
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಅರಣ್ಯ ಇಲಾಖೆಯ ಸೂಚನೆಯಂತೆ ಕೆಲವು ಫಾಲ್ಸ್ ಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಬಹುದಾದ ಹಿನ್ನೆಲೆಯಲ್ಲಿ ಪ್ರವೇಶ ನಿಷೇದಿಸಲಾಗಿದೆ.

ಇಡಗುಂದಿ ವಲಯ ವ್ಯಾಪ್ತಿಯಲ್ಲಿರುವ ಕುಳಿಮಾಗೋಡು ಜಲಪಾತ, ಕಾನೂರು ಜಲಪಾತ, ಹಾಗೂ ಶಿರ್ಲೆ ಜಲಪಾತಗಳ ಮಾರ್ಗಗಳಲ್ಲಿ ಭೂ ಕುಸಿತದ ಭೀತಿ ಇದ್ದು ಆಗಸ್ಟ್ ತಿಂಗಳ ಕೊನೆಯವರೆಗೂ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ಮತ್ತು ಅಲ್ಲಿಗೆ ತೆರಳುವ ಮಾರ್ಗಗಳನ್ನು ಮುಚ್ಚಲಾಗಿದೆ ಎಂದು ಇಡಗುಂದಿ ವಲಯ ಅರಣ್ಯ ಅಧಿಕಾರಿ ಶಿಲ್ಪನಾಯ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಸಿಗರು ಸಹ ಇಂತಹ ಅಪಾಯ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕದಂತೆ ಎಚ್ಚರಿಕೆ ತೆಗೆದುಕೊಳ್ಳಬೇಕಿದ್ದು ಅರಣ್ಯ ಇಲಾಖೆಯ ಸೂಚನೆಯನ್ನು ನಿರ್ಲಕ್ಷ ತೋರದೆ ಜವಾಬ್ದಾರಿ ನಾಗರಿಕರಾಗಿ ಸೂಚನೆ ಪಾಲಿಸಬೇಕಿದೆ.


Prathidvani Yellapura