Breaking News

ಯಲ್ಲಾಪುರ ಅರಣ್ಯ ಇಲಾಖೆಯ ಹಸಿರು ಕರ್ನಾಟಕ ಅಡಿಯಲ್ಲಿ “ಸಸ್ಯಕ್ಷೇತ್ರ ದರ್ಶನ”


ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ವಿಭಾಗದ ಅರಣ್ಯ ಇಲಾಖೆ ವತಿಯಿಂದ ಸೋಮವಾರ ಮಾದ್ಯಮಗಳಿಗಾಗಿ ” ಸಸ್ಯ ಕ್ಷೇತ್ರ ದರ್ಶನ ” ಎಂಬ ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಬೆಳೆದ ಸಸಿಗಳ ಸಂಪೂರ್ಣ ಮಾಹಿತಿ ನೀಡುವ ವಿನೂತನ ಕಾರ್ಯ ಹಮ್ಮಿಕೊಳ್ಳಲಾಗಿತ್ತು.


ಯಲ್ಲಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ‌ಹೆಗಡೆ ಮಾತನಾಡಿ ರಾಜ್ಯಾದ್ಯಂತ ಅರಣ್ಯ ಇಲಾಖೆ ಅಡಿಯಲ್ಲಿ 2023-24 ನೆ ಸಾಲಿನಲ್ಲಿ 5 ಕೋಟಿ ಸಸಿಗಳನ್ನು ನೆಡುವ ಗುರಿ ಹೊಂದಿದ್ದು ಯಲ್ಲಾಪುರ ವಿಭಾಗದಿಂದ 9.95 ಲಕ್ಷ ಸಸಿಗಳನ್ನು ನೆಡುವ ಪಣತೊಟ್ಟಿದ್ದೇವೆ.

ಹಸಿರು ಕರ್ನಾಟಕ ಯೋಜನೆ ಅಡಿಯಲ್ಲಿ ಬೀಜ ಬಿತ್ತನೆ ಅಭಿಯಾನ ಹಮ್ಮಿಕೊಂಡಿದ್ದು ಶಾಲಾ ಮಕ್ಕಳಿಂದ ಹಿಡಿದು ವಿವಿಧ ಸಂಘ ಸಂಸ್ಥೆಗಳ ಸಾರ್ವಜನಿಕರ ಸಹಕಾರದಿಂದ ಯಶಸ್ವಿಗೊಳಿಸಲು ಪ್ರಯತ್ನ ಸಾಗಿದೆ.

ಪ್ರತಿಧ್ವನಿ ವಿಡಿಯೋ ದೃಶ್ಯಾವಳಿ ವೀಕ್ಷಿಸಿ

ವಾತವರಣಕ್ಕೆ ಪೂರಕವಾದ ಸಸ್ಯಗಳನ್ನೆ ಬೆಳೆದಿದ್ದು ಅರಣ್ಯ ಇಲಾಖೆಯ ಸರ್ವ ಪ್ರತ್ನಕ್ಕೆ ನಾಗರಿಕರು ಸಹಕರಿಸಬೇಕಿದೆ ಎಂದರು.


ತಾಲೂಕಿನಲ್ಲಿ 6 ವಲಯಗಳಿಂದ 9 ಸಸ್ಯ ಪಾಲನ ಕ್ಷೇತ್ರಗಳಿದ್ದು಼ ಸ್ಥಳೀಯ ಹವಾಮಾನಕ್ಕೆ ಹೊಂದಿಕೆಯಾಗುವ 9.95 ಲಕ್ಷ ಸಸಿಗಳನ್ನು ಬೆಳೆಸಲಾಗಿದೆ.


ಪಟ್ಟಣದ ಸಬಗೇರಿ ಸಸ್ಯ ಕ್ಷೇತ್ರದಲ್ಲಿ ಸಸ್ಯಗಳ ಕುರಿತು ಮಹಿತಿ ನೀಡಿದರು.


ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆನಂದ್ ಹೆಚ್.ಎ ಮತ್ತು ಹಿಮವತಿ ಭಟ್, ವಲಯ ಅರಣ್ಯಾಧಿಕಾರಿ ಎಲ್.ಎ.ಮಠ, ಉಪ ವಲಯ ಅರಣ್ಯಾಧಿಕಾರಿಗಳಾದ ಸಂಜಯ್ ಬರಗೋಳಿ ಅಲ್ತಾಫ್ ಹಾಗೂ ಇನ್ನಿತರ ಅರಣ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *