Breaking News

ಯಲ್ಲಾಪುರ ಲಯನ್ಸ್ ಕ್ಲಬ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೇತ್ರ ಚಿಕಿತ್ಸಾ ಶಿಭಿರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ಲಯನ್ಸ್ ಕ್ಲಬ್ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ಸಂಸ್ಥೆ ಕಾರವಾರ ಸಂಯುಕ್ತಾಶ್ರಯದಲ್ಲಿ ದಿನಾಂಕ 29-2-24 ರಂದು ಯಲ್ಲಾಪುರದ ಅಡಿಕೆ ಭವನದಲ್ಲಿ “ಕಣ್ಣಿನಪೊರೆ ಉಚಿತ ತಪಾಸಣಾ ಶಿಭಿರ ಮತ್ತು ಉಚಿತ ಶಸ್ತ್ರ ಚಿಕಿತ್ಸಾ ಶಿಭಿರ ” ಹಮ್ಮಿಕೊಳ್ಳಲಾಗಿದೆ.

ಕಣ್ಣಿನ ಸಂಬಂಧ ಸಮಸ್ಯೆ ಇದ್ದವರು ಶಿಭಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಯಲ್ಲಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ಬೋರ್ಕರ್ ಮತ್ತು ತಂಡ ಕರೆನೀಡಿದ್ದಾರೆ.


ಲಯನ್ಸ್ ರೇವಣಕರ ಚಾರಿಟಬಲ್ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ವೈಧ್ಯರುಗಳಾದ ಡಾ|| ಮನೋಜ ಎಂ.ಎನ್ ಮತ್ತು ಡಾ|| ರಾಜಶೇಖರ ಡಿ. ಶಿಭಿರದಲ್ಲಿ ಪಾಲ್ಗೊಳ್ಳಲಿದ್ದಾರೆ.


ಸೂಚನೆ
⏯️ ಇದು ಕೇವಲ ಕಣ್ಣಿನ ಪೊರೆಯ ತಪಾಸಣಾ ಶಿಭಿರವಾಗಿದ್ದು ಇಲ್ಲಿ ಕನ್ನಡಕ ಪರೀಕ್ಷಿಸಲಾಗುವುದಿಲ್ಲ.
⏯️ ಶಿಭಿರಕ್ಕೆ ಬರುವವರು ರೇಶನ್ ಕಾಡ್೯ ಕಡ್ಡಾಯವಾಗಿ ತರಬೇಕು ಮತ್ತು ಮೊಬೈಲ್ ನಂಬರ್ ತಿಳಿಸಬೇಕು.
⏯️ ಕೇವಲ ಪೋರೆ ಇರುವ ವ್ಯಕ್ತಿಗಳ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.
⏯️ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರು ಅದೇ ದಿನ ಕುಮುಟದ ಲಯನ್ಸ್ ರೇವಣಕರ ಚಾರಿಟಬಲ್ ಕಣ್ಣಿನ ಆಸ್ಪತ್ರೆಗೆ ಬರಲು ಸಿದ್ದರಿರಬೇಕು. ಈ ಕುರಿತು ಮನೆಯವರಿಗೆ ಮೊದಲೆ ಮಾಹಿತಿ ನೀಡಿರಬೇಕು.
⏯️ ಸಕ್ಕರೆ ಕಾಯಿಲೆ, ರಕ್ತದೊತ್ತಡ, ದಮ್ಮು ಇತ್ಯಾಧಿ ರೋಗ ಇರುವವರುಬಾದಕ್ಕೆ ಸಂಬಂಧಿಸಿದ ಔಷದ ಜೊತೆಯಲ್ಲಿ ತರಬೇಕು.
⏯️ ತಾಂತ್ರಿಕ ಅಥವ ಆಡಳಿತಾತ್ಮಕ ಅಡಚಣೆಗಳಿಂದ ಶಸ್ತ್ರ ಚಿಕಿತ್ಸೆ ಮಾಡಲಾಗದಿದ್ದಲ್ಲಿ ಮುಂದಿನ ಶಿಭಿರದಲ್ಲಿ ಮಾಡಲಾಗುವುದು.
⏯️ ಶಸ್ತ್ರ ಚಿಕಿತ್ಸೆಗೆ ಒಳಪಡುವವರಿಗೆ ವಸತಿ, ಊಟ, ಉಪಹಾರ ಉಚಿತವಾಗಿ ನೀಡಲಾಗುತ್ತದೆ.
ಇಷ್ಟೆಲ್ಲಾ ಮಾಹಿತಿ ತಿಳಿದು ಶಿಭಿರದಲ್ಲಿ ಪಾಲ್ಗೊಳ್ಳುವವರು ಈ ಕೆಳಗಿನ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ
ಲಯನ್ ಸುರೇಶ್ ಬೋರ್ಕರ್ – 9449286395
ಲಯನ್ ಎನ್.ಎ.ಭಟ್ – 9483068862
ಲಯನ್ ಶೇಷಗಿರಿ ಪ್ರಭು – 9448225867
ಲಯನ್ ನಂದನ್ ಬಾಳಗಿ – 9448023597
ಲಯನ್ ಮಂಜುನಾಥ ನಾಯ್ಕ – 9481905197

ಶಿಭಿರದ ಸದುಪಯೋಗ ಪಡಿಸಿಕೊಳ್ಳಿ ಧನ್ಯವಾದಗಳು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *