Breaking News

ಅಣಲಗಾರ ರಸ್ತೆ ಕಳಪೆ ಕಾಮಗಾರಿ ಸಮಸ್ಯೆ ಬಗೆಹರಿಸುವಂತೆ ಶಾಸಕರಿಗೆ ಗ್ರಾಮಸ್ಥರ ಮನವಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಅಣಲಗಾರ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಅದನ್ನು ಸರಿಯಾಗಿ ಮಾಡಿಸಿಕೊಡಬೇಕು.‌ ದುರಸ್ತಿ ಆಗದೇ ಬಾಕಿ ಉಳಿದ ರಸ್ತೆಯ ಡಾಂಬರೀಕರಣಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.


ಈಗಾಗಲೇ 90 ಲಕ್ಷ ರೂ ವೆಚ್ಚದಲ್ಲಿ 2.5 ಕಿಮೀ ರಸ್ತೆ ಕಾಮಗಾರಿ ಆಗಿದ್ದು, ಅದು ಕಳಪೆಯಾಗಿದೆ. ಈಗಾಗಲೇ ಅಧಿಕಾರಿಗಳಿಗೆ ದೂರಲಾಗಿದೆ. ಗುತ್ತಿಗೆದಾರರಿಗೆ ಬಿಲ್ ತಡೆ ಹಿಡಿಯುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಮಳೆಗಾಲದ ನಂತರ ಮತ್ತೊಮ್ಮೆ ಡಾಂಬರೀಕರಣದ ಭರವಸೆಯನ್ನೂ ನೀಡಿದ್ದಾರೆ.


ಈ ಕುರಿತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಸೂಳಗಾರ ಕ್ರಾಸ್ ವರೆಗೆ ಮಾತ್ರ ರಸ್ತೆ ದುರಸ್ತಿ ಆಗಿದ್ದು, ಮುಂದೆ ಅಣಲಗಾರವರೆಗೆ ಡಾಂಬರೀಕರಣಕ್ಕೆ ಅನುದಾನ ನೀಡಬೇಕು. ನಾಳಶೇರ ರಸ್ತೆಯ ದುರಸ್ತಿಗೂ ಅನುದಾನ ಮಂಜೂರಿ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಹೆಬ್ಬಾರ್, ಕಳಪೆ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಬಿಲ್ ತಡೆ ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಮಳೆಗಾಲದ ನಂತರ ರಸ್ತೆ ಕಾಮಗಾರಿಗೆ ಅಗತ್ಯ ಅನುದಾನ ಮಂಜೂರಿ ಮಾಡುವುದಾಗಿ ಭರವಸೆ ನೀಡಿದರು.
ನಂದೊಳ್ಳಿ ಗ್ರಾ.ಪಂ ಮಾಜಿ ಸದಸ್ಯ ನಾರಾಯಣ ಭಟ್ಟ ಭಟ್ರಕೇರಿ, ಗ್ರಾಮಸ್ಥರಾದ ಸೀತಾರಾಮ‌ ಭಟ್ಟ ತೆಂಗಿನಜಡ್ಡಿ, ಬಾಲವಂದ್ರ ಭಟ್ಟ ಭಟ್ರಕೇರಿ, ಸುಬ್ರಹ್ಮಣ್ಯ ಭಾಗ್ವತ ಗುಡ್ನಮನೆ, ಶ್ರೀಧರ ಭಟ್ಟ ವೈದಿಕರಮನೆ ಇದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *