೀಣ ವ್ಯಾಪ್ತಿಯಲ್ಲಿ ತಾತ್ಕಾಲಿಕ ದುರಸ್ತಿ ಕೆಲಸ ಮಾಡಿದ್ದು ಮತ್ತು ಇತರೆಡೆಗಳಲ್ಲಿ ತಾತ್ಕಾಲಿಕ ರಸ್ತೆ ದುರಸ್ತಿ ಮುಂದುವರೆಸಲಿದ್ದಾರೆ.


ಯಲ್ಲಾಪುರ ತಾಲೂಕಿನ ವ್ಯಾಪ್ತಿ ಹೆಚ್ಚಿನ ಮಳೆ ಬೀಳುವ ಪ್ರದೇಶವಾಗಿದ್ದು ರಸ್ತೆಗಳು ಗುಂಡಿ ಬೀಳುವುದು ಸರ್ವೇಸಾಮಾನ್ಯ ಆಗಿದೆ, ಬರುವ ದಿನಗಳಲ್ಲಿ ವರ್ಷಕ್ಕೆ ಇಂತಿಷ್ಟು ಕಿಲೋಮೀಟರ್ ರಸ್ತೆ ಗುಣಮಟ್ಟದಲ್ಲಿ ನಿರ್ಮಿಸಲು ಪ್ರಾರಂಬಿಸಿದರೆ ಕೆಲವೇ ವರ್ಷಗಳಲ್ಲಿ ತಾಲ್ಲೂಕಿನ ರಸ್ತೆಗಳು ಉತ್ಕೃಷ್ಟ ದರ್ಜೆ ತಲುಪಲಿದೆ ಹಾಗು ಪದೇಪದೇ ದುರಸ್ತಿ ಹೆಸರಲ್ಲಿ ಹಣ ಪೋಲಾಗುವುದನ್ನು ತಡೆಯಬಹುದಾಗಿದೆ.

ಜನರ ಆಕ್ರೋಶ, ವಿರೋಧ ಪಕ್ಷಗಳ ಪ್ರತಿಭಟನೆಗಾಗಿ ರಸ್ತೆ ಸರಿಪಡಿಸುವುದಲ್ಲ ಬದಲಾಗಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿದರೆ ಜನರ ತೆರಿಗೆ ಹಣದ ಸಮರ್ಪಕ ಬಳಕೆ ಮತ್ತು ರಸ್ತೆ ನಿರ್ಮಿಸಿದ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿಂದ ತಾನೆ ಬರಲಿದೆ. ಹಳೆಯ ರೀತಿ ಜನರನ್ನು ಯಾಮಾರಿಸುವ ದಿನಗಳು ದೂರಾಗಿವೆ ಪ್ರತಿಯೊಬ್ಬ ನಾಗರಿಕನು ಪ್ರಜ್ಞಾವಂತನಾಗಿದ್ದು ತನ್ನ ತೆರಿಗೆ ಹಣದ ಲೆಕ್ಕ ಕೇಳುತ್ತಿದ್ದಾನೆ.  ಜನರು ಜಾಗೃತರಾಗಿದ್ದಾರೆ ಎನ್ನುತ್ತಿದ್ದಾರೆ ಸ್ಥಳೀಯ ನಾಗರಿಕರು.

ಮಳೆಗಾಲ ಪ್ರಾರಂಭವಾಗಿ ಇರುವ ರಸ್ತೆ ಮತ್ತಷ್ಟು ಹೊಂಡ-ಗುಂಡಿಗಳು ಸೃಷ್ಟಿಯಾಗಿದ್ದು ಇಲಾಖೆ ಕಾಲಕಾಲಕ್ಕೆ ದುರಸ್ತಿ ಕಾರ್ಯ ಮಾಡುತ್ತಲೆ ಬಂದಿದೆ, ಮಳೆ ಹೆಚ್ಚಾದಂತೆ ಗುಂಡಿಗಳು ಹೆಚ್ಚಾಗಿದೆ ಈಗಾಗಲೆ ಬಹಳಷ್ಟು ಕಡೆಗಳಲ್ಲಿ ದುರಸ್ತಿ ಕಾರ್ಯ ಮಾಡಿದ್ದು ಮೊದಲಿಗೆ ಮುಖ್ಯ ರಸ್ತೆಗಳಿಗೆ ಆದ್ಯತೆ ನೀಡಿದ್ದು ಗ್ರಾಮೀಣ ಪ್ರದೇಶಗಳಲ್ಲಿನ ರಸ್ತೆಗಳ ದುರಸ್ತಿ ಮುಂದುವರೆಸಿದ್ದೇವೆ. ಜನತೆಯ ಸುರಕ್ಷಿತವಾದ ಸಂಚಾರ ನಮ್ಮ ಇಲಾಖೆಯ ಆದ್ಯತೆಯಾಗಿದೆ. ರಾಮಲಿಂಗೇಶ್ ಎಸ್.ಎಂ ,ಎಇಇ , ಲೋಕೋಪಯೋಗಿ ಇಲಾಖೆ, ಯಲ್ಲಾಪುರ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *