
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಕೋಟೆಮನೆಯಲ್ಲಿ ಮಂಗಳವಾರ ರಾತ್ರಿ ಬೀಸಿದ ಬಿರುಗಾಳಿ,ಮಳೆಯ ರಭಸಕ್ಕೆ ಆರೇಳು ಮನೆಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾದ ಘಟನೆ ಸಂಭವಿಸಿರುತ್ತದೆ.
ಗೌರಿ ರಾಮಾ ಸಿದ್ದಿ, ರುಕ್ಮಿಣಿ ಕೃಷ್ಣಾ ಸಿದ್ದಿ,ದೇವಕಿ ನಾರಾಯಣ ಪಟಗಾರ, ನಾರಾಯಣ ಮಡೂರ ಪೂಜಾರಿ, ಕೃಷ್ಣ ನಾಗಾ ಸಿದ್ದಿ ಮೊದಲಾದವರ ಮನೆಗಳ ಹೆಂಚು ಮತ್ತು ತಗಡಿನ ಶೀಟುಗಳು ಬಿರುಗಾಳಿಗೆ ಹಾರಿ ಹೋಗಿರುತ್ತವೆ.


ಕೋಟೆಮನೆ ಅಂಗನವಾಡಿ ಕೇಂದ್ರಕ್ಕೂ ಬಿರುಗಾಳಿಯಿಂದ ಹಾನಿಯಾಗಿರುತ್ತದೆ. ರಾತ್ರಿ ಘಟನೆ ನಡೆದ ತಕ್ಷಣ ಉಮ್ಮಚ್ಗಿ ಗ್ರಾ.ಪಂ. ಸ್ಥಳೀಯ ಸದಸ್ಯ ಗ.ರಾ.ಭಟ್ಟ, ಗ್ರಾ.ಪಂ.ಡಾಟಾ ಎಂಟ್ರಿ ನೌಕರ ಗಣಪತಿ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ, ಶಾಸಕ ಶಿವರಾಮ ಹೆಬ್ಬಾರ್ ಮಾರ್ಗದರ್ಶನದಂತೆ ಬೆಳಿಗ್ಗೆ ಉಪ ತಹಶಿಲ್ದಾರ ಕೆ.ಎಸ್. ಫರ್ನಾಂಡೀಸ್, ವಿಲೇಜ್ ಅಕೌಂಟೆAಟ್ ಸವಿತಾ ಭಜಂತ್ರಿ, ಉಮ್ಮಚ್ಗಿ ಗ್ರಾ.ಪಂ. ಕಾರ್ಯದರ್ಶಿ ಶಂಕರ ನಾಯ್ಕ, ಅಧ್ಯಕ್ಷೆ ರೂಪಾ ಪೂಜಾರಿ, ಸದಸ್ಯ ಖೈತಾನ್ ಡಿಸೋಜ, ಉಗ್ರಾಣಿ ವೆಂಕಟೇಶ, ಊರಿನ ಹಿರಿಯರಾದ ರಾಮಚಂದ್ರ ಸಿದ್ದಿ ಕೋಟೆಮನೆ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿರುತ್ತಾರೆ.





Prathidvani Yellapura