Breaking News

ಮಂಗಗಳ ಹಾವಳಿ ಉದುರಿಬಿದ್ದ ಅಡಿಕೆ ಮಿಳ್ಳೆ ತಂದು ಅಳಲು ತೋಡಿಕೊಂಡ ನೊಂದ ರೈತರು


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಎಳೆ ಅಡಿಕೆಗಳನ್ನೇ ತಿಂದು ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟು ಮಾಡುತ್ತಿರುವ ಬಿಳಿ ಮಂಗಗಳ ಹತೋಟಿಗಾಗಿ ಮಂಚೀಕೇರಿ ಅರಣ್ಯಾಧಿಕಾರಿ ಅವರನ್ನು ಭೇಟಿ ಮಾಡಿ ರೈತರು ಮನವಿಯನ್ನು ಸಲ್ಲಿಸಿದರು.

ಉಮ್ಮಚ್ಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ ಮತ್ತು ತೋಟದಕಲ್ಲಳ್ಳಿಯ ಪ್ರಗತಿಪರ ರೈತ ವೆಂಕಟರಮಣ ಹೆಗಡೆ ಇವರ ನೇತ್ರತ್ವದಲ್ಲಿ ಅರಣ್ಯಾಧಿಕಾರಿಗಳನ್ನು ಭೇಟಿಯಾದ ಈ ತಂಡದಲ್ಲಿ ಉದಯ ಭಟ್ಟ ಕಲ್ಲಳ್ಳಿ, ನಾಗ್ಪತಿ ಹೆಗಡೆ ಶೀಗೆಮನೆ, ಸುಬ್ರಾಯ ಭಾಸ್ಕರ ಹೆಗಡೆ ಕನೇನಳ್ಳಿ, ಜಿ.ಟಿ.ಹೆಗಡೆ, ಪರಮೇಶ್ವರ ಹೆಗಡೆ, ಕೃಷ್ಣ ಹೆಗಡೆ, ವೆಂಕಣ್ಣ ಹೆಗಡೆ, ಸತೀಶ ಹೆಗಡೆ, ಉಮ್ಮಚ್ಗಿ ಗ್ರಾ.ಪಂ.ಸದಸ್ಯ ಗ.ರಾ.ಭಟ್ಟ ಮೊದಲಾದವರು ಉಪಸ್ಥಿತರಿದ್ದರು.

ರೈತರ ಮನವಿಯನ್ನು ಆಲಿಸಿದ ಮಂಚೀಕೇರಿ ವಲಯ ಅರಣ್ಯಾಧಿಕಾರಿ ಅಮಿತ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತಂದು, ಅವರ ಮಾರ್ಗದರ್ಶನದಂತೆ ಇನ್ನೊಂದು ವಾರದೊಳಗೆ ಮಂಗಗಳಿಂದ ಬೆಳೆ ಹಾನಿ ಅನುಭವಿಸುತ್ತಿರುವ ಉಮ್ಮಚ್ಗಿ ಭಾಗದ ರೈತರನ್ನು ಭೇಟಿ ಮಾಡಿ ಸೂಕ್ತ ಪರಿಶೀಲನೆ ಮಾಡುವುದಾಗಿ ತಿಳಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *