Breaking News

ಮುಂದುವರೆದ ಕಾಂಗ್ರೆಸ್ ಗೆಲುವಿನ ದಂಡಯಾತ್ರೆ ಕಿರವತ್ತಿ ಸೊಸೈಟಿ 12 ಸದಸ್ಯರು ಅವಿರೋದ ಆಯ್ಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಸಾರಥ್ಯದಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ – ತಾಲ್ಲೂಕಿನ ಕಿರವತ್ತಿ ಸೊಸೈಟಿ ಚುನಾವಣೆ ದಿನಾಂಕ2 ರಂದು ನಡೆದಿದ್ದು ಸೊಸೈಟಿಯ12 ಸದಸ್ಯರು ಅವಿರೋಧ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಗೆಲುವಿನ ದಂಡಯಾತ್ರೆ ಮುಂದುವರೆಸಿದೆ


ರಾಜ್ಯದಲ್ಲಿ ಇತ್ತೀಚೆಗೆ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು ಶುಭ ಶಕುನವೆಂಬಂತೆ ಯಲ್ಲಾಪುರ ಪಟ್ಟಣ ಪಂಚಾಯತ ಉಪಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದು ಇದೀಗ ಕಿರವತ್ತಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘ ನಿಯಮಿತ,


ಸೊಸೈಟಿ ಚುನಾವಣೆಯಲ್ಲಿಯು ಕಾಂಗ್ರೆಸ್ ಮೇಲುಗೈ ಸಾಧಿಸಿ 12 ಕಾಂಗ್ರೆಸ್ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ.
ಸಂಜಯ್ ವಿಠ್ಠಲ ಮಿರಾಶಿ, ಮುಬಾರಕ್ ಅಬ್ಬಿಗೆರೆ, ಹರುನ್ ಇಸ್ಮಾಯಿಲ್ ಶೇಖ್, ಪರಶುರಾಮ ಮಹದೇವ ಹರಿಜನ್, ಗಣಪತಿ ರಾಮ ಶಿರನಾಲ್ಕರ್, ನಾವು ಲಕ್ಕು ಪಟಕಾರೆ, ಮಹದೇವಿ ನಾಗೇಂದ್ರ ಮರಾಠಿ, ಹನುಮಂತ ಲಕ್ಷ್ಮಪ್ಪ ಸೋಮಾಪುರಕರ, ಫಾತೀಮ ಮೆಹಬೂಬ್ ಸಾಬ್ ಕಿರವತ್ತಿ, ಆಶಾ ಬಿ ಇಮಾಮ್ ಸಾಬ್ ತಟ್ಟೀಗೇರಿ, ಜಾಫರ್ ಹುಸೇನ್ ಸಾಬ್ ಒಂಟಿ ಹಾಗು ನೂರ್ ಅಹ್ಮದ್ ಸೈಯ್ಯದ್ ಅವಿರೋಧವಾಗಿ ಆಯ್ಕೆಯಾದ ಸದಸ್ಯರಾಗಿದ್ದಾರೆ.


ಭವಿಷ್ಯದಲ್ಲಿ ಕಿರವತ್ತಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘ ನಿಯಮಿತ, ಸೊಸೈಟಿ ಯಶಸ್ಸಿನ ಉತ್ತುಂಗಕ್ಕೆ ಏರಲಿ ಹಾಗು ಅವಿರೋಧ ಆಯ್ಕೆಯಾದ ಸದಸ್ಯರಿಗೆ ಯಲ್ಲಾಪುರ- ಮುಂಡಗೋಡು ವಿಧಾನಸಭೆ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಸ್ಥಳೀಯ ಮುಖಂಡ ವಿಜಯ್ ಮಿರಾಶಿ ಮತ್ತು ಮುರಳಿ ಹೆಗಡೆ, ರಹಮತ್ ಅಬ್ಬಿಗೆರೆ, ರಾಘವೇಂದ್ರ ಗೊಂದಿ, ಬಾಬು ಸಿದ್ದಿ, ವಿಲ್ಸನ್ ಫರ್ನಾಂಡೀಸ್, ಮಹೇಶ್ ಗೋಕರ್ಣ, ಬಾಬಾ ಶೇಖ್, ಹಾಗು ನೂರ್ ಅಹ್ಮದ್ ಶೇಖ್ ಅವರು ಅಭಿನಂಧಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *