Breaking News

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಯಲ್ಲಿ ಸಚಿವ ಹೆಬ್ಬಾರ್ ಮಿಂಚಿನ ಸಂಚಲನ

ಸಚಿವ ಹೆಬ್ಬಾರ್ ಪ್ರಯತ್ನದ ಫಲ ಕ್ಷೇತ್ರದಲ್ಲಿ ಎಣಿಸಲಾರದಷ್ಟು ರಸ್ತೆ ಅಭಿವೃದ್ಧಿ ಕಂಡಿವೆ ದಶಕಗಳ ಕನಸು ನನಸಾಗಿವೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…..


ಪ್ರತಿಧ್ವನಿ,ಯಲ್ಲಾಪುರ-ಕೇವಲ ನಗರ ಪಟ್ಟಣ ಪ್ರದೇಶಗಳ ಅಭಿವೃದ್ಧಿ ಒಂದನ್ನೆ ಗಮನದಲಿಟ್ಟುಕೊಳ್ಳದೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಕುರಿತು ಸರ್ಕಾರದ ವಿವಿಧ ಮಂತ್ರಿಗಳೊಡನೆ ಮತ್ತು ಮುಖ್ಯ ಮಂತ್ರಿಗಳೊಡನೆ ಕ್ಷೇತ್ರದ ಅವಶ್ಯಕತೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಅನುದಾನ ಬಿಡುಗಡೆ ಮಾಡಿಸುವಲ್ಲಿ ಸಚಿವ ಹೆಬ್ಬಾರ್ ಪ್ರಯತ್ನ ಅವಿರತವಾಗಿದೆ.
ತಾಲೂಕಿನ ಆನಗೋಡು ಪಂಚಾಯತ ವ್ಯಾಪ್ತಿಯ ಬರಗದ್ದೆ – ಸಾವಗದ್ದೆ ರಸ್ತೆ ನಿರ್ಮಾಣಕ್ಕೆ 5 ಕೋಟಿ ಹಣ ಮಂಜೂರಾಗಿದ್ದು ಸೋಮವಾರ ಸಚಿವ ಶಿವರಾಮ್ ಹೆಬ್ಬಾರ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.


ನಂತರ ಮಾತನಾಡಿದ ಅವರು ಇಂದು ಅಥವಾ ಯಾವುದೆ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಲಿದ್ದು ನನ್ನ ಕನಸಿನಂತೆ ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯ ಗಳಿಗೆ ತೊಡಕಾಗಬಾರದಾಗಿದೆ. ಈ ದಿಸೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಉತ್ತಮ ಕೆಲಸಗಳು ಸಾದ್ಯವಾಗಬೇಕಾದರೆ ಉತ್ತಮವಾದ ಗುತ್ತಿಗೆದಾರರ ಅವಶ್ಯಕತೆ ಇದೆ ಈ ದಿಸೆಯಲ್ಲಿ ಕಾಮಗಾರಿ ಗುತ್ತಿಗೆ ಉತ್ತಮರ ಕೈಗೆ ಸಿಕ್ಕಿರುವುದು ಸಂತಸವಾಗಿದೆ ಎಂದು ಹೇಳಿದರು.


ನಂತರ ಪಟ್ಟಣದ ಬಸ್ ನಿಲ್ಲಾಣದಿಂದ ಎಪಿಎಂಸಿ ವರೆಗಿನ ರಸ್ತೆ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು.


ಈ ಎರಡು ಕಾರ್ಯಕ್ರಮಗಳ ಸಂದರ್ಭದಲ್ಲಿ ಲೋಕೋಪಯೋಗಿ ಎಇಇ ವಿ.ಎಂ.ಭಟ್, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದದಾಸ್ ಉಪಾಧ್ಯಕ್ಷೆ ಶಾಮಿಲಿ ಪಾಟಣ್ಕರ್, ಸದಸ್ಯರಾದ ಸೋಮೇಶ್ವರ ನಾಯ್ಕ, ನಾಗರಾಜ್ ಅಂಕೋಲೆಕರ್ ಪುಷ್ಪಾ ನಾಯ್ಕ್, ಗಣಪತಿ ಮುದ್ದೇಪಾಲ್, ರವಿಭಟ್ ಬರಗದ್ದೆ, ರಾಮಣ್ಣ ಚಿಕ್ಯಾನಮನೆ, ಪಿ‌ಜಿ.ಭಟ್, ನಾಗೇಂದ್ರ ಭಟ್ , ನರಸಿಂಹ ಬೊಳಪಾಲ್, ಶಿರೀಷ್ ಪ್ರಭು ಇನ್ನಿತರ ಜನಪ್ರತಿನಿಧಿಗಳು ಹಿರಿಯ ನಾಗರಿಕರು , ಸಾರ್ವಜನಿಕರು ಕಾರ್ಯಕರ್ತರು ಇನ್ನೂ ಅನೇಕ ಮಂದಿ ಪಾಲ್ಗೊಂಡಿದ್ದರು.

ಆತ್ಮೀಯ ಓದುಗರ ಗಮನಕ್ಕೆ
ಪ್ರತಿಧ್ವನಿ ಯಲ್ಲಾಪುರ ನಿಮ್ಮಿಂದ ವಿಶೇಷ ಲೇಖನವನ್ನು ಆಹ್ವಾನಿಸುತ್ತಿದೆ. ಪ್ರಸಕ್ತ ವಿದ್ಯಮಾನಗಳು, ಪ್ರೇಕ್ಷಣೀಯ ಸ್ಥಳಗಳ ಮಾಹಿತಿ, ಇನ್ನಿತರ ಪ್ರಮುಖ ವಿಷಯಗಳ ಕುರಿತು ನೀವು ಬರೆಯಲು ಪ್ರಾರಂಭಿಸಿ ನಿಮ್ಮ ಲೇಖನವನ್ನು ನಮ್ಮ ಪ್ರತಿಧ್ವನಿ ಯಲ್ಲಾಪುರ ವೆಬ್ ನಲ್ಲಿ ಪ್ರಕಟಿಸಲಾಗುವುದು.
>> ನಿಮ್ಮ ಲೇಖನ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಮತ್ತು ಜಾಗೃತಗೊಳಿಸುವಂತಿರಬೇಕು.
>>>ಯಾವುದೆ ವ್ಯಕ್ತಿ, ಧರ್ಮ, ಜಾತಿ, ಸಂಘ ಸಂಸ್ಥೆಗಳ ಹಾಗು ರಾಜಕೀಯ ಪಕ್ಷ ಅಥವ ವ್ಯಕ್ತಿಗಳ ಭಾವನೆಗೆ ದಕ್ಕೆಯಾಗುವಂತಿರಬಾರದು.
>>>ಮೊಬೈಲ್ ನಲ್ಲೆ ಟೈಪ್ ಮಾಡಿ ಕಳಿಸಬೇಕು.
>>>ನಿಮ್ಮ ಹೆಸರು, ವಿಳಾಸ, ಮತ್ತು ನಿಮ್ಮ ಭಾವಚಿತ್ರ ಕಡ್ಡಾಯವಾಗಿ ಕಳಿಸಬೇಕು.
>>>ನಿಮ್ಮ ಲೇಖನವನ್ನು ” ಪ್ರತಿಧ್ವನಿ ಯಲ್ಲಾಪುರ ಅತಿಥಿ ಬರಹ” ದ ಅಡಿಯಲ್ಲಿ ಪ್ರಕಟಿಸಲಾಗುವುದು.
>>>ವಿ.ಸೂ<<< ನಿಮ್ಮ ಲೇಖನ ಯಾವಾಗ ಪ್ರಕಟಿಸಬೇಕು ಅಥವ ಬೇಡವೊ ಎಂಬ ನಿರ್ಧಾರ ಪ್ರತಿಧ್ವನಿ ಸಂಪಾದಕರ ಇಚ್ಚೆಯಾಗಿರುತ್ತದೆ.
ಮತ್ತೇಕೆ ತಡ ನೀವು ಬರೆಯಿರಿ
ಈ ವಾಟ್ಸಪ್ ಸಂಖ್ಯೆಗೆ ಕಳುಹಿಸಿ
9113096085, 8088255121

ನಿಮ್ಮ ಮಕ್ಕಳ ಉತ್ತಮ ನಡವಳಿಕೆ ಮತ್ತು ಶೈಕ್ಷಣಿಕ ಕಲಿಕೆ ಹಾಗು ಪಠ್ಯೇತರ ಚಟುವಟಿಕೆಲ್ಲಿ ಚುರುಕುತನ ಕಾಣಲು ಸಮ್ಮರ್ ಕ್ಯಾಂಪ್ ಗೆ ಇಂದೇ ನೊಂದಾಯಿಸಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *