Breaking News

ಬೋರ್ ಕೊರೆಸಿ ಕರಡೊಳ್ಳಿ ಗ್ರಾಮಸ್ತರ ದಾಹ ನೀಗಿಸಿದ ಬಾಲಕೃಷ್ಣ ನಾಯಕ್.ಬರೋಬ್ಬರಿ 3.5 ಇಂಚು ನೀರು.


ಪ್ರತಿಧ್ವನಿ ಯಲ್ಲಾಪುರ : ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಕೊಡುಗೈ ದಾನಿ ಯುವ ನಾಯಕ ಬಾಲಕೃಷ್ಣ ನಾಯಕ್ ಅವರು ಕರಡೊಳ್ಳಿಯಲ್ಲಿ ಕೊಳವೆಬಾವಿ ಕೊರೆಸಿ ಗ್ರಾಮಸ್ಥರ ದಶಕಗಳ ದಾಹ ನೀಗಿಸಿದ್ದು ಗ್ರಾಮಸ್ಥರು ಧನ್ಯತೆ ಸಮರ್ಪಿಸಿದ್ದಾರೆ.


ಬಾಲಕೃಷ್ಣ ನಾಯಕ್ ಸದ್ಯ ಯಲ್ಲಾಪುರ – ಮುಂಡಗೋಡು ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಲಿತದಲ್ಲಿರುವ ಹೆಸರಾಗಿದೆ. ವಿಶೇಷವಾಗಿ ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕಡೆಗೆ ಹೆಚ್ಚಿನ ಗಮನ ಹರಿಸಿ ತಮ್ಮ ಸ್ವಂತ ಹಣದಿಂದ ಬೋರ್ ಕೊರೆಸಿ ದಣಿದ ಜೀವಗಳಿಗೆ ದಾಹ ನೀಗಿಸುತ್ತಿದ್ದಾರೆ. ಸಮಾಜಮುಖಿ ಕೆಲಸ ಕಾರ್ಯ ಮಾಡುತ್ತ ಬಹುಜನರ ವಿಶ್ವಾಸ ಗಳಿಸುತ್ತಿದ್ದಾರೆ.


ಕಳೆದ ಕೆಲವು ದಿನಗಳ ಹಿಂದೆ ಕರಡೊಳ್ಳಿ ಗ್ರಾಮಸ್ಥರು ಸಮಾಜ ಸೇವಕ ಬಾಲಕೃಷ್ಣ ನಾಯಕ್ ಅವರನ್ನು ಭೇಟಿಯಾಗಿ ಕುಡಿಯುವ ನೀರಿನ ಸಮಸ್ಯೆ ಹೇಳಿಕೊಂಡು ಕೊಳವೆ ಬಾವಿ ಹಾಕಿಸಿ ಕೊಡುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು. ಇದನ್ನು ಮನ್ನಿಸಿದ ಬಾಲು ನಾಯಕ್ ಕೊಂಚವು ತಡಮಾಡದೆ ಮೀನಾಮೇಷ ಎಣಿಸದೆ ಕೊಳವೆ ಬಾವಿ ಕೊರೆಸಿದರು.
ಪ್ರಾರಂಭದಲ್ಲಿ ಕೊರೆದ ಬೋರ್ ಯಶಸ್ವಿಯಾಗದೆ ನಿರರ್ಥಕವಾಗಿದ್ದು ನಂತರ ಕೊರೆದ ಕೊಳವೆ ಬಾವಿಯಲ್ಲಿ ಗಂಗೆ ಮಾತೆಯ ಕೃಪೆಯಿಂದ 3.5 ಇಂಚು ನೀರು ಚಿಮ್ಮಿದೆ.


ಮೊದಲು ಕೊರೆದ ಬೋರ್ ಯಶಸ್ವಿಯಾಗದಿದ್ದರು ಕೊಟ್ಟ ಭರವಸೆಗೆ ಚ್ಯುತಿ ಬಾರದಂತೆ ಕರಡೊಳ್ಳಿ ಗ್ರಾಮಸ್ಥರ ದಾಹ ನೀಗಿಸಿ ಸೈ ಎನಿಸಿಕೊಂಡು ಗ್ರಾಮಸ್ಥರ ಅಭಿಮಾನ ಗಳಿಸಿ ಗೌರವ ಸ್ವೀಕರಿಸಿದ್ದಾರೆ ಬಾಲಕೃಷ್ಣ ನಾಯಕ್.
ಗ್ರಾಮದ ಹಿರಿಯರು,ಮಹಿಳೆಯರು, ಯುವಕರು,ವಿದ್ಯಾರ್ಥಿಗಳು ಸಹ ನೀರೊದಗಿಸಿದ ಪುಣ್ಯ ಕಾರ್ಯಕ್ಕೆ ಬಾಲಕೃಷ್ಣ ನಾಯಕ್ ಅವರನ್ನು ಹರಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *