
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ನ.24 ರಂದು ಪಟ್ಟಣದ ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಟ್ಟಣದ ಪ್ರತಿಷ್ಟಿತ ವೈ.ಟಿ.ಎಸ್.ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 18 ಸ್ಪರ್ಧೆಗಳಲ್ಲಿ ವಿಜೇತರಾಗಿ 11 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿಭಾಗದಲ್ಲಿ ಇಂಗ್ಲೀಷ್ ಪ್ರಬಂಧ, ಇಂಗ್ಲೀಷ್ ಚರ್ಚೆ, ರಸಪ್ರಶ್ನೆ, ಜಾನಪದಗೀತೆ, ಚಿತ್ರಕಲೆ, ಭಕ್ತಿಗೀತೆ, ಆಶುಭಾಷಣ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಕನ್ನಡ ಚರ್ಚೆ, ಕನ್ನಡ ಪ್ರಬಂಧ, ಏಕಪಾತ್ರಾಭಿನಯ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಇಂಗ್ಲೀಷ್ ಪ್ರಬಂಧ, ಇಂಗ್ಲೀಷ್ ಚರ್ಚೆ, ಭಾವಗೀತೆ, ಚಿತ್ರಕಲೆಗಳಲ್ಲಿ ಪ್ರಥಮ ಹಾಗೂ ಕನ್ನಡ ಚರ್ಚೆ, ಏಕಪಾತ್ರಾಭಿನಯ, ಜಾನಪದಗೀತೆ, ಆಶುಭಾಷಣ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದು ಎಲ್ಲಾ ವಿದ್ಯಾರ್ಥಿಗಳೂ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಹಾಗೂ ತರಬೇತಿ ನೀಡಿದ ಉಪನ್ಯಾಸಕರನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗ ಅಭಿನಂದಿಸಿದ್ದಾರೆ.


