





ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ: ಬಿಜೆಪಿ ಸಂಸದರು ಕಳೆದ 30 ವರ್ಷಗಳಿಂದ ಏನೂ ಕೆಲಸ ಮಾಡಿಲ್ಲವೆಂದು ಜನ ಹೇಳುತ್ತಿದ್ದಾರೆ. ಈ ಬಾರಿ ಜನರ ಆಶೀರ್ವಾದ ಕಾಂಗ್ರೆಸ್ ಗಿದೆ. ಡಾ.ಅಂಜಲಿಗೆ ಒಂದ್ ಚಾನ್ಸ್ ಕೊಟ್ಟು ನೋಡೋಣ ಎಂಬ ಅಭಿಪ್ರಾಯ ಬರುತ್ತಿದೆ. ಕಾಂಗ್ರೆಸ್ ಪರ ಅಲೆ ಇದ್ದು, ಸರ್ಕಾರದ ಐದು ಗ್ಯಾರಂಟಿ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.

ಯಲ್ಲಾಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜನರ ಪರ ಕೆಲಸ ಮಾಡಬೇಕಾದರೆ ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂಬ ನಂಬಿಕೆ ಜನರಲ್ಲಿದೆ. 90% ಗ್ಯಾರಂಟಿ ಯೋಜನೆಗಳನ್ನ ಕವರ್ ಮಾಡಿದ್ದೇವೆ. ನೀತಿ ಸಂಹಿತೆಯಿಂದ ಅನುಷ್ಠಾನಕ್ಕೆ ಈಗ ಸಮಸ್ಯೆ ಆಗಿದೆ. ನೂರು ಪ್ರತಿಶತ ಜನರಿಗೆ ಯೋಜನೆ ತಲುಪಬೇಕೆಂಬ ಕಾರಣಕ್ಕೆ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ರಚನೆಯಾಗಿದೆ. ಯಾರಿಗೆ ತಲುಪಿಲ್ಲವೋ ಅಂಥವರ ಮಾಹಿತಿ ಪಡೆದು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿ ಪ್ರತಿ ಫಲಾನುಭವಿಗಳಿಗೆ ಮುಟ್ಟಿಸುತ್ತೇವೆ ಎಂದರು.
ಪತ್ರಕರ್ತ ಪ್ರಶ್ನೆ >>> ದಶಕಗಳ ಕನಸು ಹುಬ್ಬಳ್ಳಿ-ಅಂಕೋಲ ರೈಲ್ವೆ ಯೋಜನೆ ನೆನೆಗುದಿಗೆ ಬಿದ್ದಿದೆ ಸಂಸದರಾದರೆ ನಿಮ್ಮ ಪ್ರಯತ್ನ.?
ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಉದ್ಘಾಟಿಸಿದ ಯೋಜನೆ ಶತಾಯ ಗತಾಯ ಅನುಷ್ಟಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ
ಪತ್ರಕರ್ತ ಪ್ರಶ್ನೆ >>> ಸಂಸದರಾಗಿ ಆಯ್ಕೆಯಾದರೆ ನಿಮ್ಮಿಂದ ಜಿಲ್ಲೆಯ ಜನತೆ ಏನು ನಿರೀಕ್ಷಿಸಬಹುದು..?
ಸಂಸದರಾಗಿ ಆಶೀರ್ವಾದ ಸಿಕ್ಕರೆ ಸಂಸತ್ ನಲ್ಲಿ ಖಂಡಿತವಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾತಾಡುತ್ತೇನೆ. ಇದು ನನ್ನ ಕ್ಷೇತ್ರ. ಜನ ವಿಶ್ವಾಸದಿಂದ ಆಶೀರ್ವದಿಸಿದರೆ ಜಿಲ್ಲೆಯ ಸಮಸ್ಯೆಗಳಿಗೆ ಹೋರಾಟಕ್ಕೆ ಸಿದ್ಧಳಿದ್ದೇನೆ.
ಪತ್ರಕರ್ತ ಪ್ರಶ್ನೆ >>> ನೀವು ಗ್ಯಾರಂಟಿ ಯೋಜನೆಗಳ ಆಧಾರದ ಮೇಲೆ ಮತದಾರರ ಬಳಿ ಮತಯಾಚಿಸುತ್ತೀರ
ಗ್ಯಾರಂಟಿ ಯೋಜನೆ ಚುನಾವಣೆ ಸಮಯದಲ್ಲಿ ಕೊಡೋ ದುಡ್ಡಲ್ಲ. ಇದು ಜನರ ದುಡ್ಡು, ಅವರ ಹಣವನ್ನ ಅವರಿಗೆ ಕೊಡುತ್ತಿದ್ದೇವೆ. ಅದಾನಿ, ಅಂಬಾನಿಗೆ ಕೊಡೋ ದುಡ್ಡೂ ಅಲ್ಲ. ಆಪರೇಷನ್ ಲೋಟಸ್ ಹಣವಲ್ಲ. ಬಿಜೆಪಿ, ಜೆಡಿಎಸ್ ನಾಯಕರೂ ಕೂಡ ನಮ್ಮ ಗ್ಯಾರಂಟಿ ಯೋಜನೆ ಫಲಾನುಭವಿಗಳಾಗಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಯ ಆಧಾರದಲ್ಲಿ ಮತ ಕೇಳುತ್ತಿದ್ದೇವೆ. ಕೆಲಸವನ್ನೂ ಮಾಡಿದ್ದೇವೆ, ಅದರಿಂದಲೂ ಜನರ ಬಳಿ ಹೋಗುತ್ತಿದ್ದೇವೆ. ಚುನಾವಣೆ ಬಳಿಕ ಕೊಟ್ಟ ಭರವಸೆಯನ್ನ ಈಡೇರಿಸಿರುವುದರಿಂದ ಗ್ಯಾರಂಟಿ ಹೆಸರಿನಲ್ಲೂ ಮತ ಕೇಳುತ್ತಿದ್ದೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಪತ್ರಕರ್ತ ಪ್ರಶ್ನೆ >>> ಉಚಿತ ಯೋಜನೆಗಳ ಘೋಷಣೆ ಮತ್ತು ಅನುಷ್ಟಾನದಿಂದ ಆರ್ಥಿಕವಾಗಿ ಹಿನ್ನಡೆಯಾಗುವುದಿಲ್ಲವೆ
ಬಿಜೆಪಿಯವರು 15 ಲಕ್ಷ ಹಾಕುತ್ತೇವೆ; ಕಪ್ಪು ಹಣ ತರುತ್ತೇವೆ ಎಂದಿದ್ದರು. ಸಿಬಿಐ- ಇಡಿ ದುರ್ಬಳಕೆ ಮಾಡಿಕೊಂಡು ಬೇರೆಯವರಿಗೆ ಕಷ್ಟ ಕೊಟ್ಟರರು. ಅದು ತಪ್ಪು. ಬಿಜೆಪಿಯಲ್ಲಿದ್ದರೆ ಸ್ವಚ್ಛ, ಕಾಂಗ್ರೆಸ್ ಗೆ ಸೇರಿದರೆ ಕೆಟ್ಟವರು ಎನ್ನುವುದು ತಪ್ಪು ಎಂದರು.
ಪತ್ರಕರ್ತ ಪ್ರಶ್ನೆ >>> ದೆಹಲಿ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಈಗ ಅವರ ಪರ ಬ್ಯಾಟ್ ಬೀಸುತ್ತಿರುವುದೆಷ್ಟು ಸರಿ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಚುನಾವಣೆ ಸಮಯದಲ್ಲೇ ಯಾಕೆ ಬಂಧಿಸಬೇಕು? ಹಗರಣವಿದ್ದರೆ ತನಿಖೆ ಮಾಡಲಿ. ನಿಯಮದ ಪ್ರಕಾರ ಅವರು ನೋಟಿಸ್ ಗಳನ್ನ ಎದುರಿಸಿದ್ದಾರೆ. ಅವರು ಕೂಡ ದೇಶದ ನಾಗರಿಕ. ಅವರು 9 ಬಾರಿ ನೋಟಿಸ್ ಬಂದರೂ ಪ್ರತಿಕ್ರಿಯಿಸಿಲ್ಲ ಎಂದಾದರೆ ಇವರದೇ ಕೇಂದ್ರ ಸರ್ಕಾರವಿದೆ; ಗೃಹ ಸಚಿವರು, ದೆಹಲಿ ಪೊಲೀಸರು ಇದ್ದಾರೆ. 9 ನೋಟಿಸ್ ವರೆಗೆ ಯಾಕೆ ಬಂಧಿಸದೆ ಕಾಯಬೇಕಿತ್ತು? ಅದು ಕೂಡ ರಾಜಕಾರಣ ಅಲ್ವಾ? ಎಂದು ಪ್ರಶ್ನಿಸಿದರು.
ಪತ್ರಕರ್ತ ಪ್ರಶ್ನೆ >>> ಅಖಂಡ ಉತ್ತರಕನ್ನಡ ಒಡೆದು ಇಬ್ಬಾಗ ಮಾಡಿ ಘಟ್ಟದ ಮೇಲಿನ ತಾಲೂಕು ಗಳಿಗೆ ಪ್ರತ್ಯೇಕ ಜಿಲ್ಲೆ ಬೇಕು ಅದರಲ್ಲಿ ಶಿರಸಿ ಜಿಲ್ಲಾ ಕೇಂದ್ರವಾಗಬೇಂದು ಎಂಬುದು ನಿಮ್ಮ ಎದುರಾಳಿ ಅಭ್ಯರ್ಥಿ ಅವರ ಬಳಗದ ಪ್ರಯತ್ನವಾಗಿತ್ತು ಅದಕ್ಕೆ ನಿಮ್ಮ ಉತ್ತರ
ತಾಯಿಗೆ ಯಾವತ್ತೂ ಜೋಡಣೆ ಗೊತ್ತು, ಮನೆ ಒಡೆಯಲು ಗೊತ್ತಿಲ್ಲ. ಜಿಲ್ಲೆ ಒಡೆಯುವ ಬಗೆಗಿನ ಚರ್ಚೆ ಬಗ್ಗೆ ಎಂದೂ ಯಾವ ಯೋಚನೆಯನ್ನೂ ಮಾಡಿಲ್ಲ.
ಪತ್ರಕರ್ತ ಪ್ರಶ್ನೆ >>> ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿಮ್ಮ ಅಭಿಪ್ರಾಯ
ಶಾಸಕ ಶಿವರಾಮ ಹೆಬ್ಬಾರ್ ನನ್ನನ್ನ ಭೇಟಿಯಾಗಿಲ್ಲ. ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರಬಹುದು, ಆದರೆ ಗೊತ್ತಿಲ್ಲ ಎಂದರು.

ಒಂದೊಂದು ತಾಲೂಕಲ್ಲೂ ಒಂದೊಂದು ರೀತಿಯ ಸಮಸ್ಯೆಗಳಿವೆ. ಸಂಸದಳಾದರೆ ಶಾಸಕರು, ಸಚಿವರೊಂದಿಗೆ ಮಾತನಾಡಿ ತಾಲೂಕಾವಾರು ಸಮಸ್ಯೆಗಳನ್ನ ಪರಿಹಸರಿಲು ಚರ್ಚಿಸುತ್ತೇನೆ. ಬಿಜೆಪಿ ಸರ್ಕಾರವಿದ್ದರೂ ಖಾನಾಪುರದಲ್ಲಿ ಮಹಿಳೆಯರಿದ್ದರೂ ಎಂಸಿಎಚ್ ಆಸ್ಪತ್ರೆ ನಿರ್ಮಿಸಿದ್ದೇನೆ. ವೈದ್ಯೆಯಾಗಿ ಆರೋಗ್ಯದ ಬಗ್ಗೆ ಕಾಳಜಿ ನನ್ನ ಪ್ರಥಮ ಆದ್ಯತೆ. ಶಿಕ್ಷಣಕ್ಕೂ ಮಹತ್ವ ನೀಡುತ್ತೇನೆ ಎಂದರು. ಡಾ.ಅಂಜಲಿ ನಿಂಬಾಳ್ಕರ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ