
ಯಲ್ಲಾಪುರ : ಮದುವೆಯಾಗಲು ಹೆಣ್ಣು ದೊರೆಯುತ್ತಿಲ್ಲ ಎಂಬ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡ ೩೫ವರ್ಷದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೆಲಂಗಾರದ ಕಿರಗಾರಿಮನೆ ಎಂಬಲ್ಲಿ ನಡೆದಿದೆ.

ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (೩೫) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ತನಗೆ ಮದುವೆಯಾಗಲು ಇನ್ನೂ ಹೆಣ್ಣು ಸಿಗುತ್ತಿಲ್ಲ ಹಾಗೂ ಮನಸ್ಸಿಗೆ ಇನ್ನಾವುದೋ ವಿಷಯವನ್ನು ಹಚ್ಚಿಕೊಂಡು ಮನನೊಂದು ತಾಲೂಕಿನ ಕಿರಗಾರಕೇರಿ ಬಿದ್ರೇಪಾಲ ಗುಡ್ಡದ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಹಾಗೂ ಈ ಆತ್ಮಹತ್ಯೆಯಲ್ಲಿ ಯಾವುದೇ ಸಂಶಯವಿಲ್ಲವೆAದು ಯಲ್ಲಾಪುರ ಠಾಣೆಯಲ್ಲಿ ದತ್ತಾತ್ರೇಯ ಅನಂತ ಗಾಂವ್ಕರ ಎಂಬುವರು ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಯಲ್ಲಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.