Breaking News

ಯಕ್ಷಲೋಕದ ನಗಿಸುವ ಶ್ರೇಷ್ಠ ಕಲಾವಿದ “ಶ್ರೀಧರ ಭಟ್ಟ ಕಾಸರಗೋಡು “ಅವರಿಗೆ  ಶ್ರದ್ಧಾಂಜಲಿ


ಪ್ರತಿಧ್ವನಿ ಯಲ್ಲಾಪುರ : ಯಕ್ಷಗಾನದ ಹಾಸ್ಯಕಲಾವಿದ ಶ್ರೀಧರ ಭಟ್ಟ ಕಾಸರಕೋಡ ಅವರಿಗೆ ಭಾನುವಾರ‌ ಪಟ್ಟಣದ ಮೌನ ಗೃಂಥಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹಿರಿಯ ಅರ್ಥಧಾರಿ ಸಿ ಜಿ ಹೆಗಡೆ : ದ್ವಂದ್ವಾರ್ಥ, ಅಶ್ಲೀಲ ಹಾಸ್ಯದ ಮೂಲಕ ಜನರಂಜಿಸುವರೇ ಹೆಚ್ಚಿರುವ ಸಂದರ್ಭದಲ್ಲಿ, ಅಶ್ಲೀಲವಲ್ಲದ ರಾಜ ಹಾಸ್ಯದ ಮೂಲಕ ಜನರನ್ನು ಶಿಷ್ಟವಾಗಿ,ವಿಶಿಷ್ಟವಾಗಿ ನಗಿಸುವುದರಲ್ಲಿ ಕಾಸರಕೋಡ ನಿಸ್ಸೀಮರಾಗಿದ್ದರು. ಅವರ ಆಕಸ್ಮಿಕ ಅಕಾಲಿಕ ಮರಣ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದರು.

ತಾಲೂಕು ಹವ್ಯಕ ಸಂಘದ ಅಧ್ಯಕ್ಷ ಡಿ ಶಂಕರ ಭಟ್ಟ ಮಾತನಾಡಿ, ನವರಸದಲ್ಲಿ ಹಾಸ್ಯ ಪ್ರಧಾನ. ಅದರಲ್ಲೂ ರಾಜಹಾಸ್ಯ ಹೇಗೆ ಎನ್ನುವುದನ್ನು ರಂಗದಲ್ಲಿ ಕಾಸರಕೋಡ ತೋರಿಸಿ ಕೊಟ್ಟಿದ್ದರು ಎಂದರು.‌

ಯಕ್ಷಗಾನ ಅರ್ಥಧಾರಿ ಎಂ ಎನ್ ಹೆಗಡೆ ಹಳವಳ್ಳಿ ಮಾತನಾಡಿ, ಅದ್ಭುತ ಲಯ, ಪ್ರಸಂಗದ ಮೇಲೆ ಹಿಡಿತ, ಹೊಸತನ ಹೊಂದಿದ್ದ, ಸಾವಿರಾರು ಜನರನ್ನು ರಂಗದಲ್ಲಿ ನಗಿಸುತ್ತ, ಬೇರೆಯವರ ಸಂತೋಷಕ್ಕೆ ಕಾಸರಕೋಡ ಕಾರಣರಾಗಿದ್ದಾರೆ. ಪ್ರೇಕ್ಷಕರು ಮುಜುಗುರ ಪಡುವಂತಹ ಹಾಸ್ಯ ಮಾಡದೇ ಗೌರವಯುತ ಹಾಸ್ಯದ ಮೂಲಕ ಜನರ ರಂಜಿಸಿದ್ದರು ಎಂದರು.

ಮಾತೆಯರು ಭಗವದ್ಗೀತೆಯ 15 ನೇ ಅಧ್ಯಾಯ ಪಠಿಸಿ, ಶ್ರದ್ಧಾಂಜಲಿ ಸಲ್ಲಿಸಿದರು. ಕಲಾಭಿಮಾನಿಗಳು ಕಾಸರಕೋಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನುಡಿನಮನದ ಮೂಲಕ ಶೃದ್ಧಾಂಜಲಿ ಸಲ್ಲಿಸಿದರು.
ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ, ಕಲಾವಿದ ಸತೀಶ ಹೆಗಡೆ, ಯು ಕೆ ಬ್ಯಾಂಕ್ ಸಲಹೆಗಾರ ಪಿ ಜಿ ಹೆಗಡೆ ಕಳಚೆ, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಸುಬ್ರಾಯ ಬಿದ್ರೆಮನೆ, ಉಪಾಧ್ಯಕ್ಷ ಶ್ರೀಧರ ಅಣಲಗಾರ,
ಪತ್ರಕರ್ತ ಕೆ ಎಸ್ ಭಟ್ಟ ಆನಗೋಡ, ಪ್ರಮುಖರಾದ ನರಸಿಂಹ ಭಟ್ಟ ತಾಳಗುಪ್ಪ, ಶಿವಾನಂದ ಹೆಹಡೆ ಕೊಂಡದಕುಳಿ,ಶ್ರೀಶ ಹೆಗಡೆ, ಗುರು ಭಟ್ಟ ಜಂಬೆಸಾಲ್, ಎಂ. ಎಸ್ ಹೆಗಡೆ, ಪ್ರಶಾಂತ ಹೆಗಡೆ ಇತರರು ನಮನ ಸಲ್ಲಿಸಿದರು.

ಯಲ್ಲಾಪುರದ ಪ್ರತಿಭೆ ” ದತ್ತರಾಜ್ ಭಟ್ ” ಅಭಿನಯ ದಲ್ಲಿ ತಪ್ಪದೆ ವೀಕ್ಷಿಸಿ ಬೆಂಬಲಿಸಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಕೊಟ್ಟ ಮಾತಿನಂತೆ ನಡೆದು ಡೊಮಗೇರಿ ಮಕ್ಕಳಿಗೆ ಅಂಗನವಾಡಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಕಳೆದ ವರ್ಷ ಡೋಮಗೇರಿ ಗೌಳಿವಾಡ ಕ್ರಾಸ್ ಬಳಿ ದುರ್ಘಟನೆಯೊಂದು ಸಂಭವಿಸಿತ್ತು. ಡೋಮಗೇರಿ ಅಂಗನವಾಡಿಯಿಂದ ಮಕ್ಕಳನ್ನು ಮನೆಗೆ …

Leave a Reply

Your email address will not be published. Required fields are marked *