Breaking News

ತಾಮೀರ್ ಬ್ಯಾಂಕ್ ಚುನಾವಣೆಯಲ್ಲಿ ದಿವಂಗತ ಮಹಮ್ಮದ್ ಗೌಸ್ ಪುತ್ರ ಅಕ್ತರ್ ಅಲಿ ಜಯಭೇರಿ.

ಪ್ರತಿಧ್ವನಿ ಯಲ್ಲಾಪುರ : ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಮಿರ_ ಕೊ_ ಆಪ್ ಸೊಸೈಟಿ ಅಂಕೋಲಾ ಇದರ ಆಢಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ  ಅಕ್ತರ್ ಅಲಿ ಮಹಮ್ಮದ್ ಗೌಸ್ ಎ ಶೇಖ್ ಪ್ರಚಂಡ ಗೆಲುವು ದಾಖಲಿಸುವ ಮೂಲಕ ಜಯಭೇರಿ ಭಾರಿಸಿದ್ದಾರೆ.

ಕಳೆದ 16/02/2025 ರಂದು ಅಂಕೋಲಾದಲ್ಲಿ ಚುನಾವಣೆ ನಡೆಸಲಾಗಿತ್ತು. ಕೆಲವು ಶಾಖೆಗಳ ಪಲಿತಾಂಶದ ಬಗ್ಗೆ ಮಾನ್ಯ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ಪ್ರಕರಣ ನಡೆಯುತ್ತಿದ್ದುದರಿಂದ ಪಲಿತಾಂಶ ಪ್ರಕಟವಾಗಿರಲಿಲ್ಲ. ಈಗ ಉಚ್ಛ ನ್ಯಾಯಾಲಯ ಧಾರವಾಡ ಪೀಠದ ಆದೇಶದಂತೆ ಮತ ಎಣಿಕ ಮಾಡಲಾಗಿ.ತಾಮಿರ_ ಕೊ_ ಆಪ್ ಸೊಸೈಟಿ ಅಂಕೋಲಾ ಇದರ ಯಲ್ಲಾಪುರ ಶಾಖೆಯ ನಿರ್ದೇಶಕರಾಗಿ.  ಅಖ್ತರ ಅಲಿ ಮಹ್ಮದ ಗೌಸ ಇವರು ಆಯ್ಕೆಯಾಗಿದ್ದು ಇವರು ಒಟ್ಟೂ 98 ಮತಗಳನ್ನು ಪಡೆದರೆ. ಇವರ ಪ್ರತಿಸ್ಪರ್ದಿ  ಅಕ್ಬರ ಅಲಿ .ಎಂ.ಶೇಖ ಇವರು ಕೇವಲ 9 ಮತಗಳನ್ನು ಪಡೆದಿದ್ದಾರೆ.

ತಾಮೀರ್ ಬ್ಯಾಂಕ್ ಜಿಲ್ಲೆಯ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಸಮಾಜ ಸೇವಕ ಮತ್ತು ಯಲ್ಲಾಪುರದ ಜನಪ್ರಿಯ ವ್ಯಕ್ತಿಯಾಗಿದ್ದ ದಿವಂಗತ ಮಹಮ್ಮದ್ ಗೌಸ್ ಅವರು ಸಹ ಇದೇ ಸಂಸ್ಥೆಯ ನಿರ್ದೇಶಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಮಗನಾದ ಅಕ್ತರ್ ಅಲಿ ಶೇಖ್ ಸಮಾಜ ಮುಖಿ ವ್ಯಕ್ತಿತ್ವ ಹೊಂದಿದವರಾಗಿದ್ದು ಸ್ನೇಹ ಜೀವಿ. ಪ್ರತಿಷ್ಠಿತ ಯಲ್ಲಾಪುರ ಲಯನ್ಸ್ ಕ್ಲಬ್ ಕ್ರಿಯಾಶೀಲ ಸಂಘಟಕರಾಗಿದ್ದಾರೆ.
ಒಟ್ಟಿನಲ್ಲಿ ಉತ್ತಮ ಆರ್ಥಿಕ ಪ್ರಜ್ಞೆ ಮತ್ತು ಸಂಘಟನ ಶಕ್ತಿ ಇರುವ ಉತ್ತಮ ವ್ಯಕ್ತಿ ಸಂಸ್ಥೆಯ ನಿರ್ದೇಶಕನಾಗಿ ಆಯ್ಕೆಯಾಗಿರುವುದು ಸಮುದಾಯದಲ್ಲಿ ಸಂತಸ ತಂದಿದೆ.
ಅಕ್ತರ್ ಆಯ್ಕೆಗೆ ಹಲವು ಸಂಘ ಸಂಸ್ಥೆಗಳು, ಪ್ರಮುಖರು, ಲಯನ್ಸ್ ಕ್ಲಬ್ ಸಂಸ್ಥೆ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ..

ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ …

Leave a Reply

Your email address will not be published. Required fields are marked *