Breaking News

ತಾಮೀರ್ ಬ್ಯಾಂಕ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಕ್ತರ್ ಅಲಿ ಮೊಹ್ಮದ್ ಎ ಶೇಖ್ ಶಾಸಕ ಹೆಬ್ಬಾರ್ ಭೇಟಿಯಾಗಿ ಸಂತಸ ಹಂಚಿಕೊಂಡರು.


ಪ್ರತಿಧ್ವನಿ ಯಲ್ಲಾಪುರ : ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ತಾಮೀರ್-ಕೋ-ಆಪ್-ಸೊಸೈಟಿ ಚುನಾವಣೆ ನಡೆದಿದ್ದು ಫಲಿತಾಂಶ ರವಿವಾರ ಘೋಷಣೆಯಾಗಿದ್ದು ಯಲ್ಲಾಪುರ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಮಾಜ ಸೇವಕ ದಿವಂಗತ ಮೊಹ್ಮದ್ ಎ ಶೇಖ್ ಅವರ ಪುತ್ರ ಅಕ್ತರ್ ಅಲಿ ಮೊಹ್ಮದ್ ಶೇಖ್ ಪ್ರಚಂಡ ಬಹುಮತಗಳಿಂದ ಗೆಲುವು ಸಾಧಿಸಿದ್ದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಭೇಟಿಯಾಗಿ ಸಂತಸ ಹಂಚಿಕೊಂಡರು. ಈ ವೇಳೆಯಲ್ಲಿ ಸಂಸ್ಥೆಯ ಪ್ರಗತಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಿದರು.


ಇದೇ ಸಂದರ್ಭದಲ್ಲಿ  ಯಲ್ಲಾಪುರ ಕ್ಷೇತ್ರದಿಂದ ತಾಮೀರ್ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ಸಾಧಿಸಿದ ಅಕ್ತರ್ ಅಲಿ ಎಂ.ಎ.ಶೇಖ್ ಅವರನ್ನು ಶಾಸಕ ಶಿವರಾಮ ಹೆಬ್ಬಾರ್ ಶಾಲು ಹೊದಿಸಿ ಗೌರವಿಸಿ ಸನ್ಮಾನಿಸಿದರು.


ಚುನಾವಣೆಯಲ್ಲಿ ನನಗೆ ಮತ ಚಲಾಯಿಸಿ ಸಂಸ್ಥೆಯ ಸೇವೆಗೆ ಅವಕಾಶ ಕಲ್ಪಿಸಿದ ಸರ್ವರಿಗು ಧನ್ಯವಾದಗಳು. ಮುಂದೆ ಸಂಸ್ಥೆಯ ಬೆಳವಣಿಗೆಗೆ ಹಿರಿಯ ಸಲಹೆ ಸೂಚನೆಗಳನ್ನು ಪಡೆದು ಮುಂದೆ ಸಾಗುವೆನು. ಹಿಂದೆ ನನ್ನ ತಂದೆಯವರು ಸಹ ಇದೇ ಸಂಸ್ಥೆಯ ಬೆಳವಣಿಗೆಗೆ ನಿಸ್ವಾರ್ಥ ಮನಸ್ಸಿನಿಂದ ಶ್ರಮಿಸಿದ್ದು ಅವರು ಹಾಕಿಕೊಟ್ಟ ಮಾರ್ಗದಲ್ಲೆ ನಡೆದು‌ ಸಂಸ್ಥೆಗೆ ಉತ್ತಮ ಹೆಸರು ತರುವೆನು ತಮ್ಮೆಲ್ಲರ ಸಹಕಾರ ಸದಾ ಹೀಗೆ ನನ್ನ ಮೇಲಿರಲಿ ಮತ್ತೊಮ್ಮೆ ತಮ್ಮೆಲ್ಲರಿಗು ಧನ್ಯವಾದಗಳು.
ಅಕ್ತರ್ ಅಲಿ ಮೊಹ್ಮದ್ ಎ ಶೇಖ್
ನಿರ್ದೇಶಕರು, ತಾಮಿರ್-ಕೋ-ಆಪ್-ಸೊಸೈಟಿ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ..

ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ …

Leave a Reply

Your email address will not be published. Required fields are marked *