Breaking News

ಯುವ ನಾಯಕ ವಿವೇಕ್ ಹೆಬ್ಬಾರ್‌ಗೆ ಒಲಿದ ಕೆ.ಪಿ.ಸಿ.ಸಿ ಸದಸ್ಯ ಪಟ್ಟ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗೆ ಮತ್ತೊಬ್ಬ ಯುವ ಉತ್ಸಾಹಿ ಬ್ರಹ್ಮಾಸ್ತ್ರ ಸೇರ್ಪಡೆಯಾದಂತಾಗಿದೆ.


ಉಪ ಮುಖ್ಯಮಂತ್ರಿ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್‌ಗೆ ಕೆಪಿಸಿಸಿ ಸದಸ್ಯರನ್ನಾಗಿಸಿ ಪಕ್ಷ ಸಂಘಟನೆಯ ಮಹತ್ವದ ಜವಾಬ್ದಾರಿ ನೀಡಲಾಗಿದೆ.


ತಂದೆ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗರಡಿಯಲ್ಲಿ ಪಳಗಿದ ರಾಜಕೀಯ ಚಾಣಾಕ್ಷತೆ ಮೈಗೂಡಿಸಿಕೊಂಡು ಹಿರಿಯ ನಾಯಕರ ಮಾರ್ಗದರ್ಶನ., ಕ್ಷೇತ್ರದ ಯುವ ಸಮೂಹದ ನೆಚ್ಚಿನ ಒಲವು ಪಡೆದು ಯಲ್ಲಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ಮಾಡುತ್ತ ಪಕ್ಷದ ಚಟುವಟಿಕೆಗೆ ಮತ್ತು ಮತದಾರರ ಕಷ್ಟ ಸುಖಃಗಳಿಗೆ ಸ್ಪಂದಿಸುತ್ತಾ ಕಾಂಗ್ರೆಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯ ನಾಯಕರ ಮನ ಗೆದ್ದಿರುವ ವಿವೇಕ್ ಹೆಬ್ಬಾರ್‌ಗೆ ಕೆಪಿಸಿಸಿ ಸದಸ್ಯ ಸ್ಥಾನ ನೀಡಿರುವುದು ಕಾಂಗ್ರೆಸ್ ಪಕ್ಷದ ಯುವ ಸಮೂಹದಲ್ಲಿ ಹೊಸ ಸಂಚಲನ ಮೂಡಿಸಿದೆ.


ಭವಿಷ್ಯದ ದಿನಗಳಲ್ಲಿ ಕ್ಷೇತ್ರವ್ಯಾಪ್ತಿಯ ಪಕ್ಷ ಸಂಘಟನೆಗೆ ಶರವೇಗ ದೊರೆಯಲಿದ್ದು ಮಹತ್ವದ ಜವಾಬ್ದಾರಿ ನೀಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಆಧೇಶ ಪತ್ರ ನೀಡಿದ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಹಾಗು ರಾಷ್ಟ್ರ ಮತ್ತು ರಾಜ್ಯ ನಾಯಕರಿಗೆ, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಮತ್ತು ಜಿಲ್ಲೆಯ ಎಲ್ಲಾ ಶಾಸಕರಿಗೆ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಭಟ್ ಮೆಣಸುಪಾಲ, ಮುಂಡಗೋಡು ಬ್ಲಾಕ್ ಅಧ್ಯಕ್ಷ ಜ್ಞಾನೇಶ್ವರ್ ಗುಡಿಹಾಳ್ ,ಬನವಾಸಿ ಬ್ಲಾಕ್ ಅಧ್ಯಕ್ಷ ಸಿ.ಎಫ್ ನಾಯ್ಕ ಹಾಗು ವಿವಿಧ ಘಟಕಗಳ ಪದಾಧಿಕಾರಿ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಹೃದಯ ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ನನ್ನ ಮೇಲೆ ಭರವಸೆ ಇಟ್ಟು ಮಹತ್ವದ ಕೆಪಿಸಿಸಿ ಸದಸ್ಯತ್ವ ಜವಾಬ್ದಾರಿ ನೀಡಿದ ಕೆಪಿಸಿಸಿ ರಾಜ್ಯಾಧ್ಯಕ್ಷರು ಡಿ.ಕೆ ಶಿವಕುಮಾರ್ ಅವರಿಗು, ರಾಜ್ಯದ ಮುಖ್ಯ ಮಂತ್ರಿಗಳು ಸಿದ್ದರಾಮಯ್ಯ ನವರಿಗು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈಧ್ಯ, ಹಿರಿಯ ಶಾಸಕರು ಹಳಿಯಾಳ ಶಾಸಕರಾದ ಆರ್.ವಿ.ದೇಶಪಾಂಡೆ ಅವರಿಗೆ ಮತ್ತು ರಾಷ್ಟ್ರ ರಾಜ್ಯದ ನಾಯಕರಿಗು ಜಿಲ್ಲೆಯ ಶಾಸಕರಿಗು ಜಿಲ್ಲಾಧ್ಯಕ್ಷರಿಗು ಯಲ್ಲಾಪುರ, ಮುಂಡಗೋಡು, ಬನವಾಸಿ ಬ್ಲಾಕ್ ಅಧ್ಯಕ್ಷರು ಪದಾಧಿಕಾರಿಗಳಿಗು ಕೃತಜ್ಞತೆ ಸಲ್ಲಿಸುತ್ತೇನೆ. ಭವಿಷ್ಯದಲ್ಲಿ ಕ್ಷೇತ್ರದಾದ್ಯಂತ ಸಂಚರಿಸಿ ಹಿರಿಯರ ಮಾರ್ಗದರ್ಶನದಲ್ಲಿ ಯುವ ಸಮೂಹದ ಪ್ರೋತ್ಸಾಹದಲ್ಲಿ, ಕಾರ್ಯಕರ್ತರೊಂದಿಗೆ ಬೆರೆತು ಪ್ರಭಲವಾದ ಸಂಘಟನೆಗೆ ತೊಡಗಿಕೊಳ್ಳುತ್ತೇನೆ ನಿಮ್ಮೆಲ್ಲರ ಆಶಿರ್ವಾದವಿರಲಿ.                                                ವಿವೇಕ್ ಹೆಬ್ಬಾರ್, ಕೆ.ಪಿ.ಸಿ.ಸಿ ಸದಸ್ಯರು,ಯಲ್ಲಾಪುರ ವಿಧಾನಸಭಾ ಕ್ಷೇತ್ರ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *