Breaking News

ಹಲವೆಡೆ ಕುಡಿಯುವ ನೀರಿನ ದಾಹ ನೀಗಿಸಿದ ಬಾಲಕೃಷ್ಣ ನಾಯಕ್ ನಡೆ ಇದೀಗ ಗ್ರಾಮೀಣ ಭಾಗದ ಶಾಲೆಗಳ ಕಡೆ.


ಪ್ರತಿಧ್ವನಿ ಯಲ್ಲಾಪುರ : ಕ್ಷೇತ್ರದಾದ್ಯಂತ ಮಿಂಚಿನ ವೇಗದಲ್ಲಿ ಸೇವಾ ಭಾವದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಕೊಡುಗೈ ದಾನಿ, ಬಿಜೆಪಿ ಯುವ ನಾಯಕ ಬಾಲಕೃಷ್ಣ ನಾಯಕ್ ಕುಡಿಯುವ ನೀರಿನ ದಾಹ ನೀಗಿಸಿ ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರಿಯಾಗಲು ಶೈಕ್ಷಣಿಕ ಸೇವಾ ಕಾರ್ಯಕ್ಕೆ ಇಳಿದಿದ್ದಾರೆ.

ಕಳೆದ ಕೆಲವು ತಿಂಗಳಲ್ಲಿ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸ್ವಂತ ಹಣದಲ್ಲಿ ಕೊಳವೆ ಬಾವಿಗಳನ್ನು ಹಾಕಿಸಿ ದಾಹ ನೀಗಿಸಿ ಹೆಸರಾಗಿದ್ದು ಇದೀಗ ಗ್ರಾಮೀಣ ಭಾಗದ ಶಾಲೆಗಳ 2500 ಕ್ಕು ಅಧಿಕ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಬ್ಯಾಗ್, ಪರಿಕರ ವಿತರಿಸುವ ಶೈಕ್ಷಣಿಕ ಯಜ್ಞಕ್ಕೆ ಮುಂದಾಗಿದ್ದು ಅದಕ್ಕಾಗಿ ಬಾಲಕೃಷ್ಣ ನಾಯಕ್ ಅಭಿಮಾನಿ ಬಳಗ ( ಬಾಲು ಬಾಯ್ಸ್ ) ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದು. ನಾಳೆಯ ಸೋಮವಾರದಿಂದ ವಿದ್ಯುಕ್ತವಾಗಿ ಪ್ರಾರಂಭವಾಗಲಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣದ ಹೋರಾಟಗಾರ ಮಂಜುನಾಥ ಹೆಗಡೆ ವಿರುದ್ದ ಷಡ್ಯಂತರ-ಜೀವ ರಕ್ಷಣೆಗೆ ಮೊರೆ.

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಹುಟಕಮನೆ ನೈಸರ್ಗಿಕ ಗುಡ್ಡ ನೆಲಸಮ,ಅರಣ್ಯ ನಾಶದ ಗಂಭೀರ ಪ್ರಕರಣದ ವಿಷಯದಲ್ಲಿ ಧ್ವನಿ ಎತ್ತಿ ಹೋರಾಟಕ್ಕಿಳಿದು …

Leave a Reply

Your email address will not be published. Required fields are marked *