Breaking News

ವಿನೂತನ ಮಾದರಿಯಲ್ಲಿ ಹೆಬ್ಬಾರ್ ಪುತ್ರನ ಮತ ಭೇಟೆ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ: ನಿರ್ಜೀವ ವಸ್ತುಗಳನ್ನು ಕೊಳ್ಳುವಾಗ ಅದರ ಗುಣಮಟ್ಟ ಮತ್ತು ಬಾಳಿಕೆಯ ಬಗ್ಗೆ ಕೂಲಂಕಷವಾಗಿ ಪರೀಕ್ಷಿಸುವ ನಾವು ದೇಶದ ಅಥವ ರಾಜ್ಯದ ಚುಕ್ಕಾಣಿ ಹಿಡಿದು ನಮ್ಮ ಭವಿಷ್ಯದ ದಿನಗಳನ್ನು ನಿರ್ಧರಿಸುವ ಶಾಸಕರನ್ನು ಅದೆಷ್ಟುಬಾರಿ ವಿಮರ್ಶಿಸಿ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಬೇಕಿದೆ. ಈ ದಿಸೆಯಲ್ಲಿ ಸಾಮನ್ಯರಲ್ಲಿ ಸಾಮಾನ್ಯರಂತೆ ಪ್ರತಿಯೊಬ್ಬ ನಾಗರಿಕನ ಕಷ್ಟ ಕಾರ್ಪಣ್ಯಗಳನ್ನು ನೇರವಾಗಿ ಹೇಳಿಕೊಳ್ಳಬಲ್ಲ ವ್ಯವಸ್ಥೆ ಕಲ್ಪಿಸಿರುವ ರಾಜ್ಯದ ಏಕೈಕ ನಾಯಕರೆಂದರೆ ಅದು ಸಚಿವ ಹೆಬ್ಬಾರ್ ಅವರಾಗಿದ್ದಾರೆ ಇಂತಹ ಜನಪರ ನಾಯಕರನ್ನು ಕ್ಷೇತ್ರದ ಜನತೆ ತಮ್ಮ ಆಶಿರ್ವಾದ ಸಮಾನ ಪವಿತ್ರ ಮತ ನೀಡುವ ಮೂಲಕ ಮತ್ತೊಮ್ಮೆ ತಮ್ಮ ಸೇವೆಗೆ ಅವಕಾಶ ಕಲ್ಪಿಸಬೇಕಿದೆ. ಪಟ್ಟಣದ ಅಭಿವೃದ್ಧಿ ಕಾರ್ಯಗಳೆ ಅವರ ಸಾಧನೆ ಸೇವೆ ಹೇಳಬಲ್ಲದ್ದಾಗಿದೆ ಮತ್ತು ವಿಶೇಷವಾಗಿ ಮಂಜುನಾಥ ನಗರದ ಅಭಿವೃದ್ಧಿ ಕಾರ್ಯಗಳೆ ಅವರಿಗೆ ಶ್ರೀರಕ್ಷೆಯಾಗಲಿದೆ ಎಂದು ಯುವ ನಾಯಕ ವಿವೇಕ್ ಹೆಬ್ಬಾರ್ ಹೇಳಿದರು.

ವಿನೂತನ ಮಾದರಿಯಲ್ಲಿ ವಿವೇಕ್ ಹೆಬ್ಬಾರ್ ಮತಯಾಚನೆ ಮತದಾನದ ಹಕ್ಕು ಪಡೆದ ಯುವ ಮತದಾರರನ್ನು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸ್ವಾಗತಿಸಿ ಮಾತನಾಡಿದ ದೃಶ್ಯಾವಳಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಅವರು ಪಟ್ಟಣದ ಮಂಜುನಾಥ ನಗರ ವಾಡ್೯ನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ 18 ತುಂಬಿ ಹೊಸ ಮತದಾರರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮತದಾನದ ಹಕ್ಕನ್ನು ತಮ್ಮದಾಗಿಸಿಕೊಂಡ ಯುವ ಮತದಾರರನ್ನು ವಿವೇಕ್ ಹೆಬ್ಬಾರ್ ಗುಲಾಬಿ ಹೂ ನೀಡಿ ಸ್ವಾಗತಿಸಿ ಮಾತನಡಿದರು.

ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಅಂಬೇಡ್ಕರ್ ರಚಿತ ಸಂವಿಧಾನದ ಅಡಿಯಲ್ಲಿ ಚುನಾವಣೆಗಳು ನಡೆಯುತ್ತಿದ್ದು ದೇಶ‌ನಡೆಸುವ ಉತ್ತಮರನ್ನು ಆಯ್ಕೆ ಮಾಡುವ ಪರಮಾಧಿಕಾರ ಮತದಾನವೆಂಬ ಕಾರ್ಯದಲ್ಲಿ ಇಟ್ಟಿದ್ದು 18 ತುಂಬಿದ ಯುವ ಮತದಾರರು ದೇಶದ ರಾಜ್ಯದ ಉಜ್ವಲ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕಿದೆ ಪರಮ ಪವಿತ್ರ ಪ್ರಜಾಪ್ರಭುತ್ವಕ್ಕೆ ಪಾದಾರ್ಪಣೆ ಮಾಡಿದ ತಮಗೆಲ್ಲಾ ಶುಭ ಸ್ವಾಗತ ಎಂದು ನೂತನ ಮತದಾರರಾದ ಯುವಕರಿಗೆ ಗುಲಾಭಿ ನೀಡಿ ಸ್ವಾಗತಿಸಿದರು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಏರುತ್ತಿದ್ದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ರಂಗು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದಾದ್ಯಂತ ಸಂಚರಿಸುತ್ತಿರುವ ಸಚಿವ ಹೆಬ್ಬಾರ್ ಬೆನ್ನಿಗೆ ನಿಂತಿರುವ ಅತಿ ದೊಡ್ಡ ಶಕ್ತಿ ಎಂದರೆ ಪುತ್ರ ವಿವೇಕ್ ಹೆಬ್ಬಾರ್. ತಂದೆಯಂತೆಯೆ ಜನರೊಂದಿಗೆ ಬೆರೆಯುತ್ತಿರುವ ವಿವೇಕ್ ವಿನೂತನ ಮಾದರಿಯಲ್ಲಿ ಮತಪ್ರಚಾರದೊಂದಿಗೆ ಗಮನ ಸೆಳೆದಿದ್ದಾರೆ.

ಮಂಜುನಾಥ ನಗರ ಸುತ್ತಮುತ್ತಲಿನ ನೂರಾರು ಸಂಖ್ಯೆಯ ಸಾರ್ವಜನಿಕರು ಕಾರ್ಯಕರ್ತರು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *