Breaking News

ಯಲ್ಲಾಪುರ ತಾಪಂ ಇ‌.ಒ  ನೇತೃತ್ವದಲ್ಲಿ ಅಮೃತ ಸರೋವರ ದಡದಲ್ಲಿ ಯೋಗ ದಿವಸ ಆಚರಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ:- ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಮದ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಗೋಡ ಗ್ರಾಮದ ಅಮೃತ ಸರೋವರ ದಡದ ಮೇಲೆ ಶುಕ್ರವಾರ ತಾಲ್ಲೂಕು ಪಂಚಾಯತ್‌ನ  ಕಾರ್ಯನಿರ್ವಾಹಕ ಅಧಿಕಾರಿ ಎನ್.ಆರ್. ಹೆಗಡೆ ನೇತೃತ್ವದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.


ಗ್ರಾಮಸ್ಥರು, ಚುನಾಯಿತ ಚನಪ್ರತಿನಿಧಿಗಳು ಹಾಗೂ ನರೇಗಾ ಕೂಲಿಕಾರಿಗೆ ವಿವಿಧ ಬಗೆಯ ಯೋಗಾಸನಗಳನ್ನು ಸ್ವತಃ ತಾಪಂ ಇಒ ರವರು ಮಾಡಿಸುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.


ನಂತರ ಮಾತನಾಡಿದ ಅವರು, ಯೋಗವು ಅಂತ್ಯಂತ ಪುರಾತನವಾಗಿದ್ದು, ಹಲವಾರು ಜ್ಞಾನಿಗಳು ಅದರ ಮಹತ್ವವನ್ನು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯೋಗ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದರಿಂದ ವಿಶ್ವಾದ್ಯಂತ ಇದರ ಪ್ರಯೋಜನವನ್ನು ಎಲ್ಲರೂ ಪಡೆಯುತ್ತಿದ್ದೇವೆ. ಮನಸ್ಸು-ದೇಹದ ಸಮತೋಲನಕ್ಕಾಗಿ ಪ್ರತಿದಿನ ಯೋಗ ಮಾಡುವ ಅಗತ್ಯವಿದ್ದು, ಯೋಗವು ದೇಹ, ಮನಸ್ಸು ಮತ್ತು ಆತ್ಮವನ್ನು ಪ್ರಕೃತಿಯೋಂದಿಗೆ ಮಿಲನ ಮಾಡುವ ಪ್ರಕ್ರಿಯೆಯಾಗಿದೆ ಎಂದರು.


ತಾಲ್ಲೂಕಿನ ಕಣ್ಣಿಗೇರಿ, ಉಮ್ಮಚಗಿ, ಕುಂದರಗಿ, ಹಾಸಣಗಿ, ಚಂದಗುಳಿ, ಕಿರವತ್ತಿ, ನಂದೊಳ್ಳಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ನರೇಗ ಕೂಲಿಕಾರರು ಮತ್ತು ಗ್ರಾಮಸ್ಥರಿಗೆ ಅಮೃತ ಸರೋವರಗಳ ದಡದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಯೋಗ ದಿನ ಆಚರಿಸಿ ಯೋಗದ ಮಹತ್ವ ಕುರಿತು ಮಾಹಿತಿ ನೀಡಲಾಯಿತು.


ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ  ಮಂಜುನಾಥ ಆಗೇರ, ಗ್ರಾಪಂ ಪಿಡಿಒ ಅಣ್ಣಪ್ಪ ವಡ್ಡರ, ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ, ಟಿಸಿ ನಾರಾಯಣ ತಾನೋಜಿ, ಟಿಎಇ ಗಳಾದ ಭವ್ಯಾ ನಾಯ್ಕ, ಅಬ್ದುಲ್ ಗಫಾರ, ಗ್ರಾಪಂ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ನರೇಗಾ ಕೂಲಿಕಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *