Breaking News

ಶಾಸಕ ಶಿವರಾಮ ಹೆಬ್ಬಾರ್ ಆಪ್ತ ಕಾರ್ಯದರ್ಶಿ ಕಮಲಾಕರ ನಾಯ್ಕ ಅವರಿಗೆ ಪಿತೃವಿಯೋಗ.

ಪ್ರತಿಧ್ವನಿ ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಅವರ ಆಪ್ತ ಕಾರ್ಯದರ್ಶಿ ಕಮಲಾಕರ ನಾಯ್ಕ ಅವರ ತಂದೆ ನಿಧನರಾಗಿದ್ದು ಪಿತೃ ವಿಯೋಗ ಹೊಂದಿದ್ದಾರೆ.
ಮೂಲತಃ ಹೊನ್ನಾವರ ತಾಲ್ಲೂಕಿನ ಜಲವಳಕರ್ಕಿಯ ಸಜ್ಜನ ಈಶ್ವರ ತಿಮ್ಮಪ್ಪ ನಾಯ್ಕ (77) ಅವರು ಯಲ್ಲಾಪುರದಲ್ಲಿ ವಯೋಸಹಜ ಕಾರಣದಿಂದ‌ ನಿಧನರಾದರು.
ಮೃತರು ಪತ್ನಿ ಪಾರ್ವತಿ ನಾಯ್ಕ, ಪುತ್ರ ಕಮಲಾಕರ ಸೇರಿದಂತೆ ಬಂಧು ಬಳಗ ಅಗಲಿದ್ದಾರೆ.
ಈಶ್ವರ ನಾಯ್ಕ ಅವರ ಅಗಲಿಕೆಗೆ ಶಾಸಕರಾದ ಶಿವರಾಮ ಹೆಬ್ಬಾರ ಹಾಗೂ ಅವರ ಕುಟುಂಬ ಸಂತಾಪ ವ್ಯಕ್ತಪಡಿಸಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬೋರ್ ಕೊರೆಸಿ ಕರಡೊಳ್ಳಿ ಗ್ರಾಮಸ್ತರ ದಾಹ ನೀಗಿಸಿದ ಬಾಲಕೃಷ್ಣ ನಾಯಕ್.ಬರೋಬ್ಬರಿ 3.5 ಇಂಚು ನೀರು.

ಪ್ರತಿಧ್ವನಿ ಯಲ್ಲಾಪುರ : ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ಸಾಮಾಜಿಕ …

Leave a Reply

Your email address will not be published. Required fields are marked *