
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ತಾರೆಹಳ್ಳಿ ಗ್ರಾಮದಲ್ಲಿ ಮನೆ ಕುಸಿದು ಅಪಾರ ಪ್ರಮಾಣದ ಹಾನಿಯಾದ ಘಟನೆ ವರದಿಯಾಗಿರುತ್ತದೆ. ನಂದಿಬಾವಿಯ ಗೀತಾ ಪುಟ್ಟ ಸಿದ್ದಿ ಎಂಬುವರ ವಾಸದ ಮನೆ ಕಳೆದ ರಾತ್ರಿ ಸುರಿದ ಮಳೆಗೆ ಗೋಡೆ ಕುಸಿದು ಮನೆಯ ಬಹುತೇಕ ಭಾಗ ನೆಲಸಮವಾಗುವ ಹಂತದಲ್ಲಿದೆ.
ಮನೆ ಬೀಳಬಹುದೆಂಬ ಸಂಗತಿ ಕುಟುಂಬದವರ ಗಮನಕ್ಕೆ ಮೊದಲೇ ಬಂದಿರುವುದರಿಂದ ಪಕ್ಕದಲ್ಲಿದ್ದ ತಮ್ಮದೇ ಶೆಡ್ನಲ್ಲಿ ಉಳಿದು ರಾತ್ರಿ ಬಚಾವಾಗಿರುತ್ತಾರೆ.

ಸುದ್ದಿ ತಿಳಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಉಮ್ಮಚ್ಗಿ ಗ್ರಾಮ ಪಂಚಾಯತ ಸದಸ್ಯರಾದ ಖೈತಾನ್ ಡಿಸೋಜ, ಕುಪ್ಪಯ್ಯ ಪೂಜಾರಿ, ಅಶೋಕ ಪೂಜಾರಿ, ಸರಸ್ವತಿ ಪಟಗಾರ, ಸಾಮಾಜಿಕ ಕಾರ್ಯಕರ್ತ ನಾರಾಯಣ ಸಿದ್ದಿ, ವಿಲೇಜ್ ಅಕೌಂಟೆಂಟ್ ಸವಿತಾ ಭಜಂತ್ರಿ ಮೊದಲಾದವರು ಹೋಗಿ ಪರಿಶೀಲನೆ ನಡೆಸಿರುತ್ತಾರೆ.
Prathidvani Yellapura