Breaking News

ಯಲ್ಲಾಪುರ ಕೆ.ಎಸ್.ಆರ್.ಟಿ.ಸಿ ಬಸ್‌ನಿಲ್ದಾಣದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕುಡಿಯುವ ನೀರೇ ಇಲ್ಲದೆ ಪ್ರಯಾಣಿಕರ ಪರದಾಟ

ಸಚಿವ ಶಿವರಾಮ್ ಹೆಬ್ಬಾರ್ ಪ್ರಯತ್ನದಲ್ಲಿ ನಿರ್ಮಾಣವಾದ ಯಲ್ಲಾಪುರದ ಸುಂದರ ಸುಸಜ್ಜಿತ ಬಸ್ ನಿಲ್ದಾಣ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ….

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ಹೈಟೆಕ್ ಬಸ್‌ನಿಲ್ದಾಣ ಸಚಿವ ಶಿವರಾಮ ಹೆಬ್ಬಾರ್ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿದ್ದು ನಂತರದ ದಿನಗಳಲ್ಲಿ ಕೆಲವೊಂದು ವ್ಯವಸ್ಥೆಗಳು ಸರಿಯಾದ ನಿರ್ವಹಣೆ ಇಲ್ಲದೇ ಸೊರಗುತ್ತಿರುವ ಕುರಿತು ಸುದ್ದಿ ಕೇಳಿಬರುತ್ತಿತ್ತು. ಸಮಸ್ಯೆ ಬಂದಾಗಲೆಲ್ಲಾ ಘಟಕದ ವ್ಯವಸ್ಥಾಪಕರೂ ಸಹ ಸ್ಪಂದಿಸಿ ಸಮಸ್ಯೆ ಬಗೆಹರಿಸುತ್ತಿದ್ದರು.

ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗಳಿಗೆ ಉಚಿತವಾಗಿ ನೀರೊದಗಿಸಲು ನಿಲ್ದಾಣದಲ್ಲಿ ನಿರ್ಮಾಣ ಮಾಡಲಾದ ಶುದ್ದ ಕುಡಿಯುವ ನೀರಿನ ಘಟಕ ಕಾರ್ಯ ನಿರ್ವಹಿಸದೆ ಸ್ಥಬ್ದವಾಗಿರುವುದು


ಇದೀಗ ಹೊಸ ಸಮಸ್ಯೆ ತಲೆ ಎತ್ತಿದೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗಳಿಗೆ ದಾಹ ತಣಿಸಲು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಉಚಿತ ಸೇವೆ ಒದಗಿಸಲಾಗುತ್ತಿತ್ತು. ಆದರೆ ಇತ್ತೀಚಿಗೆ ನೀರಿನ ಘಟಕ ದುರಸ್ಥಿಯಾಗಿದ್ದು ಅನೇಕ ದಿನಗಳಿಂದ ಕಾರ್ಯ ನಿರ್ವಹಿಸದೇ ಪ್ರಯಾಣಿಕರು ಮತ್ತು ಸಿಬ್ಬಂದಿಗಳಿಗೆ ಕುಡಿಯುವ ನೀರು ಲಭಿಸದೇ ಹಣ ತೆತ್ತು ನೀರು ಕೊಂಡುಕೊಳ್ಳಬೇಕಾದ ದುರವಸ್ಥೆ ಬಂದಿದೆ.

ಸದಾ ಜನರಿಂದ ತುಂಬಿ ತುಳುಕುವ ಯಲ್ಲಾಪುರದ ಬಸ್ ನಿಲ್ದಾಣ ಕುಡಿಯುವ ನೀರಿಗೆ ಬೇಕಿದೆ ಕಾಂಚಾಣ


ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಪ್ರಯಾಣಿಕರು ಸಾಕಷ್ಟು ಪ್ರಮಾಣದ ನೀರನ್ನು ಉಚಿತವಾಗಿ ಪಡೆಯಬಹುದಾಗಿತ್ತು. ಆದರೆ ಈಗ ಲೀ ನೀರಿಗೆ 2೦ರೂ ತೆತ್ತು ನೀರು ಖರೀದಿಸಬೇಕಾಗಿದೆ.  ಸರ್ಕಾರದ ಸೌಲಭ್ಯವಿದ್ದೂ ವ್ಯವಸ್ಥೆ ಸರಿಪಡಿಸದೇ , ಸ್ಥಳವನ್ನು ಸ್ವಚ್ಛವಾಗಿಟ್ಟುಕೊಳ್ಳದೇ ಹಾಳುಗೆಡವಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ತಂದಿದೆ. ಶೀಘ್ರವೇ ಸಮಸ್ಯೆ ಬಗೆಹರಿದು ಕಡಿಮೆ ಹಣದಲ್ಲಿ ಪ್ರಯಾಣಿಕರ, ಸಿಬ್ಬಂದಿಗಳ ದಾಹ ತಣಿಯುವಂತಾಗಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ನೀರು ಬಾರದಿರುವ ನಲ್ಲಿ ಗುಟ್ಕ ಎಲೆ ಅಡಿಕೆ ಜಗಿದು ಉಗಿದು ಅಸಹ್ಯವಾಗಿ ಕಾಣುವ ಸಿಂಕ್

ಆತ್ಮೀಯ ಓದುಗರ ಗಮನಕ್ಕೆ
ಪ್ರತಿಧ್ವನಿ ಯಲ್ಲಾಪುರ ನಿಮ್ಮಿಂದ ವಿಶೇಷ ಲೇಖನವನ್ನು ಆಹ್ವಾನಿಸುತ್ತಿದೆ. ಪ್ರಸಕ್ತ ವಿದ್ಯಮಾನಗಳು, ಪ್ರೇಕ್ಷಣೀಯ ಸ್ಥಳಗಳ ಮಾಹಿತಿ, ಇನ್ನಿತರ ಪ್ರಮುಖ ವಿಷಯಗಳ ಕುರಿತು ನೀವು ಬರೆಯಲು ಪ್ರಾರಂಭಿಸಿ ನಿಮ್ಮ ಲೇಖನವನ್ನು ನಮ್ಮ ಪ್ರತಿಧ್ವನಿ ಯಲ್ಲಾಪುರ ವೆಬ್ ನಲ್ಲಿ ಪ್ರಕಟಿಸಲಾಗುವುದು.
>> ನಿಮ್ಮ ಲೇಖನ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಮತ್ತು ಜಾಗೃತಗೊಳಿಸುವಂತಿರಬೇಕು.
>>>ಯಾವುದೆ ವ್ಯಕ್ತಿ, ಧರ್ಮ, ಜಾತಿ, ಸಂಘ ಸಂಸ್ಥೆಗಳ ಹಾಗು ರಾಜಕೀಯ ಪಕ್ಷ ಅಥವ ವ್ಯಕ್ತಿಗಳ ಭಾವನೆಗೆ ದಕ್ಕೆಯಾಗುವಂತಿರಬಾರದು.
>>>ಮೊಬೈಲ್ ನಲ್ಲೆ ಟೈಪ್ ಮಾಡಿ ಕಳಿಸಬೇಕು.
>>>ನಿಮ್ಮ ಹೆಸರು, ವಿಳಾಸ, ಮತ್ತು ನಿಮ್ಮ ಭಾವಚಿತ್ರ ಕಡ್ಡಾಯವಾಗಿ ಕಳಿಸಬೇಕು.
>>>ನಿಮ್ಮ ಲೇಖನವನ್ನು ” ಪ್ರತಿಧ್ವನಿ ಯಲ್ಲಾಪುರ ಅತಿಥಿ ಬರಹ” ದ ಅಡಿಯಲ್ಲಿ ಪ್ರಕಟಿಸಲಾಗುವುದು.
>>>ವಿ.ಸೂ<<< ನಿಮ್ಮ ಲೇಖನ ಯಾವಾಗ ಪ್ರಕಟಿಸಬೇಕು ಅಥವ ಬೇಡವೊ ಎಂಬ ನಿರ್ಧಾರ ಪ್ರತಿಧ್ವನಿ ಸಂಪಾದಕರ ಇಚ್ಚೆಯಾಗಿರುತ್ತದೆ.
ಮತ್ತೇಕೆ ತಡ ನೀವು ಬರೆಯಿರಿ
ಈ ವಾಟ್ಸಪ್ ಸಂಖ್ಯೆಗೆ ಕಳುಹಿಸಿ
9113096085, 8088255121

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *