
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : 2023-24ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಉನ್ನತ ಮೂರು ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಲ್ಯಾಪ್ಟಾಪ್ಗಳನ್ನು ಶಾಸಕ ಶಿವರಾಮ ಹೆಬ್ಬಾರ್ ವಿತರಿಸಿದರು.
ನಂದೊಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭವ್ಯ ಮಂಜುನಾಥ ಭಾಗ್ವತ (620/625), ಅನಂತಕುಮಾರ ಗೋಪಾಲ ಭಾಗ್ವತ (617/625), ಹಿತ್ಲಳ್ಳಿ ಸರ್ಕಾರಿ ಪ್ರೌಢಶಾಲೆಯ ಪ್ರಜ್ವಲ್ ಉದಯ ನಾಯ್ಕ (617/625) ಎಂಬ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮುಂದೆಯೂ ಸಹ ಉತ್ತಮ ವಿದ್ಯಾಭ್ಯಾಸ ಪಡೆದು ಪಾಲಕರು ಹಾಗೂ ಊರಿಗೆ ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಯುವನಾಯಕ ವಿವೇಕ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ, ದೈಹಿಕ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ, ಇಲಾಖೆಯ ಇನ್ನಿತರ ಅದಿಕಾರಿಗಳು, ಪೋಷಕರು ಉಪಸ್ಥಿತರಿದ್ದರು.



