
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಬಸವಣ್ಣನವರು ಸಮಾಜದಲ್ಲಿನ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಬೇಕೆನ್ನುವ ನಿಟ್ಟಿನಲ್ಲಿ ವಿರಶೈವ ಲಿಂಗಾಯತ ಧರ್ಮವನ್ನು ಸಂಸ್ಥಾಪಿಸಿ, ತಮ್ಮ ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಸಮಾನತೆ ಹಾಗೂ ಏಕತೆಯ ಸಂದೇಶವನ್ನು ಸಾರಿದ್ದಾರೆ’ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ ಹೇಳಿದರು.
ಪಟ್ಟಣದ ಆಡಳಿತ ಸೌಧದಲ್ಲಿ ಸರಳವಾಗಿ ಹಮ್ಮಿಕೊಂಡ ಜಗಜ್ಯೋತಿ ಬಸವಣ್ಣನವರ ಜಯಂತಿ ಅಂಗವಾಗಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಬಸವಣ್ಣನವರು ತಮ್ಮ ‘ಅನುಭವ ಮಂಟಪ’ದ ಮೂಲಕ ಎಲ್ಲ ವರ್ಗದವರಿಗೂ ಸಾಮಾಜಿಕ ಸಾಮರಸ್ಯ ತೋರಿದ ಮಹಾನ್ ಮಾನವತಾವಾದಿಯಾಗಿದ್ದಾರೆ. ಅವರ ಹಿರಿಮೆ ಗರಿಮೆ ಸಮಾಜಕ್ಕೆ ನೀಡಿದ ಆದರ್ಶಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿವೆ. ತಮ್ಮ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮೊದಲಿಗೆ ಹುಟ್ಟುಹಾಕಿದವರಾಗಿದ್ದರು ಎಂದು ಅವರು ಹೇಳಿದರು.
ಉಪ ತಹಶೀಲ್ದಾರ ರಾಘವೇಂದ್ರ, ಲಿಂಗಾಯತ ಸಮೂದಾಯದ ಪ್ರಮುಖರಾದ ಮಹೇಶ ಗೌಳಿ, ಉದಯ ಜಾಲಿಹಾಳ, ಬಸವರಾಜ ಗೌಳಿ, ವಿವಿದ ಇಲಾಖೆಯ ಸಿಬ್ಬಂದಿ ಇದ್ದರು.
Prathidvani Yellapura