Breaking News

ಮಳೆಯಲ್ಲಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತೆ ಇರಲಿ- ತಹಶಿಲ್ದಾರ ಗುರುರಾಜ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಪ್ರಸಕ್ತ ವರ್ಷ ಅಕಾಲಿಕ ಮಳೆ ಪ್ರಾರಂಭವಾಗಿದ್ದು ಬರಲಿರುವ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಂತಹ ಸಮಸ್ಯೆಗಳು ಉದ್ಭವವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. 2019 ಹಾಗೂ 2021 ನೇ ಸಾಲಿನಲ್ಲಿ ಬಿದ್ದ ಬಾರೀ ಪ್ರಮಾಣದ ಮಳೆಯಿಂದಾಗಿ ತಾಲೂಕಿನ ಕಳಚೆ, ತಳಕೇಬೈಲು, ಅರಬೈಲು, ದಬ್ಗುಳಿ ಮುಂತಾದೆಡೆಗಳಲ್ಲಿ ಭೂಕುಸಿತ ಉಂಟಾಗಿದ್ದು ಜನಜೀವನ ತೀರಾ ಅಸ್ತವ್ಯಸ್ತವಾಗಿದ್ದನ್ನು ಮನಗಂಡಿದ್ದೇವೆ. ಇದರ ಆಧಾರದ ಮೇಲೆ ಬರಲಿರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳಿಗೂ ಮುನ್ನಾ ನಮ್ಮ ಕೈಲಾದ ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ ಎಂದು ತಾಲೂಕು ದಂಡಾಧಿಕಾರಿ ಗುರುರಾಜ್ ಹೇಳಿದರು.


ಅವರು ಪಟ್ಟಣದ ತಾಲೂಕಾ ಆಡಳಿತ ಸೌಧದಲ್ಲಿ ಪ್ರಕೃತಿ ವಿಕೋಪ ಮುಂಜಾಗ್ರತಾ ರಕ್ಷಣಾ ಕಾರ್ಯಗಳ ಕುರಿತು ಅಧಿಕಾರಿಗಳೊಮದಿಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಹೇಳಿದರು.
ತಾಲೂಕಿನ 15 ಗ್ರಾಮಪಂಚಾಯತ ಹಾಗೂ 1 ಪಟ್ಟಣ ಪಂಚಾಯತಕ್ಕೆ ನೋಡಲ್ ಅಧಿಕಾರಗಳ ನೇಮಿಸಿದ್ದು ಅವರು ಮಳೇಗಾಲ ಮುಗಿಯುವವರೆಗೆ ಕೇಂದ್ರಸ್ಥಾನ ಬಿಡದಂತೆ ಸೂಚಿಸಲಾಗಿದೆ. ತಾಲೂಕಿನ ಕಿರವತ್ತಿ ಮತ್ತು ಮದನೂರು ಭಾಗಗಳಲ್ಲಿ ಕೂರಿಗೆ ಭಿತ್ತನೆ ಕಾರ್ಯ ಪ್ರಾರಂಭವಾಗಿದ್ದು ಬೀಜದ ಕೊರತೆಯಾಗದಂತೆ ಮತ್ತು ತಾಲೂಕಿನಲ್ಲಿ ಭತ್ತ, ಜೋಳ, ಹತ್ತಿ ಬೀಜಗಳನ್ನು ದಾಸ್ತಾನಿರಿಸಿಕೊಂಡು ರಸಗೊಬ್ಬರ, ಕೀಟನಾಶಕಗಳನ್ನೂ ಶೇಖರಿಸಿಕೊಟ್ಟುಕೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಲಾಯಿತು.
ದನಕರುಗಳಿಗೆ ಮಳೆಗಾಲದಲ್ಲಿ ಗಂಟಲುಬೇನೆ ಹಾಗೂ ಇನ್ನಿತರೆ ಸಾಂಕ್ರಾಮಿಕ ಸೋಂಕುಗಳು ತಗುಲದಂತೆ ಮುನ್ನೆಚ್ಚರಿಕೆ ಲಸಿಕೆಗಳನ್ನು ಹಾಕಲು ಸಿದ್ಧತೆ ಮಾಡಿಕೊಳ್ಳಲು ಸಹಾಯಕ ಪಶುಸಂಗೋಪನಾ ನಿರ್ದೇಶಕರಿಗೆ ಸೂಚಿಸಲಾಯಿತು.
ಡೆಂಗ್ಯೂ, ಚಿಕನ್‌ಗುನ್ಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು ಅವುಗಳಿಗೆ ಸಂಬAಧಿಸಿದ ಔಷಧಗಳನ್ನು ಸಾಕಷ್ಟು ಪ್ರಮಾಣದಲ್ಲಿ ಶೇಖರಿಸಿಟ್ಟುಕೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಬೇಸಿಗೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಹಲವೆಡೆ ಸಾರ್ವಜನಿಕ ರಸ್ತೆ, ಚರಂಡಿಗಳನ್ನು ಅಗೆಯಲಾಗಿದ್ದು ಕಾಮಗಾರಿಗಳು ಪೂರ್ಣವಾಗದಿರುವುದು ನೀರು, ರಸ್ತೆಯ ಮೇಲೆಲ್ಲಾ ಹರಿಯುವಂತಾಗಿದೆ. ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಲು ಪ.ಪಂ ಅಧಿಕಾರಿಗಳಿಗೆ ಸೂಚಿಸಲಾಯಿತು.
ಉಳಿದಂತೆ ವಿದ್ಯುತ್ ಇಲಾಖೆ, ರಾಷ್ಟಿಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ, ಅರಣ್ಯ ಇಲಾಖೆ, ಅಗ್ನಿಶಾಮಕ, ಪೊಲೀಸ್, ಇನ್ನಿತರ ಪ್ರಮುಖ ಇಲಾಖೆಗಳ ಅಧಿಕಾರಿಗಳಿಗೆ ಆಯಾ ಇಲಾಖೆಗೆ ಸಂಬಂಧಿಸಿದ ಕಾರ್ಯಚಟುವಟಿಕೆಯನ್ನು ವಿಶೇಷವಾಗಿ ಮಳೆಗಾಲಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು. ತಾಲೂಕಾಡಳಿತದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು ಮಳೆಗಾಲ ಪೂರ್ವ ತೆಗೆದುಕೊಳ್ಳಬಹುದಾದ ಮುನ್ನೆಚ್ಛರಿಕಾ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *