
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಬಳ್ಳಾರಿ-ಕಾರವಾರ ಹೆದ್ದಾರಿ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ನೂರಾರು ಮುಸ್ಲಿಂ ಬಾಂಧವರು ಸೇರಿ ಅಲ್ಲಾಹುಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಸುಮಾರು ಇಪ್ಪತ್ತೊಂಬತ್ತು ದಿನಗಳ ಉಪವಾಸ ಮಾಡಿ ಶುಕ್ರವಾರ ಚಂದ್ರ ದರ್ಶನ ಪಡೆದು ಶನಿವಾರ ಬೆಳಗ್ಗೆ 9-30 ರ ಸುಮಾರಿಗೆ ಸಮುದಾಯದ ಧರ್ಮ ಗುರುಗಳ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಒಬ್ಬರಿಗೊಬ್ಬರು ಆಲಿಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.


ನಂತರ ಪಟ್ಟಣದ ಹೊರವಲಯದಲ್ಲಿರುವ ಖಬರಸ್ಥಾನದಲ್ಲಿ ತಮ್ಮ ತಮ್ಮ ಕುಟುಂಬದ ಮೃತರ ಸಮಾಧಿ ಬಳಿ ಹೂ ಹಾಕಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದರು.
Prathidvani Yellapura