Breaking News

ಇಲ್ಲಿ ಅಪಘಾತವಾದರೆ ಯಾರಮೇಲೆ ಕಾನೂನು ಕ್ರಮ ಸಾರ್ವಜನಿಕರ ಗಂಭೀರ ಪ್ರಶ್ನೆ.???

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಹಾದು ಹೋಗಿರುವ ಬಳ್ಳಾರಿ -ಕಾರವಾರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿಯಾಗಿ ದಡೂತಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿದ್ದು ಸಣ್ಣಪುಟ್ಟ ವಾಹನಗಳು ದ್ವಿಚಕ್ರ ವಾಹನಗಳು ಹಾಗು ಪಾದಚಾರಿಗಳಿಗೆ ಈ ಸ್ಥಳ ಯಮಪುರಿಗೆ ಕರೆದೊಯ್ಯಬಲ್ಲ ಸ್ಥಳಗಳಾಗಿ ಮಾರ್ಪಟ್ಟಿರುವುದು ದುರಂತವಾಗಿದೆ.


ಈ ಹಿಂದೆ ಪ್ರತಿಧ್ವನಿ ವೆಬ್ ನ್ಯೂಸ್ ಎಚ್ಚರಿಸಿ ಸುದ್ದಿ ಪ್ರಕಟಿಸಿತ್ತು ಆದರು ಗಂಭೀರವಾಗಿ ಪರಿಗಣುಸದ ಸಂಬಂಧಿಸಿದ ಇಲಾಖೆಗಳು ಪ್ರಾಣ ಬಲಿಗಾಗಿ ಕಾಯುತ್ತಿರುವರೇನೊ ಎಂಬ ಅನುಮಾನ ಕಾಡುತ್ತಿದೆ. ಎಲ್ಲಿಯಾದರು ಅಪಘಾತವಾದಾಗ ಆ ರಸ್ತೆಯಲ್ಲಿ ಅಪಾಯದ ಮುನ್ಸೂಚನೆ ಫಲಕ,ಹುಬ್ಬುಗಳನ್ನು ನಿರ್ಮಿಸುವ ಭಾರತೀಯ ಪುರಾತನ ಪದ್ದತಿಗೆ ಇನ್ನಾದರು ಇತಿಶ್ರೀ ಹೇಳಿ ಈ ಕೂಡಲೆ ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವ ಪದ್ದತಿಗೆ ಕೊನೆ ಹೇಳಬೇಕು ಹಾಗೊಂದು ವೇಳೆ ಎಚ್ಚರಿಸಿದ ಮೇಲು ವಾಹನಗಳನ್ನು ನಿಲ್ಲಿಸುಸರೆ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಬೇಕು.

ಪ್ರತಿಯೊಬ್ಬರ ಜೀವವು ಅಮೂಲ್ಯವಾದುದು ಇಂತಹ ಅಸಂಬದ್ದ ಘಟನೆಗಳಿಂದ ಅಪಘಾತ ಸಂಭವಿಸಿ ಜೀವ ಹಾನಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗಳನ್ನೆ ಹೊಣೆಗಾರರನ್ನಾಗಿಸಿ ದಂಡ ವಸೂಲಿ ಆಗಬೇಕು ಅಥವ ಆ ಇಲಾಖೆಯ ಮೇಲೆ ಕೊಲೆ ಪ್ರಕರಣ ದಾಖಲಾಗಬೇಕು ಎನ್ನುತ್ತಾರೆ ಪ್ರಜ್ಞಾವಂತರು.

ವಿಶೇಷವಾಗಿ ಯಲ್ಲಾಪುರದ ಟಿ.ಎಂ.ಎಸ್ ಪೆಟ್ರೋಲ್ ಬಂಕ್ ಸಮೀಪ, ಹಿಂದು ರುಧ್ರಭೂಮಿ ಎದುರು, ಹುಬ್ಬಳ್ಳಿ ರಸ್ತೆ ಕಾಮಾಕ್ಷಿ ಬಂಕ್ ಸಮೀಪ, ಸಂಕಲ್ಪ ಹೊಟೆಲ್ ಮುಂದಿನ ರಸ್ತೆಯಲ್ಲಿ, ಆದಿತ್ಯ ಬಾರ್ ಎದುರು,ಕೃಷಿ ಇಲಾಖೆ ಎದುರು, ಹೋಲಿ ರೋಜರಿ ಚಚ್೯ ಮುಂಭಾಗ ಹಾಗು ಇನ್ನೂ ಇತರೆಡೆಗಳಲ್ಲಿ ರಸ್ತೆ ಬದಿ ವಾಹನಗಳನ್ನು ನಿಲ್ಲಿಸುವುದರಿಂದ ಬಹುತೇಕ ವಾಹನ ಸವಾರರು ಪ್ರಾಣ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣ ನ್ಯಾಯಾಲಯಲ್ಲಿರುವಂತೆಯೆ ಮಾರಾಟಕ್ಕೆ ತೆರೆಮರೆಯ ಯತ್ನ.!!

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಸದ್ದುಮಾಡಿ ಬೆಂಗಳೂರಿನ ಭೂ ವ್ಯಾಜ್ಯಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಹುಟಕಮನೆ ಗುಡ್ಡ ನೆಲಸಮ ಅರಣ್ಯನಾಶ …

Leave a Reply

Your email address will not be published. Required fields are marked *