Breaking News

ಯಲ್ಲಾಪುರ ನೂತನ ನಗರ ಜಡ್ಡಿಯ ಮನೆಯೊಂದಕ್ಕೆ ತಗುಲಿದ ಬೆಂಕಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ನೂತನ ನಗರ ಜಡ್ಡಿಯಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಹಲವು ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ನಿವೃತ್ತ ಶಿಕ್ಷಕ ವಾದಿರಾಜ್ ನಾಗೇಶ್ ಕುರುಡೇಕರ್ ಎಂಬುವರಿಗೆ ಸೇರಿದ ಹಂಚಿನ ಮನೆ ಇದಾಗಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದೆ. ಶನಿವಾರ ರಾತ್ರಿ ವೇಳೆ ಮನೆಯೊಳಗಿನಿಂದ ಹೊಗೆಬರಲು ಪ್ರಾರಂಭಿಸಿದ್ದು ಅಕ್ಕಪಕ್ಕದ ಮನೆಯವರಿಗೆ ಅನುಮಾನ ಬರಲು ಪ್ರಾರಂಭವಾಗಿದೆ. ನಂತರ ಹೊಗೆಯ ಪ್ರಮಾಣ ಹೆಚ್ಚಾಗಿ ಮನೆಯ ಹೊರ ಭಾಗಕ್ಕೆ ದಟ್ಟವಾದ ಹೊಗೆ ಕಾಣಿಸಿದಾಕ್ಷಣ ಮನೆಯೊಳಗೆ ಬೆಂಕಿ ಬಿದ್ದರುವುದು ಖಾತ್ರಿಯಾಗಿದೆ. ಆ ಕ್ಷಣಕ್ಕೆ ಏನು ತೋಚದೆ ಬಾಗಿಲನ್ನು ಒಡೆದು ಒಳ ನುಗ್ಗಿ ಆವರಿಸುತ್ತಿದ್ದ ಬೆಂಕಿಯನ್ನು ತಗ್ಗಿಸಲು ಸ್ಥಳೀಯ ಯುವಕರೆ ನೀರೆರಚಿ ತಣ್ಣಗಾಗಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರ ಕಾರ್ಯಾಚರಣೆಯಿಂದ ಸಂಪೂರ್ಣ ಬೆಂಕಿ ನಂದಿದ್ದು ಸಾಕಷ್ಟು ಗೃಹಬಳಕೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಸ್ಥಳೀಯ ಯುವಕರು ಅಕ್ಕಪಕ್ಕದ ಮನೆಯವರ ಸಮಯ ಪ್ರಜ್ಞೆಯಿಂದ ಬೆಂಕಿಯಿಂದಾಗಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಮನೆಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ನಿಖರವಾಗಿ ತಿಳಿಯದಿದ್ದರು ಯಲ್ಲಾಪುರ ಪೊಲೀಸರು, ಹೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಕಿಡಿಗೇಡಿಗಳ ಕೃತ್ಯವೋ ? ವಿದ್ಯುತ್ ಶಾಟ್೯ ಸರ್ಕ್ಯೂಟ್ ಕಾರಣವೋ ,? ತಿಳಿಯಬೇಕಿದೆ.

ಮನೆಯಲ್ಲಿ ತುಂಬಿದ್ದ ಗ್ಯಾಸ್ ಸಿಲಿಂಡರ್ ಗಳಿದ್ದು ಬೆಂಕಿ ಇನ್ನಷ್ಟು ಆವರಿಸಿದ್ದರೆ ಬಾರಿ ಅವಘಡ ಸಂಭವಿಸುವ ಸಾದ್ಯತೆ ಇತ್ತು. ಬೆಂಕಿ ನಂದಿಸುವಲ್ಲಿ ಶ್ರಮಿಸಿದ ಸ್ಥಳೀಯ ವಾಡ್೯ ಸದಸ್ಯ ಅಲಿ ಮತ್ತು ಸ್ಥಳೀಯರು ಹಾಗು ಅಗ್ನಿಶಾಮಕ ದಳದವರಿಗೆ ಜನತೆ ಕೃತಜ್ಞತೆ ಸಲ್ಲಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *