Breaking News

ಹೆಬ್ಬಾರ್ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ಗೋವಾ ಮಾಜಿ ಶಾಸಕ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸ್ಥಳೀಯ ಶಾಸಕರೂ, ಕಾರ್ಮಿಕ ಸಚಿವರೂ ಆದ ಶಿವರಾಮ ಹೆಬ್ಬಾರ ಅಪಾರ ಪ್ರಮಾಣದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ತಂದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಕಾರಣದಿಂದಲೇ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಗಳನ್ನು ಗಳಿಸಿದ್ದಾರಲ್ಲದೇ, ಪ್ರಸ್ತುತ ಚುನಾವಣೆಯಲ್ಲಿಯೂ ಅತ್ಯಧಿಕ ಮತಗಳ ಅಂತರದಿAದ ಗೆಲುವು ಸಾಧಿಸುವ ಆತ್ಮವಿಶ್ವಾಸ ಹೊಂದಿದ್ದಾರೆ ಎಂದು ಗೋವಾ ರಾಜ್ಯದ ಮಾಜಿ ಶಾಸಕ ಉಲ್ಲಾಸ ತುವೇಕರ್ ಹೇಳಿದರು.
ಅವರು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು.
ಹೆಬ್ಬಾರ ಅವರು ವಿಶೇಷವಾಗಿ ಮಾಡಿದ ಪಟ್ಟಣದ ಬಸ್ ನಿಲ್ದಾಣ, ಮಿನಿ ವಿಧಾನಸೌಧ, ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ, ಸರ್ಕಾರಿ ಆಸ್ಪತ್ರೆಯ ನವೀಕರಣ ಮತ್ತು ಸುಸಜ್ಜಿತ ವ್ಯವಸ್ಥೆಗಳ ಒದಗಣೆ ಹಾಗೂ ತಾಲೂಕಿನಾದ್ಯಂತ ನಿರ್ಮಿಸಿರುವ ಅನೇಕ ಸೇತುವೆ ಮತ್ತು ರಸ್ತೆ ಕಾಮಗಾರಿಗಳು ಅವರ ಸಾಧನೆಗೆ ಸಾಕ್ಷಿಯಾಗಿದ್ದು, ಮತದಾರರು ಹೆಬ್ಬಾರರ ಅಭಿವೃದ್ಧಿ ಕಾರ್ಯಗಳನ್ನು ಖಂಡಿತ ಮರೆಯಲಾರರು. ಈ ಹಿನ್ನೆಲೆಯಲ್ಲಿಯೇ ಹೆಬ್ಬಾರರ ಗೆಲುವು ನಿಶ್ಚಿತ ಎಂದ ಅವರು, ಎಲ್ಲ ಮತದಾರರೂ ತಮ್ಮ ಅಮೂಲ್ಯ ಮತವನ್ನು ಬಿಜೆಪಿಗೆ ನೀಡುವ ಮೂಲಕ ಹೆಬ್ಬಾರರ ಪ್ರಚಂಡ ವಿಜಯಕ್ಕೆ ಕಾರಣರಾಗಬೇಕು ಎಂದು ವಿನಂತಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಮಾತನಾಡಿ, ಈ ಬಾರಿಯ ಚುನಾವಣೆ ಹಿಂದೆAದಿಗಿAತಲೂ ವಿಶೇಷವಾಗಿದ್ದು, ಜಿಲ್ಲೆಯ ಎಲ್ಲ ೬ ವಿಧಾನಸಭಾ ಸ್ಥಾನಗಳನ್ನು ಗೆಲ್ಲುವುದಕ್ಕೆ ಅಗತ್ಯವಿರುವ ಸಂಘಟನಾತ್ಮಕ ಹೋರಾಟವನ್ನು ಬಿಜೆಪಿ ರೂಪಿಸಿದೆ. ಅಲ್ಲದೇ ರಾಜ್ಯದ ಬಹುಮತಕ್ಕೆ ಅಗತ್ಯವಾಗಿರುವ ಜಿಲ್ಲೆಯ ಕೊಡುಗೆ ಕುರಿತು ಚಿಂತಿಸಲಾಗುತ್ತಿದೆ. ಈ ನಡುವೆ ಬಿಜೆಪಿ ಪ್ರಭಾವವನ್ನು ಕುಗ್ಗಿಸಲು ಸುಳ್ಳು ಮತ್ತು ಕುತಂತ್ರಗಳನ್ನೇ ಕಾಂಗ್ರೆಸ್ ಪ್ರಚಾರದ ಸರಕನ್ನಾಗಿಸಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಮು ನಾಯ್ಕ, ಗೋವಾ ದಕ್ಷಿಣ ಜಿಲ್ಲೆಯ ಜಿ.ಪಂ. ಸದಸ್ಯ ಪರೀಷ್ ನಾಯ್ಕ ಸುದ್ಧಿಗೋಷ್ಟಿಯಲ್ಲಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *