
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಪಟ್ಟಣದ ಪ್ರಮುಖ ವೃತ್ತಗಳಲ್ಲಿ ದೇಶ ಕಂಡ ಮಹನೀಯರ ಮೂರ್ತಿಗಳನ್ನು ಸ್ಥಾಪಿಸುವಂತೆ ಭಾರತೀಯ ಜನತಾ ಪಕ್ಷದ ತಾಲೂಕು ಯುವಮೋರ್ಚ ಅಧ್ಯಕ್ಷ ರಜತ್ ರಾಜೇಂದ್ರ ಬದ್ದಿ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಥಳೀಯ ಆಡಳಿತಕ್ಕೆ ಆಗ್ರಹಿಸಿದ್ದಾರೆ.

ಪ್ರತಿಷ್ಠಿತ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಯನ್ನು ಸಂಕಲ್ಪ ಸಮೀಪದ ಶಿವಾಜಿ ವೃತ್ತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಯನ್ನು ಹಾಗು ಬಸವೇಶ್ವರ ವೃತ್ತದಲ್ಲಿ ಕಾಯಕವೇ ಕೈಲಾಸವೆಂದ ಜಗಜ್ಯೋತಿ ಬಸವೇಶ್ವರರ ಮೂರ್ತಿಯನ್ನು ಅನಾವರಣ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಜನಾನುರಾಗಿ ವ್ಯಕ್ತಿ ದಯಾಕಾರಂತ್ ಅವರ ನೆನಪಿಗಾಗಿ ಪೊಲೀಸ್ ವೃತ್ತಕ್ಕೆ ದಯಾಕಾರಂತ ವೃತ್ತ ಎಂದು ನಾಮಕರಣ ಮಾಡಬೇಕೆಂದು ಸಂಬಂದಿಸಿದ ಇಲಾಖೆಗಳಿಗೆ ಪತ್ರಿಕಾ ಪ್ರಕಟಣೆಯೊಂದಿಗೆ ಮನವಿ ಮಾಡಿದ್ದಾರೆ.




Prathidvani Yellapura