
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯು ಅ.3೦ರಂದು ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ಆಯೋಜನೆಗೊಂಡಿದ್ದು ಚುನಾವಣೆ ಮುಗಿದು ಸಚಿವರಾಗಿ, ಉಸ್ತುವಾರಿ ಸಚಿವರೂ ಆಗಿ ಅಧಿಕಾರ ವಹಿಸಿಕೊಂಡ ಭಟ್ಕಳ ಶಾಸಕ ಮಂಕಾಳು ವೈದ್ಯ ಯಲ್ಲಾಪುರ ತಾಲೂಕಿನ ವಿವಿಧ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಲಿದ್ದು ಉಸ್ತುವಾರಿ ಸಚಿವರು ಯಲ್ಲಾಪುರಕ್ಕೆ ಭೇಟಿ ನೀಡಲಿಲ್ಲ ಎಂಬ ಮಾತಿಗೆ ತೆರೆ ಎಳೆಯಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಮುಗಿದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ ಭಾಗ್ಯ ಪಡೆದ ಭಟ್ಕಳ ಶಾಸಕ ಮಂಕಾಳ ವೈದ್ಯ.

ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡ ನಂತರ ಬಹು ಸಮಯದವರೆಗೆ ಘಟ್ಟದ ಮೇಲಿನ ತಾಲೂಕುಗಳಿಗೆ ಭೇಟಿ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಕಾರ್ಯಕರ್ತರ ಆದಿಯಾಗಿ ಸಾರ್ವಜನಿಕರ ಅಭಿಪ್ರಾಯವಾಗಿತ್ತು.ನಂತರದ ದಿನಗಳಲ್ಲಿ ಕೆಲವೆಡೆ ಭೇಟಿ ನೀಡಿದ ಸಚಿವರು ಯಲ್ಲಾಪುರ ಕ್ಷೇತ್ರಕ್ಕೆ ಮಾತ್ರ ಬಾರದೇ ಅಚ್ಛರಿ ಮೂಡಿಸಿದ್ದರು.

ಒಂದು ಮೂಲಗಳ ಪ್ರಕಾರ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ , ಮಂಕಾಳ ವೈದ್ಯರಿಗೆ ಅತ್ಯಂತ ಆಪ್ತರಾಗಿದ್ದು ಹೆಬ್ಬಾರ್ ಕೋಟೆಯೊಳಗೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿತ್ತು. ಆದರೀಗ ತಾಲೂಕಾಡಳಿತ ಆಯೋಜಿಸಿರುವ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗೆ ಉಸ್ತುವಾರಿ ಸಚಿವರು ಆಗಮಿಸುತ್ತಿದ್ದು ಶಾಸಕ ಶಿವರಾಮ ಹೆಬ್ಬಾರ್ ಅವರೂ ಸಹ ಉಪಸ್ಥಿತರಿರಲಿದ್ದಾರೆಂಬ ಮಾಹಿತಿಯನ್ನು ಮಾಧ್ಯಮಗಳಿಗೆ ತಾಲೂಕು ಆಡಳಿತ ಮಾಹಿತಿ ರವನಿಸಿದೆ.
ವಿಶೇಷವಾಗಿ ಸಭೆಯ ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ ಎಂದು ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಒಂದು ವೇಳೆ ಕಾರಣಾಂತರದಿಂದ ಅಥವ ಪ್ರೋಟೋಕಾಲ್ ಗಾಗಿ ಈ ಆಹ್ವಾನವಾಗಿ ನಿಗದಿಪಡಿಸಿದಂತೆ ಕೆಡಿಪಿ ಸಭೆಗೆ ವೈದ್ಯರು ಬರದೆ ಹೋದರೆ ಕ್ಷೇತ್ರದಾದ್ಯಂತ ಬೇರೆ ರೀತಿಯ ಸಂದೇಶ ರವಾನೆಯಾಗುವ ಸಾದ್ಯತೆ ಇದ್ದು ಸಭೆಗೆ ಉಸ್ತುವಾರಿ ಸಚಿವರು ಆಗಮಿಸಲೆಬೇಕಾದ ಅನಿವಾರ್ಯತೆ ಇದೆ ಎನ್ನುತ್ತಿದ್ದಾರೆ ರಾಜಕೀಯ ವಿಮರ್ಶಕರು