Breaking News

ಅಂಗಾಂಗದಾನ ಮಾಡಿ ಮಾದರಿಯಾದ ಯಲ್ಲಾಪುರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ. ಭಟ್ಟ..


ಪ್ರತಿಧ್ವನಿ ಯಲ್ಲಾಪುರ : ತಾಲೂಕು ಆರೋಗ್ಯ ಇಲಾಖೆಯಲ್ಲಿ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಟಿ ಭಟ್ಟ ಅಂಗಾಂಗದಾನ ಮಾಡುವ ದೃಡ ನಿರ್ಧಾರ ಕೈಗೊಂಡು ಇತರರಿಗೆ ಮಾದರಿಯಾಗಿದ್ದಾರೆ.


ನಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಜೀವನದ ಮಹತ್ತರ ಉಡುಗೊರೆಯನ್ನು ಬೇರೆಯವರಿಗೆ ನೀಡಬಹುದಾಗಿದೆ.

ನೇತ್ರದಾನ ಮತ್ತು ಅಂಗದಾನದ ಮೂಲಕ ಒಬ್ಬ ಅಂಗಾಂಗ ದಾನಿ ಏಳು ಜೀವಗಳನ್ನು ಉಳಿಸಬಹುದಾಗಿದೆ. ಹೃದಯ, ಮೇದೋಜೀರಕ ಗ್ರಂಥಿ, ಯಕೃತ್ , ಮೂತ್ರಪಿಂಡ ಮತ್ತು ಶ್ವಾಸಕೋಶಗಳನ್ನು ದಾನ ಮಾಡಬಹುದಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ದಾನಿಯ ಮರಣಾನಂತರ ಅಂಗಾಂಗ ನೀಡಲಾಗುತ್ತದೆ. ಆದರೆ ಕೆಲವು ಅಂಗಾಂಗಳನ್ನು ದಾನಿಗಳು ಜೀವಂತವಿರುವಾಗ ದಾನ ಮಾಡಬಹುದಾಗಿದೆ. ಇದು ಸ್ವಯಂ ಪ್ರೇರಿತವಾಗಿದ್ದು ಯಾವುದೇ ಒತ್ತಡವಿರುವುದಿಲ್ಲ. ಅಂಗಾಂಗದಾನದ ಪ್ರತಿಜ್ಞೆಯನ್ನು ಈಗ ಸುಲಭಗೊಳಿಸಿದ್ದು https://notto.abdm.gov.in ಗೆ ಲಾಗಿನ್ ಆಗುವ ಮೂಲಕ ಸ್ವಯಂಪ್ರೇರಿತರಾಗಿ ಅಂಗಾಂಗದಾನದ ಪ್ರತಿಜ್ಞೆ ಮಾಡಬಹುದಾಗಿದೆ ಎಂದು ಅಂಗಾಂಗದಾನದ ಪ್ರತಿಜ್ಞೆ ಮಾಡಿರುವ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ ಭಟ್ಟ ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *