Breaking News

ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ರಾಮಲಿಂಗೇಶ್ವರ ನಾಟಕ (ನಾಟ್ಯ) ಕಲಾ ಬಳಗದ ಆಶ್ರಯದಲ್ಲಿ ನಾಟಕ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ


ಪ್ರತಿಧ್ವನಿ,ಯಲ್ಲಾಪುರ – ತಾಲೂಕಿನ ನಂದೊಳ್ಳಿ ಸ.ಹಿ.ಪ್ರಾ ಶಾಲೆಯ ಆವಾರದಲ್ಲಿ ರಾಮಲಿಂಗೇಶ್ವರ ನಾಟಕ (ನಾಟ್ಯ) ಕಲಾ ಬಳಗದ ಕಲಾವಿದರಿಂದ ” ಕುಡುಕ ಕಟ್ಟಿದ ತಾಳಿ ಅರ್ಥಾತ್‌ ಸಾಕು ತಂಗಿಯ ಸಂಕಟ “ ನಾಟಕ ಪ್ರದರ್ಶನ ಕಂಡಿತು.

ಜ್ಯೋತಿಷಿ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾ.ಪಂ ಅಧ್ಯಕ್ಷ ನರಸಿಂಹ ಕೋಣೆಮನೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದಿಕ ನಾರಾಯಣ ಭಟ್ಟ ಮೊಟ್ಟೆಗದ್ದೆ, ನಾಟಕ ಕಲಾವಿದ ನರಸಿಂಹ ಭಾಗ್ವತ ಗುಂಡ್ಕಲ್, ನಿವೃತ್ತ ಶಿಕ್ಷಕ ಕೆ.ಜಿ.ನಾಯಕ ಹಾಗೂ ಕೊನೆ ಕೊಯ್ಲು ಮಾಡುವ ಕಾರ್ಮಿಕ ಗಣಪಾ ಸಿದ್ದಿ ಅವರನ್ನು ಸನ್ಮಾನಿಸಲಾಯಿತು.


ಗ್ರಾ.ಪಂ ಉಪಾಧ್ಯಕ್ಷೆ ಮೀನಾಕ್ಷಿ ಭಟ್ಟ, ಸದಸ್ಯರಾದ ಟಿ.ಆರ್.ಹೆಗಡೆ, ನಾಗರತ್ನಾ ನಾಯ್ಕ, ಕಮಲಾ ಸಿದ್ದಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಲ್.ಪಿ.ಭಟ್ಟ, ಟಿಎಂಎಸ್ ನಿರ್ದೇಶಕ ವೆಂಕಟರಮಣ ಭಟ್ಟ ಕಿರಕುಂಭತ್ತಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ಟ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಎಂ.ಎನ್.ಭಟ್ಟ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿನಾಯಕ ಭಟ್ಟ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಚಂದ್ರ ಭಟ್ಟ, ನಂದೊಳ್ಳಿ ಸಹಕಾರಿ ಸಂಘದ ಅಧ್ಯಕ್ಷ ಟಿ.ವಿ.ಭಾಗ್ವತ, ಕಲಾ ಬಳಗದ ಅಧ್ಯಕ್ಷ ನಾಗರಾಜ ಕವಡಿಕೆರೆ, ಕಾರ್ಯದರ್ಶಿ ಶಿವಾನಂದ ನಾಯ್ಕ ಇತರರಿದ್ದರು.


ಕಲಾ ಬಳಗದ ಕಲಾವಿದರಿಂದ ” ಸಾಕು ತಂಗಿಯ ಸಂಕಟ” ನಾಟಕ ಪ್ರದರ್ಶನಗೊಂಡಿತು. ದತ್ತಾತ್ರೇಯ ಹೆಗಡೆ ಹೆಗ್ಗುಂಬಳಿ, ಮಂಜುನಾಥ ಸೂರಾ ನಾಯ್ಕ, ನರಸಿಂಹ ಭಟ್ಟ ಮೇಲಿನಕುಂಕಿ, ಸುದರ್ಶನ ಭಾಗ್ವತ, ಸುಬ್ಬಣ್ಣ ಕೋಡ್ನಗುಡ್ಡೆ, ಶ್ರೀಧರ ಅಣಲಗಾರ, ಸುಬ್ಬಣ್ಣ ಕಂಚಗಲ್, ಶಿವಾನಂದ ನಾಯ್ಕ, ಸುದರ್ಶನ ದೇವಿತಗ್ಗು, ಮಾದೇವ ನಾಯ್ಕ, ಗಜಾನನ ಹೆಗಡೆ ಬೆಳಖಂಡ, ತಿಮ್ಮಣ್ಣ ಭಟ್ಟ ಸೂಳಗಾರ, ಶಿವ ಸಿದ್ದಿ ವಿವಿಧ ಪಾತ್ರಗಳನ್ನು ನಿರ್ವಹಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *