Breaking News

ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಪಕ್ಷದಿಂದ ಉಚ್ಚಾಟಿಸಲಿ- ಜಗನ್ನಾಥ ರೇವಣ್ಕರ್..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪು

ಯಲ್ಲಾಪುರ : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ಕುರಿತಾದ ಹೇಳಿಕೆಯನ್ನು ಖಂಡಿಸಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಸಮಿತಿಯ ಅಡಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯೂ ಸೇರಿದಂತೆ ವಿವಿಧ ಸಂಘಟನೆಗಳ ಅಡಿಯಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರದ ಗೃಹ ಸಚಿವ ಗೌರವ ಸ್ಥಾನದಲ್ಲಿದ್ದುಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕುರಿತು ಹಗುರವಾದ ಹೇಳಿಕೆನ್ನು ನೀಡಿದ್ದಾರೆ. ಅವರ ಹೇಳಿಕೆಯಂತೆ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳಿದಷ್ಟು ಸಲ ದೇವರ ಹೆಸರು ತೆಗೆದುಕೊಂಡಿದ್ದರೆ ಏಳೇಳು ಜನ್ಮಕ್ಕೂ ಸ್ವರ್ಗದಲ್ಲೇ ಸ್ಥಾನ ಸಿಗುತ್ತಿತ್ತು ಎಂಬ ಕುಹಕದ ನುಡಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಅವಮಾನಿಸಿದಂತಿದೆ. ಇದು ಒಬ್ಬ ಗೃಹಸಚಿವರಿಗೆ ಶೋಭೆ ತರುವಂತಹದ್ದಲ್ಲ. ಇಂತಹ ಹೇಳಿಕೆಯನ್ನು ಖಂಡಿಸುವುದಲ್ಲದೇ ಸಂವಿಧಾನ ಶಿಲ್ಪಿಗೆ ಅವಮಾನಿಸಿದ ಗೃಹ ಸಚಿವರನ್ನು ಕೂಡಲೇ ಮಂತ್ರಿ ಸ್ಥಾನದಿಂದ ಉಚ್ಛಾಟಿಸುವ ಜೊತೆಯಲ್ಲಿ ಲೋಕಸಭೆ ಸದಸ್ಯತ್ವವನ್ನೂ ಕೂಡ ರದ್ದುಗೊಳಿಸಬೇಕೆಂದು ರಾಷ್ಟ್ರಪತಿಗಳಿಗೆ ತಲುಪಿಸುವಂತೆ ತಹಸೀಲ್ದಾರರ ಮೂಲಕ ಮನವಿಯಲ್ಲಿ ಕೋರಲಾಗಿದೆ.

ಮನವಿ ಸ್ವೀಕರಿಸಿದ ತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ್ ಸಂಬಧಿಸಿದವರಿಗೆ ಮನವಿ ತಲುಪಿಸಲಾಗುವುದೆಂದು ಪ್ರತಿಕ್ರಿಯಿಸಿದರು. ಈ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಜಗನ್ನಾಥ ರೇವಣಕರ, ದಲಿತ ಸಂಘಟನೆಗಳ ಪ್ರಮುಖರಾದ ಮಾರುತಿ ಬಿ ವಡ್ಡರ್, ಅನಿಲ್ ಮರಾಠೆ, ಕಲ್ಲಪ್ಪ ಹೋಳಿ, ಪೂಜಾ ನೇತ್ರೇಕರ, ಉಲ್ಲಾಸ ಶಾನಭಾಗ , ಸುನಿಲ್ ಕಾಂಬ್ಳೆ, ಫಕೀರಪ್ಪ ಹರಿಜನ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ದೇಶಕ್ಕೆ ಪರಮೋಚ್ಚ ಗ್ರಂಥವಾದ ಸಂವಿಧಾನ ಕೊಟ್ಟಂತಹ ಮಹಾನ್ ಪುರುಷ ಡಾ,ಬಾಬಾ ಸಾಹೆಬ್ ಅಂಬೇಡ್ಕರ್ ಅವರು. ಅಂತಹ  ಮಹಾನ್ ಚೇತನ ನೀಡಿದ ಸಂವಿಧಾನದ ಬಲದಿಂದಲೆ ಅಮಿತ್ ಶಾ ಸಹಿತ ರಾಷ್ಟ್ರದ ಗೃಹ ಸಚಿವ ಸ್ಥಾನ ಅನುಭವಿಸಲು ಸಾದ್ಯವಾಗಿದೆ ಅಂತಹ ದೈವಾಂಶ ಸಂಬೂತರೆನಿಸಿಕೊಂಡು ಕೋಟ್ಯಾಂತರ ಭಾರತೀಯರ ಹೃದಯದಲ್ಲಿ ನೆಲೆಸಿರುವ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿರುವ ಅಮಿತ್ ಶಾ ಒಂದು ಕ್ಷಣ ಪದವಿಯಲ್ಲಿ ಮುಂದುವರೆಯಲು ಅನರ್ಹ  ಮತ್ತು ಅಂತಹ ವ್ಯಕ್ತಿಯನ್ನು ಪಕ್ಷದಲಿಟ್ಟುಕೊಂಡು ಅಧಿಕಾರ ನೀಡುವುದು ಸಹ ಅಂಬೇಡ್ಕರ್ ಅವರಿಗೆ ಅಗೌರವ ತೋರಿದಂತೆ ತಕ್ಷಣ ಪಕ್ಷದಿಂದಲು ಉಚ್ಚಾಟಿಸಬೇಕಿದೆ. – ಜಗನ್ನಾಥ ರೇವಣ್ಕರ್, ಅಧ್ಯಕ್ಷರು, ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ, ಯಲ್ಲಾಪುರ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *