Breaking News

ತಾತ್ಕಾಲಿಕ ಸಭಾಪತಿಯಾಗಿ ಶಾಂತಾರಾಮ ಸಿದ್ದಿ ಕಾರ್ಯನಿರ್ವಹಣೆ

ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ವಿಧಾನಪರಿಷತ್ ಅತ್ಯುನ್ನತ ಸ್ಥಾನವಾದ ಸಭಾಪತಿ ಸ್ಥಾನ ಅಲಂಕರಿಸಿ ಕೆಲಕಾಲ ಸದನ ನಡೆಸುವ ಮೂಲಕ ಬುಡಕಟ್ಟು ಸಿದ್ದಿ ಸಮುದಾಯದ ಶಾಂತಾರಾಮ್ ಸಿದ್ದಿ ರಾಜ್ಯದ ವಿಧಾನಪರಿಷತ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ  ಹಿತ್ಲಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಗ್ರಾಮ ಪುರ್ಲೆಮನೆ ನಿವಾಸಿಯಾದ. ಅತ್ಯಂತ ಸರಳ ಮತ್ತು ಬುಡಕಟ್ಟು ಸಿದ್ದಿ ಸಮುದಾಯದ ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಕೊಂಡು ವನವಾಸಿ ವಿಭಾಗದಲ್ಲಿ ಮತ್ತು ಸಂಘ ಪರಿವಾರದಲ್ಲಿ ಸೇವೆ ಸಲ್ಲಿಸುತ್ತಾ ಪಕ್ಷದ ಗಮನ ಸೆಳೆದು ವಿಧಾನಪರಿಷತ್ ಸ್ಥಾನ ಗಳಿಸಿ ಅದಾಗಲೆ ದಾಖಲೆ ಬರೆದ ಶಾಂತಾರಾಮ್ ಸಿದ್ದಿ ವಿಧಾನಪರಿಷತ್ ನಲ್ಲಿ ಹೊಸದೊಂದು ದಾಖಲೆ ಬರೆದಂತಾಗಿದೆ.

ವಿಧಾನಪರಿಷತ್ ನಲ್ಲಿ ಅತ್ಯುನ್ನತ ಸ್ಥಾನವೆಂದರೆ ಅದು ಸಭಾಪತಿ ಸ್ಥಾನವಾಗಿದೆ. ಸದ್ಯ ಸಭಾಪತಿಗಳಾಗಿ ಬಸವರಾಜ ಹೊರಟ್ಟಿ ಯವರು ನಿಭಾಯಿಸುತ್ತಿದ್ದು ಅದೃಷ್ಟವೆಂಬಂತೆ ಮಂಗಳವಾರ ಕೆಲಕಾಲ ಗೌರವಯುತ ಅತ್ಯುನ್ನತ ಸ್ಥಾನ ಶಾಂತಾರಾಮ್ ಸಿದ್ದಿ ಅವರಿಗೆ ಲಭಿಸಿ ಕೆಲಕಾಲ ಸದನ ನಡೆಸುವ ಮೂಲಕ ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸನ್ನಡತೆಗೆ ಕಾರಣವಾದ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಶಕ್ತಿ ಇದಕ್ಕೆ ಕಾರಣವಾದಂತಾಗಿದೆ.

ಒಟ್ಟಿನಲ್ಲಿ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಯಲ್ಲಾಪುರ ತಾಲೂಕಿನ ಕುಗ್ರಾಮದ ಅತ್ಯಂತ ಚಿಕ್ಕ ಬುಡಕಟ್ಟು ಸಿದ್ದಿ ಸಮುದಾಯದ ವ್ಯಕ್ತಿ‌ಒಬ್ಬರು ವಿಧಾನಪರಿಷತ್ ಸಭಾಪತಿ ಸ್ಥಾನ ಕೆಲಕಾಲ ಅಲಂಕರಿಸಿದರು ಅದು ಯಲ್ಲಾಪುರ ತಾಲೂಕಿನ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ‌ ಎಂಬುದು ಸ್ಥಳೀಯ ನಾಗರಿಕರ ಅಭಿಪ್ರಾಯವಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ..

ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ …

Leave a Reply

Your email address will not be published. Required fields are marked *