




ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ – ಜುಲೈ 2 ರಂದು ಪಟ್ಟಣದ ಗಾಂಧಿ ಕುಟಿರದಲ್ಲಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರ ಸರ್ವ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳ ಕುರಿತು ಅಹವಾಲು ಸಲ್ಲಿಸಬಹುದಾಗಿದೆ ಎಂದು ತಹಶಿಲ್ದಾರ ಅಶೋಕ್ ಭಟ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಜನಸ್ಪಂದನಾ ಸಭೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಉಪಸ್ಥಿತಿಯಲ್ಲಿ ಜರುಗುತ್ತಿದ್ದು ರೈತರು,ಕಾರ್ಮಿಕರು ಸೇರಿದಂತೆ ತಾಲೂಕಿನ ಜನತೆಯ ಅಹವಾಲುಗಳ ಸ್ವೀಕಾರವಾಗಲಿದೆ ಆಯಾ ಇಲಾಖೆಯ ಪ್ರಮುಖಾಧಿಕಾರಿಗಳಿರುವುದರಿಂದ ಬಗೆಹರಿಯಬಹುದಾದ ಸಮಸ್ಯೆಗೆ ಸ್ಥಳದಲ್ಲೆ ಪರಿಹಾರ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.


