Breaking News

ಚಿರತೆಯೋ..ಹುಲಿಯೋ..ತಿಳಿಯದು ದಾಳಿಗೆ ಮಾಗೋಡು ಗ್ರಾಮದಲ್ಲಿ ಆಕಳ ಕರುವೊಂದು ಬಲಿಯಾಗಿದೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಯಲ್ಲಾಪುರ : ಅರಣ್ಯ ಇಲಾಖೆಯ ಯಲ್ಲಾಪುರ ವಿಭಾಗದ ಇಡುಗುಂದಿ ವಲಯದ ಮಾಗೋಡು ಗ್ರಾಮದಲ್ಲಿ ಹಲವಾರು ತಿಂಗಳುಗಳಿಂದ ಚಿರತೆಯೊಂದು ದನ ಮತ್ತು ನಾಯಿಗಳನ್ನು ಹಿಡಿದು ತಿನ್ನುತ್ತಿದ್ದ ಬಗ್ಗೆ ಪ್ರಕರಣಗಳು ಬಲವಾಗಿ ಕೇಳಿ ಬಂದಿತ್ತು. ಇದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮ ಅರಣ್ಯ ಸಮಿತಿ ಸದಸ್ಯರು ಹಲವಾರು ಬಾರಿ ಕೋಂಬಿಂಗ್ ಕಾರ್ಯಚರಣೆ ಮಾಡಿದ್ದರು ಆದರೆ ಚಿರತೆ ಸಿಗಲು ಇಲ್ಲ ಮತ್ತೆ ದಾಳಿ ನಿಲ್ಲಲಿಲ್ಲ.

ನಂತರ ಹಿರಿಯ ಅಧಿಕಾರಿಗಳ ಆದೇಶದಂತೆ ಏ,25 ರಂದು ಮಾಗೋಡು ಗ್ರಾಮದ ವ್ಯಾಪ್ತಿಯಲ್ಲಿ ಚಿರತೆಯನ್ನು ಸೆರೆ ಹಿಡಿಯಲು ಬೋನನ್ನು ಇಡಲಾಗಿತ್ತು,

ಅದೃಷ್ಟ ಎಂಬಂತೆ ಒಂದೇ ದಿನಕ್ಕೆ ಗ್ರಾಮಕ್ಕೆ ಜಾನುವಾರಿಗೆ ಕಂಟಕವಾಗಿದ್ದ ಚಿರತೆ ಬೋನಿಗೆ ಬಿದ್ದಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ಕಾನೂನಾತ್ಮಕ ಕ್ರಮ ಕೈಗೊಂಡು ಚಿರತೆಯನ್ನು ಹಿರಿಯ ಅರಣ್ಯ ಅಧಿಕಾರಿಗಳ ಆದೇಶದಂತೆ KTR (ಕಾಳಿ ಟೈಗರ್ ರಿಸರ್ವ್) ದಟ್ಟ ಅರಣ್ಯದಲ್ಲಿ ಬಿಡಲಾಗಿತ್ತು.

ಇದು ನಡೆದು ಸುಮಾರು ಎರಡು ತಿಂಗಳಿಂದ ಮಾಗೋಡು ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ಮಾನವ ಹಾಗೂ ವನ್ಯಜೀವಿ ಸಂಘರ್ಷ ಕಂಡುಬಂದಿರಲಿಲ್ಲ. ಆದರೆ ಜೂ,28 ರಂದು ಮಾಗೋಡು ಗ್ರಾಮದ ಹೆಬ್ಬಾರ್ ಮನೆಯ ನಾಗೇಶ್ ಭಾಗವತ್ ಎಂಬುವರ ಕೊಟ್ಟಿಗೆಯಲ್ಲಿದ್ದ ಆಕಳಿನ ಕರುವನ್ನು ಚಿರತೆಯು ಹಿಡಿದು ತಿಂದಿರುವ ಪ್ರಸಂಗ ನಡೆದಿದೆಬವಿಷಯ ತಿಳಿಯುತ್ತಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡಿರುತ್ತಾರೆ.

ಅರಣ್ಯ ಇಲಾಖೆಯ ಅಭಯ
ಗ್ರಾಮದ ಜನರು ಯಾವುದೇ ರೀತಿಯ ಭಯಭೀತರಾಗುವ ಅವಶ್ಯಕತೆ ಇಲ್ಲ, ಸದರಿ ಚಿರತೆಯ ಬಗ್ಗೆ ಅರಣ್ಯ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *