
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ಇರುವ ದೊಡ್ಲ ಡೈರಿ ಪ್ರೈವೇಟ್ ಲಿಮಿಟೆಡ್ ನಲ್ಲಿ ವಿಶ್ವ ಪರಿಸರ ದಿನವನ್ನು ಆಚರುಸಲಾಯಿತು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರವಾರದ ಹಿರಿಯ ಅಧಿಕಾರಿ ಗಣಪತಿ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಂಸ್ಥೆ ಆವಾರದಲ್ಲಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪರಿಸರ ಮಾಲಿನ್ಯದ ಅಪಾಯ ಮತ್ತು ಅದನ್ನು ತಡೆಗಟ್ಟುವ ಬಗೆ ಹಾಗು ಹಸಿರು ಪರಿಸರವನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಉಪನ್ಯಾಸ ನೀಡಿದರು.

ದೊಡ್ಲ ಡೈರಿ ಕಿರವತ್ತಿ ಘಟಕದ ಸಹಾಯಕ ವ್ಯವಸ್ಥಾಪಕ ಪ್ರಕಾಶ್ ಡಿ ಉಪಸ್ಥಿತರಿದ್ದು ಪರಿಸರದ ಬಗೆಗಿನ ಮಾಲಿನ್ಯ ನಿಯಂತ್ರಣ ಕುರಿತು ಮಾತನಾಡಿದರು.

ದೊಡ್ಲ ಡೈರಿ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರದ ಅಧಿಕಾರಿ ಗಣಪತಿ ಭಟ್ ಅವರನ್ನು ಶಾಲು ಹೊದೆಸಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಂಪನಿಯ ಅಧಿಕಾರಿ ವರ್ಗ,ಸಿಬ್ಬಂದಿಗಳು ಉಪಸ್ಥಿತರಿದ್ದರು.