Breaking News

ಸರ್ವಂ ರಾಮಮಯಂ ಯಲ್ಲಾಪುರ ಕೇಸರಿ ಮಯಂ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಎಲ್ಲಿನೋಡಿದರು ರಾಮನಾಮ ಕೇಸರಿಮಯವಾಗಿದೆ.
   ಪಟ್ಟಣದ ಮಂಜುನಾಥ ನಗರದಲ್ಲಿ ರಾಮಭಕ್ತ ಬಳಗದ ವತಿಯಿಂದ ಶ್ರೀರಾಮನ ವಿಶೇಷ ಪೂಜೆ ಆಯೋಜಿಸಲಾಗಿತ್ತು.


    ಪೂರ್ಣ ಕುಂಭದೊಂದಿಗೆ ಗ್ರಾಮದೇವಿ ಮತ್ತು ಶ್ರೀರಾಮನ ಭಾವ  ಚಿತ್ರವನ್ನು ಸ್ವಾಗತಿಸಿ  ಪೂಜಾ ಕಾರ್ಯ ಪ್ರಾರಂಭಿಸಿದರು.

ಹಲಸ್ಕಂಡ ಮಾತೃ ಮಂಡಳಿ ವತಿಯಿಂದ ರಾಮ ಭಜನೆ ಏರ್ಪಡಿಸಲಾಗಿತ್ತು.

ಶ್ರೀರಾಮನ ಪ್ರಾಣಪ್ರತಿಷ್ಟೆ ಕಾರ್ಯಕ್ಕೆ ಮಹಿಳೆಯರಿಗೆ ಅರಿಶಿನ ಕುಂಕುಮ ನೀಡಲಾಯಿತು.
     ಸ್ಥಳಕ್ಕೆ ಶಾಸಕ ಹೆಬ್ಬಾರ್ ಭೇಟಿ ನೀಡಿ ರಾಮನ ದರ್ಶನ ಪಡೆದು ಕೃತಾರ್ಥರಾದರು.


    ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ವಿಶೇಷ ಎಂದರೆ ಮುಸ್ಲಿಂ, ಕ್ರೈಸ್ತರು ಸಹ ಧರ್ಮಬೇದ ಮರೆತು ಅನ್ನ ಪ್ರಸಾದ ಬಡಿಸುವ ಕಾರ್ಯದಲ್ಲು ಕೈಜೋಡಿಸಿ ಸೌಹಾರ್ಧತೆ ತೋರಿದರು.

ಸಂಜೆ ವೇಳೆಗೆ ನಾಗರಕಟ್ಟೆ ವೃತ್ತದಲ್ಲಿ ದೀಪೋತ್ಸವ ಜರುಗಿತು ಸ್ಥಳೀಯ ಮಹಳೆಯರು ಭಾಗಿಯಾಗಿ ದೀಪ ಬೆಳಗಿ ರಾಮ ಭಜನೆ ಮಾಡಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *